ಪುಲ್ವಾಮಾ ದಾಳಿ; ಹುತಾತ್ಮ ಗುರು ಸಮಾಧಿಗೆ ಪ್ರತ್ಯೇಕ ಪೂಜೆ
ಮಂಡ್ಯ, ಫೆಬ್ರವರಿ 14; ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ದಾಳಿ ನಡೆದು ಎರಡು ವರ್ಷಗಳು ಕಳೆದಿದ್ದು, ದೇಶದ ಜನರು ಇಂದು ಹುತಾತ್ಮರಾಧ ಯೋಧರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.
ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ. ಎಂ. ದೊಡ್ಡಿ ಸಮೀಪದ ಗುಡಿಗೆರೆ ಗ್ರಾಮದ ಗುರು (33) ಹುತಾತ್ಮರಾಗಿದ್ದರು. ಗುರು ಸಿಆರ್ಪಿಎಫ್ 82ನೇ ಬೆಟಾಲಿಯನ್ ಯೋಧರಾಗಿದ್ದರು.
ಗುರು ಹುತಾತ್ಮರಾದ ಬಳಿಕ ಕರ್ನಾಟಕ ಸರ್ಕಾರ, ವಿವಿಧ ಸಂಘಟನೆಗಳಿಂದ ಅವರ ಕುಟುಂಬಕ್ಕೆ ಅಪಾರವಾದ ಹಣ ಹರಿದು ಬಂತು. ಹಣವ ವಿಚಾರದಲ್ಲಿ ಗುರು ಪತ್ನಿ ಮತ್ತು ತಂದೆ-ತಾಯಿಗಳ ನಡುವೆ ಅಸಮಾಧಾನ ಉಂಟಾಗಿತ್ತು.

ಕಳೆದ ವರ್ಷ ಗುರು ಪತ್ನಿ ಮತ್ತು ತಂದೆ-ತಾಯಿ ಪ್ರತ್ಯೇಕವಾಗಿ ಗುರು ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಪರಸ್ಪರ ವಿರುದ್ಧ ಆರೋಪಗಳನ್ನು ಮಾಡಿದ್ದರು. ಈ ಮೂಲಕ ಕುಟುಂಬದ ಅಸಮಾಧಾನವನ್ನು ಹೊರಹಾಕಿದ್ದರು.
ಈ ವರ್ಷವೂ ಸಹ ಪತ್ನಿ, ಕುಟುಂಬದವರು ಪ್ರತ್ಯೇಕವಾಗಿ ಗುರು ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಕುಟುಂಬದಲ್ಲಿನ ಬಿಕ್ಕಟ್ಟು ಇನ್ನೂ ಅಂತ್ಯವಾಗಿಲ್ಲ. ಗುರು ಅವರ ಪತ್ನಿ ಅತ್ತೆ, ಮಾವನ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.
ಹುತಾತ್ಮರಾದ ಗುರು ಅವರು ಪ್ರಾಥಮಿಕ ಶಾಲಾ ವ್ಯಾಸಂಗವನ್ನು ಮದ್ದೂರು ತಾಲೂಕಿನ ಭಾರತೀನಗರ ದಿವ್ಯಜ್ಯೋತಿ ಕಾನ್ವೆಂಟ್ನಲ್ಲಿ ಮಾಡಿದ್ದರು. ಸರ್ಕಾರಿ ಪ್ರೌಢಶಾಲೆಯಲ್ಲಿಯೂ ವ್ಯಾಸಂಗ ಮಾಡಿದ್ದರು. ಶ್ರೀರಂಗಪಟ್ಟಣದ ಐಟಿಐ ಕಾಲೇಜಿನಲ್ಲಿ ಓದಿದ್ದರು.
ಎಸ್ಎಸ್ಎಲ್ಸಿ ಆಧಾರದ ಮೇಲೆ ಸಿಆರ್ಪಿಎಫ್ ಸೇರಿದ್ದರು. ಸುಮಾರು7 ವರ್ಷಗಳ ಕಾಲ ಗುರು ಅವರು ದೇಶದ ವಿವಿಧ ಭಾಗದಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು.
ಸ್ಮಾರಕ ನಿರ್ಮಾಣ ಆಗಿಲ್ಲ; ಮಂಡ್ಯ ಜಿಲ್ಲಾಡಳಿತ ಗುರು ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಭರವಸೆ ನೀಡಿತ್ತು. ಆದರೆ, ಎರಡು ವರ್ಷ ಕಳೆದರೂ ಸ್ಮಾರಕ ನಿರ್ಮಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications