ಪುಲ್ವಾಮ ಹುತಾತ್ಮ ಯೋಧ ಗುರು ಸಮಾಧಿಗೆ ಪತ್ನಿ ಕಲಾವತಿಯಿಂದ ಪೂಜೆ
ಪುಲ್ವಾಮ ದಾಳಿಯಲ್ಲಿ ಹುತಾತ್ಮನಾದ ಯೋಧ ಎಚ್. ಗುರು ಅವರ ಪುಣ್ಯ ಸ್ಮರಣೆಯನ್ನು ಪತ್ನಿ ಕಲಾವತಿ ಇಂದು ಏರ್ಪಡಿಸಿದ್ದು, ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನಡೆಸಲಿದ್ದಾರೆ.
ಮಂಡ್ಯ, ಫೆಬ್ರವರಿ 16: ಪುಲ್ವಾಮ ದಾಳಿಯಲ್ಲಿ ಹುತಾತ್ಮನಾದ ಯೋಧ ಎಚ್. ಗುರು ಅವರ ಪುಣ್ಯ ಸ್ಮರಣೆಯನ್ನು ಪತ್ನಿ ಕಲಾವತಿ ಇಂದು ಏರ್ಪಡಿಸಿದ್ದು, ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನಡೆಸಲಿದ್ದಾರೆ.
ಪ್ರತಿ ರಾಷ್ಟ್ರೀಯ ಹಬ್ಬಗಳಲ್ಲೂ ಬಂದು ಪೂಜೆ ಸಲ್ಲಿಸುತ್ತಿರುವ ಯೋಧ ಗುರು ಅವರ ಪತ್ನಿ ಕಲಾವತಿ, ಕೌಟುಂಬಿಕ ಕಲಹಗಳಿಂದ ದೂರ ಉಳಿದಿದ್ದು, ಇದೀಗ ಭಾನುವಾರ ಪ್ರತ್ಯೇಕವಾಗಿ ಪೂಜೆ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಫೆ.14 ರಂದು ಗುರು ತಂದೆ ಹೊನ್ನಯ್ಯ ಮತ್ತು ತಾಯಿ ಚಿಕ್ಕೋಳಮ್ಮ ಪುಣ್ಯ ಸ್ಮರಣೆ ಕಾರ್ಯಕ್ರಮ ಏರ್ಪಡಿಸಿ, ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಈ ವೇಳೆ ಗುರು ಪತ್ನಿ ಕಾಣದೇ ಇದ್ದಿದ್ದು ಹಲವು ಚರ್ಚೆಗಳಿಗೆ ಕಾರಣವಾಗಿತ್ತು.

ಪುಲ್ವಾಮ ದಾಳಿ ಆದ ನಂತರ ಗುರು ಅವರ ಮೃತ ದೇಹ ದೊರೆತ ದಿನವನ್ನು ಪರಿಗಣಿಸಿ ಫೆ.16 ರಂದು ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಡೆಸಲಾಗುವುದೆಂದು ಹೇಳಿದ್ದಾರೆ.
ಫೆ.16 ರಂದು ಒಟ್ಟಿಗೆ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡುವಂತೆ ಅತ್ತೆ, ಮಾವನ ಜೊತೆ ಚರ್ಚೆ ಮಾಡಿದ್ದೆ. ಆದರೂ ಅವರು ನನಗೆ ಅವಮಾನ ಮಾಡಬೇಕೆಂಬ ಉದ್ದೇಶದಿಂದಲೇ ಪ್ರತ್ಯೇಕವಾಗಿ ಪೂಜೆ ಮಾಡಿದ್ದಾರೆ. ನಾನು ನನ್ನ ಸ್ವಂತ ಖರ್ಚಿನಲ್ಲೆ ಸ್ಮಾರಕವನ್ನು ನಿರ್ಮಿಸಲು ಮುಂದಾಗಿದ್ದೇನೆ ಎಂದು ಹೇಳಿದ್ದಾರೆ.
ಈ ನಡುವೆ ಹುತಾತ್ಮ ಗುರುವಿನ ಪತ್ನಿ ಕಲಾವತಿ ಮತ್ತು ತಾಯಿ ಚಿಕ್ಕೋಳಮ್ಮನ ನಡುವೆ ಹಣಕಾಸಿನ ವಿಚಾರದಲ್ಲಿ ಮುನಿಸಿಕೊಂಡು ಪ್ರತ್ಯೇಕವಾಗಿರುವ ಹಿನ್ನೆಲೆಯಲ್ಲಿ, ಗುರು ಪತ್ನಿ ಕಲಾವತಿ ಪೊಲೀಸ್ ಠಾಣೆಗೆ ತೆರಳಿ, ಭಾನುವಾರ ಸಮಾಧಿಗೆ ಪೂಜೆ ಸಲ್ಲಿಸುತ್ತೇನೆ. ನನಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.
ಈ ಸಂಬಂಧ ಪೊಲೀಸರು ಗುಡಿಗೆರೆ ಕಾಲೋನಿಯಲ್ಲಿರುವ ಚಿಕ್ಕೋಳಮ್ಮನ ಮನೆಗೆ ತೆರಳಿ ಸೊಸೆ ಕಲಾವತಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಅತ್ತ ಗುರು ತಾಯಿ ಚಿಕ್ಕೋಳಮ್ಮ ಭಾನುವಾರ ಚಿಕ್ಕರಸಿನಕೆರೆ ಶ್ರೀಕಾಲಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಂಡು ಅನ್ನಸಂತರ್ಪಣೆ ಏರ್ಪಡಿಸಿದ್ದಾರೆ. ಒಟ್ಟಾರೆ ಅತ್ತೆ ಸೊಸೆ ನಡುವಿನ ಮನಸ್ತಾಪ ಕುಟುಂಬದಲ್ಲಿ ಬಿರುಕಿಗೆ ಕಾರಣವಾಗಿ ಪ್ರತ್ಯೇಕ ಪೂಜೆ ಮಾಡುವ ಮಟ್ಟಕ್ಕೆ ಬಂದು ನಿಂತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications