Prajwal Revanna Case: ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸದಂತೆ ಬಿಜೆಪಿ ಮಾಜಿ ಸಂಸದ ಒತ್ತಾಯ
ಹಾಸನದ ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿ ಪಡೆದಿದ್ದು, ಈ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿರುವ ಕಾರಣ ಮೈತ್ರಿಯಿಂದ ಜೆಡಿಎಸ್ನ್ನು ದೂರ ಇಡುವಂತೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಒತ್ತಾಯಿಸಿದರು.
ಮಂಡ್ಯದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ತಕ್ಷಣ ಜೆಡಿಎಸ್ನಿಂದ ಮೈತ್ರಿ ಹೊರಬರಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ಮುಜುಗರ ತಪ್ಪಿಸುವ ಸಲುವಾಗಿ ವರಿಷ್ಠರು ಈಗಾಗಲೇ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಬಿಜೆಪಿ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಸಂತ್ರಸ್ತೆಯರ ನೆರವಿಗೆ ಬರಲಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತ್ರಸ್ತೆಯರ ನೆರವಿಗೆ ಧಾವಿಸಬೇಕು. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗುವಂತೆ ಹೋರಾಟ ರೂಪಿಸಬೇಕು. ಅದರಲ್ಲಿ ನಾವೂ ಪಾಲ್ಗೊಳ್ಳುತ್ತೇವೆ ಎಂದರು.
ಯಾವುದೇ ವಿಚಾರವಾದರೂ ಕುಮಾರಸ್ವಾಮಿಯವರು ದಿಢೀರನೇ ಹೋರಾಟಕ್ಕೆ ಇಳಿಯುತ್ತಾರೆ. ಆದರೆ ಹಾಸನದ ಪ್ರಕರಣದಲ್ಲಿ ಕೇವಲ ವಿಪಕ್ಷಗಳ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ. ಇಂತಹ ಮಿಥ್ಯಾರೋಪವನ್ನು ಬಿಟ್ಟು ನೈಜ ಹೋರಾಟಕ್ಕೆ ಇಳಿಯಲಿ ಎಂದು ಒತ್ತಾಯಿಸಿದರು.
ದೇವೇಗೌಡರು ಇಂತಹದ್ದನ್ನು ನೋಡಬೇಕು
ಹಿಂದೆ ನಾಗಮಂಗಲದ ಗಂಗಾಧರಸ್ವಾಮಿ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನನ್ನ ವಿರುದ್ಧ ಆತನ ಫೋಟೋ ತಲೆ ಮೇಲೆ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದರು. ಆದರೆ ಇಂದು ಇಂತಹ ಇಳಿ ವಯಸ್ಸಿನಲ್ಲಿ ತನ್ನ ಮನೆಯಲ್ಲೇ ದೊಡ್ಡ ಘಟನೆ ನಡೆದುಹೋಗಿದೆ. ಇಂತಹುದ್ದನ್ನು ಈ ವಯಸ್ಸಿನಲ್ಲಿ ನೋಡಬೇಕಾದ ದುಸ್ಥಿತಿ ಬಂದೊದಗಿದೆ ಎಂದು ತಿಳಿಸಿದರು.
ಗಂಗಾಧರಮೂರ್ತಿ ಕೊಲೆ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇರಲಿಲ್ಲ. ಆದರೂ ನನ್ನನ್ನು ಬಂಧಿಸುವಂತೆ ಹೋರಾಟ ಮಾಡಿದ್ದರು. ನ್ಯಾಯಾಲಯ ನನಗೆ ಕ್ಲೀನ್ಚಿಟ್ ನೀಡಿತ್ತು. ಆ ಪ್ರಕರಣದಲ್ಲಿ ನಾನೂ ಕೂಡ ಸಂತಸ್ತನಾಗಿದ್ದೇನೆ. ಜೆಡಿಎಸ್ನಲ್ಲಿದ್ದ ಎಷ್ಟೋ ಮಂದಿ ನನ್ನಂತೆಯೇ ಒಂದಲ್ಲ ಒಂದು ಕಾರಣಕ್ಕೆ ಸಂತ್ರಸ್ಥರಾಗಿದ್ದಾರೆ ಎಂದರು.
ಒಕ್ಕಲಿಗ ನಾಯಕರ ಕಡೆಗಣನೆ
ದೇವೇಗೌಡರ ಕುಟುಂಬದಿಂದ ಒಕ್ಕಲಿಗ ನಾಯಕರು ತುಳಿತಕ್ಕೆ ಒಳಗಾಗಿದ್ದಾರೆ. ಹಾಸನದಲ್ಲಿ ಈ ಕುಟುಂಬದ ಸದಸ್ಯನಿಂದ ಹೆಣ್ಣು ಮಕ್ಕಳು ಹೇಗೆ ನೊಂದಿದ್ದಾರೋ ಅದೇ ರೀತಿ ನಾವೂ ನೊಂದಿದ್ದೇವೆ. ಕುಮಾರಸ್ವಾಮಿಯವರು ಆ ನೊಂದ ಮಹಿಳೆಯರಿಗೆ ಸಾಂತ್ವನ ಹೇಳುವ ಕೆಲಸ ಮಾಡಬೇಕು ಎಂದು ಹೇಳಿದರು.
ಚುನಾವಣೆಗೂ ಮುನ್ನ ಹಾಸನದಲ್ಲಿ ಪ್ರಚಾರ ಮಾಡುವ ವೇಳೆ ಪ್ರಜ್ವಲ್ ನನ್ನ ಮಗನಿದ್ದಂತೆ ಆತ ಏನೇ ಮಾಡಿರಲಿ, ನಾನು ಸರಿಪಡಿಸುತ್ತೇನೆ. ಅವನಿಗೆ ಆಶೀರ್ವಾದ ಮಾಡಿ ಎಂದು ಕುಮಾರಸ್ವಾಮಿ ಕೇಳಿದ್ದರು. ಆದರೆ ಲೈಂಗಿಕ ಹಗರಣ ಹೊರ ಬಂದ ನಂತರ ರೇವಣ್ಣ ಕುಟುಂಬಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ ಎಂದರು.
ಜೆಡಿಎಸ್ಗಾಗಿ ನಾನೂ ಸೇರಿದಂತೆ ಹಲವರು ದುಡಿದಿದ್ದೇವೆ. ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದೇನೆ. ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡದೆ ಸುರೇಶ್ಗೌಡರಿಗೆ ನೀಡಿದರು. ನಂತರ ಕೇವಲ 5 ತಿಂಗಳ ಅವಧಿಗೆ ಸಂಸದನಾದೆ. ನಂತರ ತಮ್ಮ ಮಗನಿಗೆ ಟಿಕೆಟ್ ಕೊಟ್ಟರು. ನನಗೇನೂ ಕೊಟ್ಟರು ಎಂದು ಪ್ರಶ್ನೆ ಮಾಡಿದರು.
ಕೇವಲ ಬಾಯಿಮಾತಿಯಿಂದ ಆಡಿದ ಸಣ್ಣ ತಪ್ಪುನ್ನು ಗಮನಿಸಿ ಅರ್ಧ ಗಂಟೆಯಲ್ಲೇ ನನ್ನನ್ನು ಪಕ್ಷದಿಂದ ಹೊರ ಹಾಕಿದರು. ಇಂತಹ ದೊಡ್ಡ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್ ಅಮಾನತ್ತಿಗೆ ಸಭೆ ಮಾಡಿ ನಂತರ ತೀರ್ಮಾನ ಮಾಡಿದ್ದಾರೆ. ಇದು ಯಾವ ನ್ಯಾಯ ಎಂದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications