Mandya: ಕಾಡುಹಂದಿ ದಾಳಿಗೆ ವ್ಯಕ್ತಿ ಬಲಿ; ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ : ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಚಿಕ್ಕಯಗಟಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಚಿಂದಗಿರಿದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಎಂಬುವರ ಮಗ ಶಿವ (48) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮಂಡ್ಯ-ನಾಗಮಂಗಲ ರಸ್ತೆಯ ಮಾರ್ಗವಾಗಿ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಕಾಡುಹಂದಿ ದಾಳಿ ಮಾಡಿದೆ. ಕೆಳಗೆ ಬಿದ್ದ ಶಿವು ಎಡ ತೊಡೆ ಮತ್ತು ಮರ್ಮಾಂಗಕ್ಕೆ ಹಂದಿ ಗುದ್ದಿದ ಪರಿಣಾಮ ತೀವ್ರ ರಕ್ತಸ್ತ್ರಾವಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಮೃತ ದೇಹವನ್ನು ಮಿಮ್ಸ್ನ ಶವಾಗಾರಕ್ಕೆ ಸಾಗಿಸಿದರು. ಶವ ಪರೀಕ್ಷೆ ನಡೆಸುವ ವೇಳೆ ಮಿಮ್ಸ್ ಶವಾಗಾರದ ಬಳಿ ಜಮಾಯಿಸಿದ ಮೃತನ ಸಂಬಂಧಿಕರು ಹಾಗೂ ಚಿಂದಗಿರಿದೊಡ್ಡಿ ಸುತ್ತಮುತ್ತಲ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತರಾಟೆಗೆ ತೆಗೆದುಕೊಂಡರು.
ಪರಿಹಾರ ನೀಡಲು ಆಗ್ರಹ
ಅಲೆಮಾರಿ ಸಮುದಾಯಕ್ಕೆ ಸೇರಿದ ಮೃತ ವ್ಯಕ್ತಿಯ ಕುಟುಂಬಕ್ಕೆ ಆಸ್ತಿ ಇಲ್ಲ, ಕೂಲಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು, ಆದರೆ ದುರಂತದಲ್ಲಿ ಮನೆ ನಿರ್ವಹಣೆ ಮಾಡುತ್ತಿದ್ದ ಶಿವು ಸಾವನಪ್ಪಿರುವುದರಿಂದ ಕುಟುಂಬ ಬೀದಿಗೆ ಬಿದ್ದಂತಾಗಿದೆ, ಅವರ ಬದುಕು ಮೂರಾಬಟ್ಟೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮೃತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಜೀವನ ಭದ್ರತೆಗಾಗಿ ಮೃತರ ಪುತ್ರ ಶ್ರೀನಿವಾಸ್ಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕು, ಮೃತನ ಪತ್ನಿ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕ ರವಿಕುಮಾರ್ ಭೇಟಿ
ಸುದ್ಧಿ ತಿಳಿದು ಸ್ಥಳಕ್ಕೆ ಶಾಸಕ ರವಿಕುಮಾರ್ ಭೇಟಿ ನೀಡಿ, ಪ್ರತಿಭಟನಾಕರರ ಮನವಿಯನ್ನು ಆಲಿಸಿ ಅರಣ್ಯ ಇಲಾಖೆಯಿಂದ ₹15 ಲಕ್ಷ ಪರಿಹಾರ ನೀಡಲಾಗುವುದು. ಖಾಯಂ ಸರ್ಕಾರಿ ಉದ್ಯೋಗ ನೀಡಲು ಅವಕಾಶ ಇಲ್ಲ ಪರಿಣಾಮ ಯಾವುದಾದರೂ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದರಲ್ಲದೆ, ವೈಯಕ್ತಿಕವಾಗಿ 50 ಸಾವಿರ ಪರಿಹಾರ ನೀಡಿದ ಬಳಿಕ ಮರಣೋತ್ತರ ಪರೀಕ್ಷೆಗೆ ಅವಕಾಶ ಕಲ್ಪಿಸಲಾಯಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications