ರಾಮಮಂದಿರ ಉದ್ಘಾಟನೆಗೆ ಸಿದ್ದರಾಮಯ್ಯಗೆ ಆಹ್ವಾನ ನೀಡದೆ ಬಿಜೆಪಿಗರಿಂದ ರಾಜಕೀಯ: ಚಲುವರಾಯಸ್ವಾಮಿ ಟೀಕೆ
ಮಂಡ್ಯ, ಜನವರಿ 02: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀರಾಮಂದಿರ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡದೆ ಬಿಜೆಪಿಗರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಟೀಕಿಸಿದರು.
ಸಿರಿಧಾನ್ಯ ಮೇಳ ಕಾರ್ಯಕ್ರಮದಲ್ಲಿ ಆಗಮಿಸಿದ ಅವರನ್ನು ಭೇಟಿಯಾದ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಇಂತಹ ನಡವಳಿಕೆಯನ್ನು ನಾವು ನಿರೀಕ್ಷಿಸಿರಲಿಲ್ಲ ಎಂದರು.

ಶ್ರೀರಾಮ ಎಲ್ಲರಿಗೂ ಸೇರಿದ ದೇವರು. ರಾಮಮಂದಿರ ಕಟ್ಟಿರೋದು ಬಿಜೆಪಿಯವರಿಗಿಂತ ನಾವೇ ಹೆಚ್ಚು ಖುಷಿ ಪಡುತ್ತೇವೆ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾವಣ ಮಾತ್ರ ಅಲ್ಲಾ ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎಂಬ ಹೇಳಿಕೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ಗೆ ಟಾಂಗ್ ನೀಡಿದ ಅವರು, ಪಾಪ ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದ್ರು ಆದರೆ ಅಧ್ಯಕ್ಷನು ಆಗಲಿಲ್ಲ, ವಿಪಕ್ಷ ನಾಯಕನು ಆಗಲಿಲ್ಲ. ಈಗ ಇನ್ನೇನಾದ್ರು ತಪ್ಪೊಗಬಹುದು ಎಂದು ಸುನೀಲ್, ಅಶ್ವಥ್ ನಾರಾಯಣ್ ಎಲ್ಲಾ ಕೂಗಾಡ್ತರೆ. ಅವರೆಲ್ಲರೂ ನನಗೂ ಆತ್ಮೀಯರೇ, ಪಾಪ ಕೂಗ್ಲಿ ಬಿಡಿ ಎಂದು ಪ್ರತಿಕ್ರಿಯಿಸಿದರು.
ನಮ್ಮ ಕುಟುಂಬದಿಂದ ಸ್ಪರ್ಧೆ ಮಾಡಲ್ಲ :
ಮುಂಬರುವ ಲೋಕಸಭಾ ಚುನಾವಣೆಗೆ ಸಚಿವರು ನಿಲ್ಲಬೇಕು ಎಂಬ ಸೂಚನೆ ನಮಗೆ ಹೈಕಮಾಂಡ್ ಕೊಟ್ಟಿಲ್ಲ. ನಮ್ಮ ಹೈಕಮಾಂಡ್ ಈ ರೀತಿಯ ಯಾವ ಸೂಚನೆಯನ್ನೂ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯ ಎಲ್ಲ ನಾಯಕರನ್ನೂ ಒಟ್ಟಾಗಿಸಿ ಅಭ್ಯರ್ಥಿ ಆಯ್ಕೆ ಮಾಡುವಂತೆ ಸೂಚನೆ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದೆ. ಅದನ್ನು ನಾವು ಶಿರಸಾ ವಹಿಸಿ ಪಕ್ಷದ ಸೂಚನೆಯನ್ನು ನಮ್ಮ ಜಿಲ್ಲೆಯ ಶಾಸಕರು, ಮುಖಂಡರು ನಿರ್ವಹಿಸುತ್ತೇವೆ. ಸಚಿವರು ಸ್ಪರ್ಧೆ ಮಾಡಬೇಕು ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ನಾನಾಗಲೀ, ನನ್ನ ಮನೆಯವರಾಗಲೀ ಯಾರೂ ಅಭ್ಯರ್ಥಿ ಆಗಲ್ಲ. ಈಗಾಗಲೇ ಅಭ್ಯರ್ಥಿ ಯಾರು ಎಂದು ನಿರ್ಧಾರ ಮಾಡಿಯಾಗಿದೆ. ಸೂಕ್ತ ಸಮಯದಲ್ಲಿ ಅದನ್ನು ಪ್ರಕಟಿಸುತ್ತೇವೆ ಎಂದು ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸೂಚ್ಯವಾಗಿ ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications