KRS Dam: 13 ದಿನಗಳಲ್ಲಿ ಕೆಆರ್ಎಸ್ನಲ್ಲಿ ಹೆಚ್ಚಾಯ್ತು ನೀರಿನ ಸಂಗ್ರಹ; ಮಾಹಿತಿ
ಕಳೆದ ವರ್ಷದ ಬರಗಾಲ ಮತ್ತು ಬಿಸಿಲಿನ ತೀವ್ರತೆಯಿಂದ ನಲುಗಿದ್ದ ರಾಜ್ಯಕ್ಕೆ ಪೂರ್ವ ಮುಂಗಾರು ತಂಪೆರದಿದೆ. ನೀರಿಲ್ಲದೆ ಬಣಗುಡುತ್ತಿದ್ದ ಜಲಾಶಯಗಳಿಗೆ ಕೂಡ ನೀರಿನ ಹರಿವು ಆರಂಭವಾಗಿದೆ. ಕಳೆದ ಆರು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದ್ದ ಕೆಆರ್ಎಸ್ ಜಲಾಶಯಕ್ಕೆ ಕೂಡ ಉತ್ತಮ ಒಳಹರಿವು ಇದ್ದು, ನೀರಿನ ಸಂಗ್ರಹ ಹೆಚ್ಚಾಗಿದೆ.
ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಕಳೆದ 13 ದಿನಗಳಲ್ಲಿ ಎರಡು ಅಡಿಗೂ ಹೆಚ್ಚಿನ ಪ್ರಮಾಣದ ನೀರು ಹರಿದುಬಂದಿದೆ. ಮೇ 14 ರಲ್ಲಿ ಕೇವಲ 150 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಇಂದು (ಮೇ 27) ಜಲಾಶಯಕ್ಕೆ 2893 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಇದರಿಂದಾಗಿ ಕೃಷ್ಣರಾಜಸಾಗರ ಜಲಾಶಯದಲ್ಲಿ 80 ಅಡಿ ಸಂಗ್ರಹವಾಗಿದ್ದ ನೀರಿನ ಮಟ್ಟ ಇದೀಗ 83.20 ಅಡಿಗೆ ಏರಿಕೆಯಾಗಿದೆ.

ಕಳೆದ ವರ್ಷ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಳೆಯಾಗದ ಕಾರಣ ಕೃಷ್ಣರಾಜಸಾಗರ ಸಾಗರ ಜಲಾಶಯ ಭರ್ತಿಯಾಗಲಿಲ್ಲ. ಈ ಮಧ್ಯೆ ಸಂಗ್ರಹವಾಗಿದ್ದ ಕಡಿಮೆ ಪ್ರಮಾಣ ನೀರನ್ನು ತಮಿಳುನಾಡಿಗೆ ಹರಿಸುವಂತಾಗಿತ್ತು. ಜೊತೆಗೆ ಕೃಷ್ಣರಾಜಸಾಗರ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಕ್ಕೆ ಕಟ್ಟು ನೀರು ಪದ್ಧತಿ ಅನುಸಾರ ಬೆಳೆಗಳಿಗೆ ನೀರು ಕೊಟ್ಟು ಇರುವ ಬೆಳೆಯನ್ನು ರಕ್ಷಣೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಬರದ ಭೀಕರತೆ ತುಂಬಾ ಜೋರಾಗಿಯೇ ಇತ್ತು.
ತೊಂದರೆ ಅನುಭವಿಸಿದ್ದ ಅನ್ನದಾತ
ಸಾಮಾನ್ಯವಾಗಿ ಮೇ ಕೊನೇ ವಾರ ಅಥವಾ ಜೂನ್ ಮೊದಲ ವಾರದಲ್ಲಿ ಮಳೆ ಬೀಳುವ ಸಾಧ್ಯತೆಗಳಿದ್ದು, ಈ ಬಾರಿ ಮೇ ಮಧ್ಯದಲ್ಲೇ ಪೂರ್ವ ಮುಂಗಾರು ಬೀಳುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿದೆ. ಕಾವೇರಿ ಜಲಾನಯನ ವ್ಯಾಪ್ತಿಯ ನಾಲ್ಕೂ ಜಲಾಶಯಗಳಲ್ಲೂ ನೀರಿನ ಸಂಗ್ರಹ ತೀವ್ರ ಕುಸಿತ ಕಂಡುಬಂದಿತ್ತು. ಹೀಗಾಗಿ ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರನ್ನು ಕೇವಲ ಕುಡಿಯುವ ನೀರಿನ ಆಧ್ಯತೆಗೆ ಮಾತ್ರ ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿ ರೈತರಿಗೆ ಯಾವುದೇ ಬೆಳೆ ಬೆಳೆಯದಂತೆ ಸೂಚನೆ ನೀಡಿತ್ತು. ಪರಿಣಾಮ ಭೂಮಿ ನೀರಿಲ್ಲದೆ ಬಣಗುಡುವಂತಾಗಿತ್ತು.
ಕಾವೇರಿ ಜಲಾನಯನ ವ್ಯಾಪ್ತಿಯ ಕೇರಳದ ವೈನಾಡು, ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕಾಗಿರುವ ಕಾರಣ ಜಲಾಶಯಗಳಿಗೆ ಸ್ವಲ್ಪ ಮಟ್ಟಿನ ನೀರು ಹರಿದುಬರುವಂತಾಗಿದೆ. ಇದರಿಂದಾಗಿ ನೀರಿನ ಸಂಗ್ರಹದಲ್ಲಿ ನಿಧಾನವಾಗಿ ಏರಿಕೆಯಾಗಿರುವುದು ತುಸು ಸಮಾಧಾನ ತರಿಸಿದೆ.
ನೀರಿನ ಸಂಗ್ರಹ ಹೆಚ್ಚಳ
ಮೇ 15ರಂದು ಕೃಷ್ಣರಾಜಸಾಗರ ಜಲಾಶಯದಲ್ಲಿ 79.70 ಅಡಿ ನೀರು ಸಂಗ್ರಹವಾಗಿದ್ದು, ಕೇವಲ 903 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿತ್ತು. ಮೇ 19ರಂದು ಜಲಾಶಯದಲ್ಲಿ 80.52 ಅಡಿ ನೀರು ಸಂಗ್ರಹವಾಗಿದ್ದು, 1 ಸಾವಿರ ಕ್ಯೂಸೆಕ್ಸ್ಗೆ ಒಳ ಹರಿವು ಇಳಿಕೆಯಾಗಿತ್ತು. ಸೋಮವಾರದಿಂದ ಮತ್ತೆ ಮಳೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ 1416 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಜಲಾಶಯದಲ್ಲಿ 80.72 ಅಡಿ ನೀರು ಸಂಗ್ರಹವಾಗಿತ್ತು.
ಮೇ. 23ರ ಗುರುವಾರ ಜಲಾಶಯದಲ್ಲಿ 81.45 ಅಡಿ ನೀರು ಸಂಗ್ರಹವಾಗಿದ್ದು, 1971 ಕ್ಯೂಸೆಕ್ ಒಳ ಹರಿವಿತ್ತು. ಮೇ 24ರಂದು 81.80 ಅಡಿಗೆ ಏರಿಕೆಯಾಗಿದ್ದು, 2509 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಮೇ. 25ರಂದು ಜಲಾಶಯದಲ್ಲಿ 82.30 ಅಡಿ ನೀರು ಸಂಗ್ರಹವಾಗಿದ್ದು, 3365 ಕ್ಯೂಸೆಕ್ ನೀರು ಹರಿದುಬರುತ್ತಿತ್ತು. ಇಂದು ಜಲಾಶಯದ ನೀರಿನ ಮಟ್ಟ 83.20 ಅಡಿ ದಾಖಲಾಗಿದ್ದು, 2893 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಒಟ್ಟಾರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲೊಂದಾದ ಕೃಷ್ಣರಾಜಸಾಗರ ಮತ್ತು ಕಾವೇರಿ ಜಲಾನಯನ ವ್ಯಾಪ್ತಿಯ ಎಲ್ಲ ಜಲಾಶಯಗಳಲ್ಲೂ ನೀರಿನ ಸಂಗ್ರಹ ಹೆಚ್ಚುತ್ತಿರುವುದು ರೈತರಿಗೆ ಸಂತಸ ಮೂಡಿಸಿದ್ದರೆ, ಸರ್ಕಾರಕ್ಕೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಮುಂಗಾರು ಇನ್ನೂ ಆರಂಭವಾಗಬೇಕಿದ್ದು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮಳೆ ಚುರುಕುಗೊಂಡರೆ ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications