ಕೆಆರ್ಎಸ್ ಸುತ್ತ ಗಣಿಗಾರಿಕೆ ನಿಲ್ಲಿಸುವಂತೆ ಪುಣೆ ಟೆಕ್ನಿಕಲ್ ಟೀಂ ಸೂಚಿಸಿತ್ತು
ಮಂಡ್ಯ, ಜುಲೈ 14: "ಪುಣೆಯಿಂದ ಬಂದಿದ್ದ ಟೆಕ್ನಿಕಲ್ ಟೀಂ ಕೆಆರ್ಎಸ್ ಜಲಾಶಯ ಬಳಿ ಗಣಿಗಾರಿಕೆ ಬಂದ್ ಮಾಡಿಸುವಂತೆ ಸೂಚನೆ ನೀಡಿತ್ತು,'' ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ.
"ನಾನು ಎರಡು ಬಾರಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕನಾಗಿದ್ದೆ. ನಮ್ಮ ಕಾಲದಲ್ಲೂ ಕೆಆರ್ಎಸ್ ಅಣೆಕಟ್ಟೆ ಬಗ್ಗೆ ಸಣ್ಣಪುಟ್ಟ ವ್ಯತ್ಯಾಸಗಳು ಕಂಡುಬಂದಿದ್ದವು. ಆಗ ಪುಣೆ ಟೆಕ್ನಿಕಲ್ ಟೀಂ ಸಲಹೆ ನೀಡಿತ್ತು," ಎಂದರು.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಬಂಡಿಸಿದ್ದೇಗೌಡ, "ಪುಣೆ ಟೆಕ್ನಿಕಲ್ ಟೀಂ ಕೆಆರ್ಎಸ್ ಅಣೆಕಟ್ಟೆ ಸುತ್ತ ಸರ್ವೆ ಮಾಡಿತ್ತು. 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಬಂದ್ ಮಾಡಿಸಬೇಕು ಎಂದು ಸಹ ಸೂಚಿಸಿತ್ತು. ಅಂದಿನ ಜಿಲ್ಲಾಧಿಕಾರಿಗಳು ಅದರ ಬಗ್ಗೆ ಕ್ರಮ ತೆಗೆದುಕೊಂಡಿದ್ದರು. ನಂತರ ಸರ್ಕಾರ ಬದಲಾವಣೆ ಆಯಿತು, ಆಗ ಅದರ ನಿಲುವು ಸಹ ಬದಲಾಗಿದೆ,'' ಎಂದು ತಿಳಿಸಿದರು.

"ಈಗ ಮತ್ತೆ ಕೆಆರ್ಎಸ್ ಎದುರಾಗುವ ಸಮಸ್ಯೆ ಬಗ್ಗೆ ಚರ್ಚೆ ಆರಂಭವಾಗಿದ್ದು, ರಾಜ್ಯ ಸರ್ಕಾರ ಒಂದು ಟೆಕ್ನಿಕಲ್ ಟೀಂ ರಚನೆ ಮಾಡಲಿ. ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಿ."
"ಇದು ಬಿಟ್ಟು ಅನವಶ್ಯಕವಾಗಿ ರಸ್ತೆಯಲ್ಲಿ ನಿಂತು ಜಗಳವಾಡುವುದರಿಂದ ಜನಸಾಮಾನ್ಯರು ನಮ್ಮ ಮೇಲೆ ಇಟ್ಟ ಗೌರವ ಕಡಿಮೆ ಆಗುತ್ತದೆ. ಸಣ್ಣಪುಟ್ಟ ಸಮಸ್ಯೆ ಬಿಟ್ಟರೆ ಕೆಆರ್ಎಸ್ನಲ್ಲಿ ಬೇರೆ ಸಮಸ್ಯೆಗಳಿಲ್ಲ. ಮುಂದೆ ಇದೇ ಸಮಸ್ಯೆ ದೊಡ್ಡದಾಗಬಾರದು,'' ಎಂದು ರಮೇಶ್ ಬಂಡಿಸಿದ್ದೇಗೌಡ ತಿಳಿ ಹೇಳಿದರು.
Recommended Video
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications