ಪರಿಷತ್ ಚುನಾವಣೆ ಮೇಲೆ ಪ್ರಜ್ವಲ್ ರೇವಣ್ಣ ಪ್ರಕರಣ ಪರಿಣಾಮ ಬೀರಲಿದೆ; ಚಲುವರಾಯಸ್ವಾಮಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇವಲ ಸುಶಿಕ್ಷಿತ ಮಹಿಳೆಯರ ಮೇಲೆ ಮಾತ್ರವಲ್ಲದೆ ಪುರುಷರ ಮೇಲೂ ಪರಿಣಾಮ ಬೀರುತ್ತದೆ. ಅಂತಹ ನೀಚ ಕೃತ್ಯವನ್ನು ಯಾರು ತಾನೇ ಒಪ್ಪಿಕೊಳ್ಳುವುದಕ್ಕೆ ಸಾಧ್ಯ. ಆ ಪ್ರಕರಣದ ಬಗ್ಗೆ ಮಾತನಾಡುವುದಕ್ಕೆ ಅಸಹ್ಯವಾಗುತ್ತದೆ. ಅದಕ್ಕಾಗಿ ನಾವು ಆ ವಿಷಯ ಮಾತನಾಡುವುದನ್ನೇ ನಿಲ್ಲಿಸಿದ್ದೇವೆ ಎಂದು ತಿಳಿಸಿದರು.

ಈಗಾಗಲೇ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರು ಜೆಡಿಎಸ್-ಬಿಜೆಪಿ ಮೈತ್ರಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಗೆಲ್ಲಿಸುವುದರೊಂದಿಗೆ ಎರಡೂ ಪಕ್ಷಗಳಿಗೆ ಸೋಲಿನ ರುಚಿ ತೋರಿಸಿದ್ದಾರೆ. ಇದು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲೂ ಪುನರಾವರ್ತನೆಯಾಗಲಿದೆ ಎಂದು ಭವಿಷ್ಯ ನುಡಿದರು.
ಶಿಕ್ಷಕರ ಸಂಪರ್ಕವೇ ಇಲ್ಲ
ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಸತತ ನಾಲ್ಕು ಬಾರಿ ಪ್ರತಿನಿಧಿಸಿ ಗೆದ್ದಿರುವ ಮರಿತಿಬ್ಬೇಗೌಡರು ಸಮರ್ಥರಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಸದನದಲ್ಲಿ ದನಿ ಎತ್ತಿ ಪರಿಹಾರ ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಅಭ್ಯರ್ಥಿ ಉದ್ಯಮಿಯಾಗಿದ್ದು, ಅವರಿಗೆ ಶಿಕ್ಷಕರ ಸಂಪರ್ಕವೇ ಇಲ್ಲ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಅವರಿಗೆ ಅರಿವೂ ಇಲ್ಲ. ಹೀಗಾಗಿ ಶಿಕ್ಷಿತರು ಮರಿತಿಬ್ಬೇಗೌಡರನ್ನು ಬೆಂಬಲಿಸುವುದರಿಂದ ಗೆಲುವು ನಿಶ್ಚಿತ ಎಂದರು.
ಶಿಕ್ಷಕರಿಗೆ ಶೀಘ್ರ ಒಪಿಎಸ್, ಎನ್ಪಿಎಸ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇವುಗಳ ಜಾರಿಗೆ ಕೆಲವು ಕಾನೂನಾತ್ಮಕ ಚರ್ಚೆಗಳಾಗಬೇಕಿದೆ. ಶೀಘ್ರದಲ್ಲೇ ಜಾರಿಗೊಳಿಸಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಲಿದೆ. ಏಳನೇ ವೇತನ ಆಯೋಗವನ್ನು ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ನ್ಯಾಯ ಒದಗಿಸುತ್ತಾ ಬಂದಿದೆ ಎಂದರು.
ಅದರ ಬಗ್ಗೆ ಮಾತನಾಡಲ್ಲ
ಪ್ರಜ್ವಲ್ ಪೆನ್ಡ್ರೈವ್ ಕುರಿತು ನಾನು ಮಾತನಾಡುವುದಿಲ್ಲ ಎಂದಿದ್ದೇನೆ. ಏಕೆಂದರೆ ವಾಟ್ಸಾಪ್ನಲ್ಲಿ ಜೈ ಜೆಡಿಎಸ್, ಜೈ ಕುಮಾರಣ್ಣ, ಜೈ ರೇವಣ್ಣ, ಜೈ ಪ್ರಜ್ವಲ್ ಅಂತಾರೆ. ಇದನ್ನು ನೋಡಿದಾಗ ಏನನ್ನು ಹೇಳೋದು. ಇದು ನಿಜಕ್ಕೂ ಸಮಾಜ ತಲೆ ತಗ್ಗಿಸುವ ಸಂಗತಿ. ಈ ಪ್ರಕರಣದಿಂದ ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಜೆಡಿಎಸ್ನವರು ಮಾತಾಡುತ್ತಾರೆ. ಕಾನೂನು ಬದ್ಧವಾಗಿ ಏನು ಆಗುತ್ತೋ ನೋಡೋಣ. ನ್ಯಾಯಾಲಯಕ್ಕೆ ಎಲ್ಲರೂ ಸಹ ತಲೆಬಾಗಲೇಬೇಕಾಗುತ್ತದೆ. ನಮ್ಮ ಸರ್ಕಾರದಿಂದ ಪಕ್ಷಪಾತವಿಲ್ಲದೆ ತನಿಖೆ ಮಾಡುತ್ತಿದೆ. ಎಸ್ಐಟಿ ತನಿಖೆ ಮಾಡಿ ನ್ಯಾಯಾಲಯಕ್ಕೆ ವರದಿಯನ್ನು ನೀಡಲಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಇದೆ ಎಂದರು.
ಕುಮಾರಸ್ವಾಮಿಗೆ ಯಾರ ಮೇಲೂ ನಂಬಿಕೆ ಇಲ್ಲ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಾರ ಮೇಲೂ ನಂಬಿಕೆಯೇ ಇಲ್ಲ. ಮೋದಿ ಅವರನ್ನೇ ಹಿಯಾಳಿಸಿ ಬೈದಿದ್ದಾರೆ. ಆರ್ಎಸ್ಎಸ್, ಬಿಜೆಪಿ-ಕಾಂಗ್ರೆಸ್ ಎಲ್ಲರಿಗೂ ಬೈದಿದ್ದಾರೆ. ಕುಮಾರಸ್ವಾಮಿ ಅನುಮಾನ ಪಡದ ವ್ಯಕ್ತಿ ಇಲ್ಲವೇ ಇಲ್ಲ. ಪೆನ್ಡ್ರೈವ್ ಪ್ರಕರಣದ ಬಗ್ಗೆ ನಮ್ಮ ಸರ್ಕಾರ ಮಾತಾಡಬಾರದು ಎಂದು ತೀರ್ಮಾನ ಮಾಡಿದ್ದೇವೆ. ಇದು ಚರ್ಚೆ ಮಾಡುವ ವಿಚಾರವಲ್ಲ. ಕಾನೂನು ಬದ್ಧವಾಗಿ ಕ್ರಮವಾಗಬೇಕು. ಇಷ್ಟೊತ್ತಿಗೆ ಕುಮಾರಸ್ವಾಮಿ ಕುಟುಂಬ ಎಸ್ಐಟಿ ಮುಂದೆ ಪ್ರಜ್ವಲ್ನನ್ನು ತಂದು ನಿಲ್ಲಿಸಬೇಕಿತ್ತು. ಅದನ್ನು ಬಿಟ್ಟು ಮಾತಾಡೋದು ಅಲ್ಲ ಎಂದು ಹೇಳಿದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications