5 ಸರಕಾರಿ ಶಾಲೆಗಳನ್ನು ದತ್ತು ಪಡೆದ ಪ್ರಕಾಶ್ ರೈ
ಮಂಡ್ಯ, ಜೂನ್ 12: ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀನಗರದಲ್ಲಿರುವ ಮೆಣಸಗೆರೆ ಸರಕಾರಿ ಶಾಲೆ ಸೇರಿದಂತೆ 5 ಶಾಲೆಗಳನ್ನು ಬಹುಭಾಷಾ ನಟ ಪ್ರಕಾಶ್ ರೈ ದತ್ತು ಪಡೆದಿದ್ದಾರೆ.
ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ 'ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ' ಕೆಲಸ ಮಾಡುತ್ತಿದ್ದು ಇದರ ಜೊತೆಗೆ ಪ್ರಕಾಶ್ ರೈ ರವರ 'ಜಸ್ಟ್ ಆಸ್ಕಿಂಗ್ ಫೌಂಡೇಶನ್' ಕೂಡ ಕೈಜೋಡಿಸಿದೆ.
ಎರಡೂ ಸಂಸ್ಥೆಗಳು ಸಮುದಾಯಗಳ ಸಹಭಾಗಿತ್ವದಲ್ಲಿ ರಾಜ್ಯದಲ್ಲಿ 5 ಸರ್ಕಾರಿ ಶಾಲೆಗಳ ಬಲವರ್ಧನೆಯ ಗುರಿ ಹಾಕಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕಾಶ್ ರೈ ಕೆ.ಆರ್ ಪೇಟೆಯ ಶತಮಾನದ ಶಾಲೆ, ಪಾಂಡವಪುರದ ಫ್ರೆಂಚ್ ರಾಕ್ಸ್ ಸರ್ಕಾರಿ ಮಾದರಿ ಶಾಲೆ ಮತ್ತು ಮದ್ದೂರು ತಾಲ್ಲೂಕಿನ ಮೆಣಸಗೆರೆ ಶಾಲೆಗಳಿಗೆ ಸೋಮವಾರ ಭೇಟಿ ನೀಡಿ ಸಭೆಗಳನ್ನು ನಡೆಸಿದರು.

ತಾಂತ್ರಿಕವಾಗಿ ಯಾವುದೇ ಶಾಲೆಗಳನ್ನು ಪ್ರಕಾಶ್ ರೈ ದತ್ತು ತೆಗೆದುಕೊಳ್ಳುತ್ತಿಲ್ಲ. ದತ್ತು ತೆಗೆದುಕೊಂಡರೆ ಆಗ ಊರಿನ ಸಮುದಾಯಕ್ಕೆ ಹೆಚ್ಚಿನ ಪಾತ್ರವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಊರಿನ ಸಮುದಾಯವೇ ಶಾಲೆಯ ಅಭಿವೃದ್ಧಿಯ ಜವಾಬ್ದಾರಿ ತೆಗೆದುಕೊಂಡಲ್ಲಿ ಅವರಿಗೆ ಬೇಕಾದುದ್ದನ್ನು ಒದಗಿಸುವ, ಅವರಿಗೆ ಸಕಲ ನೆರವು ನೀಡುವ ವಾಗ್ದಾನವನ್ನು ಪ್ರಕಾಶ್ ರೈ ಮಾಡಿದ್ದಾರೆ.
ನಂತರ ಮಾತನಾಡಿದ ಅವರು, "ಭಯವನ್ನು ಉಪಯೋಗಿಸಿಕೊಂಡು ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲಾಗುತ್ತಿದೆ. ಎಲ್ಲಾ ಖಾಸಗೀ ಶಾಲೆಗಳೂ ಇದರಲ್ಲಿ ಪಾಲುದಾರರಾಗಿವೆ," ಎಂದು ದೂರಿದರು.

"ಅಂಜಿಕೆ ಇಲ್ಲದೆ, ಭಯ ಇಲ್ಲದೆ ನಾವು ಓದಬೇಕಾದರೆ ಅದು ಸರಕಾರಿ ಶಾಲೆಯಲ್ಲಿ ಮಾತ್ರ ಸಾಧ್ಯ. ಸರಕಾರಿ ಶಾಲೆಗಳಿಗೆ ನಡೆಸುವ ವೆಚ್ಚ ನಮ್ಮ ತೆರಿಗೆಯಾಗಿದ್ದರೂ ನಾವು ಅವುಗಳ ಬಗ್ಗೆ ನಿರ್ಲಕ್ಷಿತರಾಗಿದ್ದೇವೆ," ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಪ್ರಕಾಶ್ ರೈ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭ ಹಬ್ಬದ ವಾತವಾರಣ ಕಂಡುಬಂತು. ಪೋಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮದ ಗುಣಮಟ್ಟದ ಶಿಕ್ಷಣ ನೀಡುವ ಮಾದರಿ ಶಾಲೆಗಳನ್ನಾಗಿ ಮಾಡುವುದರ ಜೊತೆಗೆ ಸರ್ಕಾರ ಈ ರೀತಿ ಮಾಡಬೇಕೆಂಬ ಒತ್ತಡ ಮೂಡಿಸುವುದು, ಆ ಮೂಲಕ ಸಮಾನ ಶಿಕ್ಷಣ ಜಾರಿಗೆ ಹಂತ ಹಂತವಾಗಿ ಮುನ್ನಡೆಯುವುದರ ಕುರಿತು ಪ್ರಕಾಶ್ ರೈ ತೀರ್ಮಾನಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications