ಅಭಿಷೇಕ್-ಅವಿವಾ ಬೀಗರೂಟದಲ್ಲಿ ನೂಕು ನುಗ್ಗಲು, ಪೊಲೀಸರಿಂದ ಲಾಠಿಚಾರ್ಜ್
ಮಂಡ್ಯ ಜೂನ್ 16: ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರ ವಿವಾಹ ಬೀಗರ ಔತಣ ಕೂಟದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡು ನವ ವಧು-ವರರನ್ನು ಆಶೀರ್ವದಿಸಿದರು. ಈ ವೇಳೆ ಊಟಕ್ಕೆ ನೂಕು ನುಗ್ಗಲು ಉಂಟಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ತಡೆದ ಪ್ರಸಂಗ ನಡೆದಿದೆ.
ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿಯ ಸುಮಾರು 15 ಎಕರೆ ವಿಶಾಲ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಿ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಮಂಡ್ಯ ಅಲ್ಲದೆ, ನೆರೆ ಜಿಲ್ಲೆಗಳಿಂದ ಸಹಸ್ರಾರು ಮಂದಿ ಅಭಿಮಾನಿಗಳು ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಸಸ್ಯಾಹಾರಿ ಮತ್ತು ಮಾಂಸಹಾರಿ ಭೋಜನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

ಬೆಳಗ್ಗೆ ಸುಮಾರು 11.15ಕ್ಕೆ ನವ ದಂಪತಿಗಳಾದ ಅಭಿಷೇಕ್ ಹಾಗೂ ಅವಿವಾ ಆಗಮಿಸಿದರು. ಬಳಿಕ ವೇದಿಕೆ ಏರಿ ಅಭಿಮಾನಿಗಳಿಗೆ ಹಸ್ತಲಾಘವ ಮಾಡಿದರು. ನಂತರ ಊಟದ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ನೆರೆ ಜಿಲ್ಲೆಗಳಿಂದ ಸಹಸ್ರಾರು ಮಂದಿ ಅಂಬರೀಶ್ ಅಭಿಮಾನಿಗಳು ಔತಣ ಕೂಟಕ್ಕೆ ಬಂದಿದ್ದರು.
ಊಟದ ವ್ಯವಸ್ಥೆ ಮಾಡುವ ಸಂದರ್ಭದಲ್ಲಿ ಮಾಂಸದೂಟಕ್ಕೆ ನೂಕು ನುಗ್ಗಲು ಉಂಟಾಯಿತು. ಇದನ್ನು ಉಪಯೋಗಿಸಿಕೊಂಡ ಜೇಬುಗಳ್ಳರು ಮಹಿಳೆಯರ ಚಿನ್ನಾಭರಣ ಲೂಟಿ ಮಾಡಿದರು. ನಂತರ ನೂಕು ನುಗ್ಗಲು ಉಂಟಾಗಿ ಅಸ್ತವ್ಯಸ್ತವಾಗಿತ್ತು. ಬಳಿಕ ಪೊಲೀಸರು ತಡೆಯುವ ಪ್ರಯತ್ನ ಮಾಡಿದರು.

ಪೊಲೀಸರು ಅಭಿಮಾನಿಗಳನ್ನು ತಡೆಯುತ್ತಿದ್ದಂತೆ ಮಹಿಳೆಯರು ಮತ್ತು ಅಂಬರೀಶ್ ಅಭಿಮಾನಿಗಳು ರೊಚ್ಚಿಗೆದ್ದು ಟೆಂಟನ್ನು ಹರಿದುಹಾಕಿ, ಕಿತ್ತೆಸೆದು ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದರಿಂದಾಗಿ ಸುಮಾರು 30ಕ್ಕೂ ಹೆಚ್ಚು ಮಂದಿ ಅಭಿಮಾನಿಗಳು, ಮಹಿಳೆಯರು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ.
ನೂಕುನುಗ್ಗಲಿನಲ್ಲಿದ್ದ ಸಾವಿರಾರು ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸಪಟ್ಟರು. ಆದರೆ ಜನರು ಸರತಿ ಸಾಲಿನಲ್ಲಿ ತೆರಳಲು ಅಳವಡಿಸಲಾಗಿದ್ದ ಕಬ್ಬಿಣದ ಪೈಪ್ಗಳನ್ನೂ ಸಹ ಕಿತ್ತೆಸೆದು ಚೆಲ್ಲಾಪಿಲ್ಲಿ ಮಾಡಿದರು. ಇದರಿಂದಾಗಿ ಕೆಲವರು ಗಾಯಗೊಂಡರು. ನಂತರ ಪರಿಸ್ಥಿತಿ ಹತೋಟಿಗೆ ತಂದು, ಊಟದ ವ್ಯವಸ್ಥೆಯನ್ನು ಸರಿಪಡಿಸಿ ಮತ್ತೆ ಊಟೋಪಚಾರವನ್ನು ಮುಂದುವರಿಸಲಾಯಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications