ಹೆರಿಗೆಗಾಗಿ ತವರಿಗೆ ಬಂದಿದ್ದ ಗರ್ಭಿಣಿ ನಾಪತ್ತೆ
ನಾಪತ್ತೆಯಾಗಿರುವ ಮಹಿಳೆಯನ್ನು ನಾಲ್ಕು ವರ್ಷಗಳ ಹಿಂದೆ ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಎಲ್.ಬಿ.ಶ್ರೀಧರ್ ಎಂಬುವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು.
ಮಂಡ್ಯ: ಹೆರಿಗೆಯ ಆರೈಕೆಗೆಂದು ಗಂಡನ ಮನೆಯಿಂದ ತವರಿಗೆ ಬಂದಿದ್ದ ಗರ್ಭಿಣಿ ಮಹಿಳೆಯೊಬ್ಬರು ಸ್ನೇಹಿತೆ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಮತ್ತೀಕೆರೆ ಗ್ರಾಮದಲ್ಲಿ ನಡೆದಿದೆ.
ಮತ್ತೀಕೆರೆ ನಿವಾಸಿ ಬೋರೇಗೌಡ ಎಂಬುವರ ಪುತ್ರಿ ರಮ್ಯ(25) ನಾಪತ್ತೆಯಾದ ಗರ್ಭಿಣಿ ಮಹಿಳೆ. ಈಕೆಯನ್ನು ಕಳೆದ ನಾಲ್ಕು ವರ್ಷಗಳ ಹಿಂದೆ ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಎಲ್.ಬಿ.ಶ್ರೀಧರ್ ಎಂಬುವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು.

ಮದುವೆಯಾದ ಬಳಿಕ ಇದೀಗ ಗರ್ಭಿಣಿಯಾಗಿದ್ದ ರಮ್ಯಳನ್ನು ಸಂಪ್ರದಾಯದಂತೆ ಚೊಚ್ಚಲ ಹೆರಿಗೆಗಾಗಿ ತವರು ಮನೆಯಾದ ಮತ್ತೀಕೆರೆಗೆ ಕರೆತರಲಾಗಿತ್ತು. ತನ್ನ ತವರು ಮನೆಯಲ್ಲಿದ್ದ ಈಕೆ ಏ.13ರಂದು ಮನೆಯಲ್ಲಿದ್ದು ಬೋರ್ ಆಗಿದ್ದು ಗೆಳತಿ ಮನೆಗೆ ಹೋಗಿ ಮಾತನಾಡಿಸಿಕೊಂಡು ಬರುವುದಾಗಿ ತನ್ನ ತಾಯಿತಂದೆಯೊಂದಿಗೆ ಹೇಳಿ ಮಧ್ಯಾಹ್ನ 2ರ ಸಮಯದಲ್ಲಿ ಹೋಗಿದ್ದಾಳೆ.
ಹೀಗೆ ಹೋದವಳು ಸಂಜೆಯಾದರೂ ಬಾರದೆ ಇದ್ದಾಗ ಆತಂಕಗೊಂಡು ಫೋನ್ ಮಾಡಿ ವಿಚಾರಿಸುವ ಪ್ರಯತ್ನ ಮಾಡಲಾಗಿದ್ದು, ಆಕೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾಳೆ. ಆಕೆಯ ಗೆಳತಿಯರನ್ನು ಕೇಳಿದರೆ ತಮ್ಮ ಮನೆಗೆ ಬಂದಿಲ್ಲ ಎಂಬ ಉತ್ತರ ನೀಡಿದ್ದಾರೆ.
ಆತಂಕಗೊಂಡ ಆಕೆಯ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಕೆ ಎಲ್ಲಿಗೆ ಹೋಗಿದ್ದಾಳೆ ಎಂಬುದೇ ಪತ್ತೆಯಾಗಿಲ್ಲ. ಈ ಸಂಬಂಧ ಸಂಬಂಧಿಕರು, ಆಕೆಯ ಪರಿಚಿತರು ಎಲ್ಲರ ಮನೆಗೆ ತೆರಳಿ ವಿಚಾರಿಸಿದರೂ ಎಲ್ಲೆಡೆಯೂ ಆಕೆಯನ್ನು ನಾವು ನೋಡಿಲ್ಲ ಎಂಬ ಉತ್ತರವೇ ಬರುತ್ತಿದೆ.
ಮನೆಯಿಂದ ಹೊರಹೋಗುವಾಗ ಕಪ್ಪು ಬಣ್ಣದ ಚೂಡಿದಾರ್ ಧರಿಸಿದ್ದಳು ಎನ್ನಲಾಗಿದ್ದು, ಆಕೆಯ ಮೈಮೇಲೆ ಸುಮಾರು 75ಗ್ರಾಂನಷ್ಟು ಚಿನ್ನಾಭರಣವಿತ್ತು ಎನ್ನಲಾಗಿದೆ. ಮಗಳು ನಾಪತ್ತೆಯಾದಲ್ಲಿಂದ ಅವಳ ಹೆತ್ತವರು ಸಂಪೂರ್ಣ ಕಂಗಾಲಾಗಿದ್ದು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡದೆ ತಮಗೆ ತಿಳಿದ ಜಾಗವನ್ನೆಲ್ಲ ಹುಡುಕಾಡಿದ ಬಳಿಕ ಇದೀಗ ಬೇರೆ ದಾರಿ ಕಾಣದೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡಿರುವ ಠಾಣೆಯ ಎಸ್ಐ ಕೆ.ಎನ್.ಗಿರೀಶ್ ಅವರು ಎಲ್ಲಾದರು ರಮ್ಯಳ ಸುಳಿವು ಸಿಕ್ಕಲ್ಲಿ ಸಮೀಪದ ಪೊಲೀಸ್ ಠಾಣೆಗೆ ಅಥವಾ 9480804860, 08230-262440 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications