5 ಸರಕಾರಿ ಶಾಲೆಗಳನ್ನು ದತ್ತು ಪಡೆದ ಪ್ರಕಾಶ್ ರೈ
ಮಂಡ್ಯ, ಜೂನ್ 12: ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀನಗರದಲ್ಲಿರುವ ಮೆಣಸಗೆರೆ ಸರಕಾರಿ ಶಾಲೆ ಸೇರಿದಂತೆ 5 ಶಾಲೆಗಳನ್ನು ಬಹುಭಾಷಾ ನಟ ಪ್ರಕಾಶ್ ರೈ ದತ್ತು ಪಡೆದಿದ್ದಾರೆ.
ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ 'ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ' ಕೆಲಸ ಮಾಡುತ್ತಿದ್ದು ಇದರ ಜೊತೆಗೆ ಪ್ರಕಾಶ್ ರೈ ರವರ 'ಜಸ್ಟ್ ಆಸ್ಕಿಂಗ್ ಫೌಂಡೇಶನ್' ಕೂಡ ಕೈಜೋಡಿಸಿದೆ.
ಎರಡೂ ಸಂಸ್ಥೆಗಳು ಸಮುದಾಯಗಳ ಸಹಭಾಗಿತ್ವದಲ್ಲಿ ರಾಜ್ಯದಲ್ಲಿ 5 ಸರ್ಕಾರಿ ಶಾಲೆಗಳ ಬಲವರ್ಧನೆಯ ಗುರಿ ಹಾಕಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕಾಶ್ ರೈ ಕೆ.ಆರ್ ಪೇಟೆಯ ಶತಮಾನದ ಶಾಲೆ, ಪಾಂಡವಪುರದ ಫ್ರೆಂಚ್ ರಾಕ್ಸ್ ಸರ್ಕಾರಿ ಮಾದರಿ ಶಾಲೆ ಮತ್ತು ಮದ್ದೂರು ತಾಲ್ಲೂಕಿನ ಮೆಣಸಗೆರೆ ಶಾಲೆಗಳಿಗೆ ಸೋಮವಾರ ಭೇಟಿ ನೀಡಿ ಸಭೆಗಳನ್ನು ನಡೆಸಿದರು.

ತಾಂತ್ರಿಕವಾಗಿ ಯಾವುದೇ ಶಾಲೆಗಳನ್ನು ಪ್ರಕಾಶ್ ರೈ ದತ್ತು ತೆಗೆದುಕೊಳ್ಳುತ್ತಿಲ್ಲ. ದತ್ತು ತೆಗೆದುಕೊಂಡರೆ ಆಗ ಊರಿನ ಸಮುದಾಯಕ್ಕೆ ಹೆಚ್ಚಿನ ಪಾತ್ರವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಊರಿನ ಸಮುದಾಯವೇ ಶಾಲೆಯ ಅಭಿವೃದ್ಧಿಯ ಜವಾಬ್ದಾರಿ ತೆಗೆದುಕೊಂಡಲ್ಲಿ ಅವರಿಗೆ ಬೇಕಾದುದ್ದನ್ನು ಒದಗಿಸುವ, ಅವರಿಗೆ ಸಕಲ ನೆರವು ನೀಡುವ ವಾಗ್ದಾನವನ್ನು ಪ್ರಕಾಶ್ ರೈ ಮಾಡಿದ್ದಾರೆ.
ನಂತರ ಮಾತನಾಡಿದ ಅವರು, "ಭಯವನ್ನು ಉಪಯೋಗಿಸಿಕೊಂಡು ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲಾಗುತ್ತಿದೆ. ಎಲ್ಲಾ ಖಾಸಗೀ ಶಾಲೆಗಳೂ ಇದರಲ್ಲಿ ಪಾಲುದಾರರಾಗಿವೆ," ಎಂದು ದೂರಿದರು.

"ಅಂಜಿಕೆ ಇಲ್ಲದೆ, ಭಯ ಇಲ್ಲದೆ ನಾವು ಓದಬೇಕಾದರೆ ಅದು ಸರಕಾರಿ ಶಾಲೆಯಲ್ಲಿ ಮಾತ್ರ ಸಾಧ್ಯ. ಸರಕಾರಿ ಶಾಲೆಗಳಿಗೆ ನಡೆಸುವ ವೆಚ್ಚ ನಮ್ಮ ತೆರಿಗೆಯಾಗಿದ್ದರೂ ನಾವು ಅವುಗಳ ಬಗ್ಗೆ ನಿರ್ಲಕ್ಷಿತರಾಗಿದ್ದೇವೆ," ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಪ್ರಕಾಶ್ ರೈ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭ ಹಬ್ಬದ ವಾತವಾರಣ ಕಂಡುಬಂತು. ಪೋಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮದ ಗುಣಮಟ್ಟದ ಶಿಕ್ಷಣ ನೀಡುವ ಮಾದರಿ ಶಾಲೆಗಳನ್ನಾಗಿ ಮಾಡುವುದರ ಜೊತೆಗೆ ಸರ್ಕಾರ ಈ ರೀತಿ ಮಾಡಬೇಕೆಂಬ ಒತ್ತಡ ಮೂಡಿಸುವುದು, ಆ ಮೂಲಕ ಸಮಾನ ಶಿಕ್ಷಣ ಜಾರಿಗೆ ಹಂತ ಹಂತವಾಗಿ ಮುನ್ನಡೆಯುವುದರ ಕುರಿತು ಪ್ರಕಾಶ್ ರೈ ತೀರ್ಮಾನಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications