ಸುಡುಗಾಡು ಭಾಗ್ಯ’ ಕರುಣಿಸಿದ ಸಿಎಂ: ಮಂಡ್ಯದಲ್ಲಿ ಆಕ್ರೋಶ
ಮಂಡ್ಯ, ಸೆಪ್ಟೆಂಬರ್ 13: ರಾಜ್ಯದ ಜನತೆಗೆ ಇನ್ನಿಲ್ಲದ ಭಾಗ್ಯ'ಗಳನ್ನು ನೀಡಿ ಭಾಗ್ಯ'ಗಳ ಸರದಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ರೈತರು ಹಾಗೂ ಜನತೆಗೆ ಸುಡುಗಾಡು ಭಾಗ್ಯ'ವನ್ನೂ ಕರುಣಿಸಿದ್ದಾರೆ ಎಂದು ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ಹುಬ್ಬಳ್ಳಿ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಕುಲಕರ್ಣಿ ಹರಿಹಾಯ್ದಿದ್ದಾರೆ.
ನಗರದ ಸರ್ ಎಂ.ವಿ. ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಕೇಳಿದರೆ ಪೊಲೀಸರನ್ನು ಬಿಟ್ಟು ದೌರ್ಜನ್ಯ ನಡೆಸುತ್ತಾರೆ. ಕನ್ನಡಿಗರು ಸಿಡಿದೆದ್ದರೆ ಯಾವ ಸರ್ಕಾರವೂ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.[ಮಂಡ್ಯ ಧರಣಿಯಲ್ಲಿ ಮಹದಾಯಿ, ಕಳಸಾ ಬಂಡೂರಿ ರೈತ ಒಕ್ಕೂಟ]

ರೈತರ ಹಿತವನ್ನು ಕಾಪಾಡದ ಸರ್ಕಾರ ಒಂದು ಹೆಣ್ಣಿಗೆ ಹೆದರಿ ನೀರು ಬಿಡುವುದು ದುರಂತ. ನೀರು ಹರಿಸಲು ಸಾಧ್ಯವಿಲ್ಲ ಎಂಬ ಕಠಿಣ ಸಂದೇಶವನ್ನು ಸರ್ಕಾರ ಸುಪ್ರೀಂ ಕೋರ್ಟ್ ಗೆ ನೀಡಬೇಕು. ರಾಜ್ಯದ ಜನರು ನಿಮ್ಮ ಜತೆ ಇರುತ್ತಾರೆ ಎಂದು ಹೇಳಿದರು.
ದಪ್ಪ ಚರ್ಮದ ರಾಜಕಾರಣಿಗಳಿಗೆ ರೈತರ ಶಾಂತಿಯುತ ಹೋರಾಟ, ಚಳವಳಿ ಕೇಳುವುದಿಲ್ಲ. ಆದ್ದರಿಂದ ರಾಜಕಾರಣಿಗಳಿಗೆ ಬಾರುಕೋಲಿನಿಂದ ಬಾರಿಸುವ ಮೂಲಕ ಚಳವಳಿ ನಡೆಸಬೇಕು. ರಾಜ್ಯದ ಸಂಸದರು, ಶಾಸಕರು, ಮುಖ್ಯಮಂತ್ರಿ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು. ಕಾವೇರಿ, ಮಲಪ್ರಭಾ, ಕಳಸಾ ಬಂಡೂರಿ ಯೋಜನೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಪ್ರಧಾನಿ ಮೇಲೆ ಒತ್ತಡ ಹೇರಬೇಕು ಎಂದರು.[ತಮಿಳು ಭಾಷಿಕರಿಗೆ ಮಂಡ್ಯದಲ್ಲಿ ರಕ್ಷಣೆ ಕೊಡ್ತೀವಿ]
ತಮಿಳುನಾಡಿನಲ್ಲಿ ಪೊಲೀಸರು ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇಲ್ಲಿನ ರಾಜಕಾರಣಿಗಳಿಗೆ ನ್ಯಾಯ ಕೇಳುವ ಶಕ್ತಿ ಇಲ್ಲ, ಪೊಲೀಸರಿಂದ ಗೋಲಿಬಾರ್ ನಡೆಸುವ ಮೂಲಕ ಚಳವಳಿಗಾರರನ್ನು ಬಲಿ ಪಡೆಯುತ್ತಿದ್ದಾರೆ ಎಂದು ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ಮುಖಂಡ ಗಿರೀಶ್ ಮಟ್ಟಣ್ಣನವರ್ ಕಿಡಿ ಕಾರಿದರು.
ನಗರದ ಸರ್ ಎಂ.ವಿ. ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರು ಹಾಗೂ ಜನತೆಗೆ ಕುಡಿಯುವ ನೀರೊದಗಿಸದ ಸರ್ಕಾರ ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸಿದೆ ಎಂದು ಗುಡುಗಿದರು.['ಗಂಟೆಗೊಂದು ಮಾತಾಡುವ ಸಿದ್ದರಾಮಯ್ಯನ್ನ ನಾವು ನಂಬಲ್ಲ']
ನಾವು ಹೊರರಾಜ್ಯದ ನೀರನ್ನು ಕೇಳುತ್ತಿಲ್ಲ, ಕಾವೇರಿ, ಕಬಿನಿ, ಹೇಮಾವತಿ, ಮಹದಾಯಿ, ಹಾರಂಗಿ ಜಲಾಶಯ ಭಾಗದ ಜನರಿಗೆ ಕುಡಿಯಲು ನೀರು ಕೇಳುತ್ತಿದ್ದೇವೆ. ಕಷ್ಟದಲ್ಲಿರುವ ರೈತರನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ನಡೆದುಕೊಳ್ಳಬೇಕು. ತಮಿಳುನಾಡಿಗೆ ನೀರು ಹರಿಸಬಾರದು. ನಮ್ಮ ರಾಜ್ಯದ ನೀರನ್ನು ನಾವೇ ಕುಡಿಯಲು ಬೇಕು ಎಂದು ಕೇಳಲು ರಾಜಕಾರಣಿಗಳಿಗೆ ಶಕ್ತಿಯಿಲ್ಲ ಎಂದು ದೂರಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications