ಅವಹೇಳನಕಾರಿ ಹೇಳಿಕೆ: ಸಿದ್ದರಾಮಯ್ಯಗೆ ಚೆಡ್ಡಿ ರವಾನೆ
ಮಂಡ್ಯ, ಜೂ 6: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ನವರ ಚಡ್ಡಿ ಸುಡುವ ಅಭಿಯಾನ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಹಳೆ ಚಡ್ಡಿಗಳನ್ನು ಕೆಪಿಸಿಸಿ ಕಚೇರಿಗೆ ಕಳುಹಿಸುವ ಮೂಲಕ ಹಿಂದೂ ಪರ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಆರ್.ಎಸ್.ಎಸ್. ಮುಖಂಡ ಮಂಜುನಾಥ ಮಾತನಾಡಿ, ಸಿದ್ದರಾಮಯ್ಯನವರು ಈ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾಗಿದ್ದರೂ ಸಹ ತಮ್ನ ರಾಜಕೀಯ ಲಾಭಕ್ಕಾಗಿ ದೇಶಭಕ್ತ ಸಂಘಟನೆಯಾಗಿರುವ ಆರ್.ಎಸ್.ಎಸ್ ಟೀಕಿಸುವುದು ಖಂಡನೀಯ. ಅವರಿಗೆ ಸಂಘದ ಬಗ್ಗೆ ಏನೂ ಗೊತ್ತಿಲ್ಲ, ಮುಂದಿನ ತಿಂಗಳು ಬೆಂಗಳೂರಿನ ರಾಮೂಹಳ್ಳಿ ಸಮೀಪ ಆರ್.ಎಸ್.ಎಸ್.ನ ಕ್ಯಾಂಪ್ ನಡೆಯುತ್ತದೆ ಅಲ್ಲಿ ಹೋಗಿ ಅವರು ಕ್ಯಾಂಪಿಗೆ ಸೇರಿಕೊಂಡು ಸಂಘದ ಬಗ್ಗೆ ಮಾಹಿತಿ ಪಡೆಯುವ ಜೊತೆಗೆ ಸಂಘದ ತತ್ವ ಸಿದ್ದಾಂತವನ್ನು ತಿಳಿದುಕೊಳ್ಳಲಿ. ಅದನ್ನು ಬಿಟ್ಟು ಸಂಘದ ತತ್ವ ಸಿದ್ದಾಂತಗಳನ್ನೇ ತಿಳಿಯದೆ ವಿನಾಕಾರಣ ಸಂಘದವನ್ನು ಟೀಕಿಸುವುದು ಸರಿಯಲ್ಲ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯವನರು ಚಡ್ಡಿ ವಿಷಯಕ್ಕೆ ದೊಡ್ಡ ಬೆಲೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಲಕ್ಷಾಂತರ ಚಡ್ಡಿ ಸುಡುವ ಕೆಲಸ ಮಾಡಲಿ:
ಒಂದು ವೇಳೆ ಸಿದ್ದರಾಮಯ್ಯ ಅವರು ಚಡ್ಡಿಗಳನ್ನು ಸುಡುವುದಾದರೆ ನಾವುಗಳೆ ಅವರು ಇರುವ ಸ್ಥಳಕ್ಕೆ ಲಕ್ಷಾಂತರ ಚಡ್ಡಿಗಳನ್ನು ಕಳುಹಿಸುತ್ತೇವೆ. ಅವರು ಅವುಗಳನ್ನು ಸುಟ್ಟುಕೊಂಡೆ ಕಾಲ ಕಳೆಯಲಿ ಎಂದು ಮಂಜುನಾಥ ಟೀಕಿಸಿದರು.

ಕಾಂಗ್ರೆಸ್ ಯುವ ಅಧ್ಯಕ್ಷ ನಲಪಾಡ್ ಪ್ರತಿ ಜಿಲ್ಲೆಗೂ ಬಂದು ಚಡ್ಡಿ ಸುಡುತ್ತೇನೆ ಎಂದು ಹೇಳಿದ್ದಾರೆ. ಅವರಿಗೆ ಯಾವುದೆ ಕಷ್ಟ ಅಗಬಾರದು ಅಂತಾ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಲಕ್ಷಾಂತರ ಚಡಿಗಳನ್ನು ಕೆಪಿಸಿಸಿ ಕಚೇರಿಗೆ ನಾವೇ ಕಳುಹಿಸುತ್ತೇವೆ. ಮುಂದಿನ ದಿನಗಳಲ್ಲಿ ದೇಶದ ಮೂಲೆ ಮೂಲೆಗಳಿಂದ ಚಡ್ಡಿಗಳು ಕೆಪಿಸಿಸಿ ಕಚೇರಿಗೆ ಬರುತ್ತವೆ. ಆಗ ನಲಪಾಡ್ ಮತ್ತು ಕಾಂಗ್ರೆಸ್ ಮುಖಂಡರು ಎಲ್ಲಾ ಜಿಲ್ಲೆಗಳ ಚಡ್ಡಿಗಳ ಸುಡುವೆ ಕೆಲಸವನ್ನು ಮಾಡಲಿ ಎಂದರು.
ಯಾವುದೇ ರಾಜಕೀಯ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ಮತ್ತೊಂದು ರಾಜಕೀಯ ಪಕ್ಷಗಳ ಬಗ್ಗೆ ಮಾತನಾಡಲಿ. ಅದನ್ನು ಬಿಟ್ಟು ಸದಾಕಾಲ ದೇಶದ ಹಿತಕ್ಕಾಗಿ ಶ್ರಮಿಸುತ್ತಿರುವ ಸಂಘದ ವಿರುದ್ಧ ಮಾತನಾಡಬಾರದು ಎಂದು ಆರ್ ಎಸ್ ಎಸ್ ಮುಖಂಡ ಮಂಜುನಾಥ ಒತ್ತಾಯಿಸಿದರು.
ಈ ಸಮಯದಲ್ಲಿ ಬಸವರಾಜ್ ಸ್ವಾಮಿಗಳು, ಹಿಂದೂ ಸಂಘಟನೆಯ ಹಿರಿಯ ಮುಖಂಡ ಕುಕ್ಕಿಲಿ ಮಂಜುನಾಥ್, ಮುರುಗೇಶ್, ಲೋಕೇಶ್, ತೆರ್ನೆನಹಳ್ಳಿ ಪ್ರದೀಪ್, ಅರುಣ್ಕುಮಾರ್ ಮತ್ತಿತ್ತರರು ಹಾಜರಿದ್ದರು.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications