ಮಂಡ್ಯದಲ್ಲಿ ಕುಡಿಯುವ ನೀರನ್ನೂ ಕಸಿದುಕೊಂಡ ರಾಜಕೀಯ ಪ್ರತಿಷ್ಠೆ
ಮಂಡ್ಯ, ಮಾರ್ಚ್ 4: ಅಭಿವೃದ್ಧಿ ಕಾರ್ಯಗಳು ಕೆಲವೊಮ್ಮೆ ರಾಜಕೀಯ ಪ್ರತಿಷ್ಠೆಗಳಿಗೆ ಸಿಲುಕಿ ನೆನೆಗುದಿಗೆ ಬೀಳುತ್ತವೆ. ಇದಕ್ಕೆ ಉತ್ತಮ ನಿದರ್ಶನ ತಾಲೂಕಿನ ಚೀರನಹಳ್ಳಿಯಲ್ಲಿ ಅರ್ಧಕ್ಕೇ ನಿಂತ ಶುದ್ಧ ಕುಡಿಯುವ ನೀರು ಘಟಕ.
ಎಲ್ಲವೂ ಸರಿಹೋಗಿದ್ದರೆ ಇಷ್ಟರಲ್ಲೇ ಕಾಮಗಾರಿ ಮುಗಿದು ನೀರು ಹರಿಯಬೇಕಿತ್ತು. ಆದರೆ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಅವರ ರಾಜಕೀಯ ಪ್ರತಿಷ್ಠೆಯಿಂದ ಘಟಕ ಇನ್ನೂ ಪೂರ್ಣಗೊಂಡಿಲ್ಲ.

ಚೀರನಹಳ್ಳಿ ಸುತ್ತ ನಾಲ್ಕು ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಿಯೂ ಶುದ್ಧ ಕುಡಿಯುವ ನೀರಿನ ಘಟಕಗಳಿಲ್ಲ. ಸ್ಥಳೀಯರು ಪ್ರತಿದಿನ ನೀರಿಗಾಗಿ ಪರದಾಡುತ್ತಿದ್ದರೂ ಈ ಭಾಗದ ರಾಜಕೀಯ ನಾಯಕರು ತಲೆಕೆಡಿಸಿಕೊಳ್ಳುತ್ತಿಲ್ಲ. ನೀರಿನ ಅಭಾವ ತಪ್ಪಿಸುವ ಸಲುವಾಗಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 28 ಡಿಸೆಂಬರ್ 2015ರಲ್ಲಿ ಚೀರನಹಳ್ಳಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಜೂರು ಮಾಡಿದೆ.
ಈಗಾಗಲೇ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಪಕ್ಕದಲ್ಲೇ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಅನುಮತಿ ಪಡೆದು ಅಡಿಪಾಯದ ಕೆಲಸವನ್ನೂ ಪೂರ್ಣಗೊಳಿಸಲಾಗಿದೆ. ಆದರೂ ಗ್ರಾಮಸ್ಥರಿಗೆ ನೀರು ಒದಗಿಸುವ ಉದ್ದೇಶಕ್ಕಿಂತ ರಾಜಕೀಯ ಹಿತಾಸಕ್ತಿಯೇ ಮಹತ್ವದ್ದೆನಿಸಿ ಮತ ಹಾಕಿದ ಗ್ರಾಮಸ್ಥರು ಕಂಗಾಲಾಗುವಂತಾಗಿದೆ.
ಕಾಮಗಾರಿ ಬೇಗ ಮುಗಿಸಿ ನಮಗೆ ನೀರು ಕೊಡಿ ಎನ್ನುವುದು ಜನರ ಆಗ್ರಹ. ಬಿರುಬೇಸಿಗೆ ಆರಂಭವಾಗುವ ಮೊದಲಾದರೂ ಈ ಕಾಮಗಾರಿಯಲ್ಲೇನಾದರೂ ಪ್ರಗತಿಯಾಗುತ್ತಾ ಅಂತ ಕಾದುನೋಡಬೇಕಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications