ಪಾಂಡವಪುರದಲ್ಲಿ ನ. 25ರಿಂದ ಮೂರು ದಿನಗಳ ಪುನೀತೋತ್ಸವ; ಒಂದು ಸಾವಿರ ವಿದ್ಯಾರ್ಥಿನಿಯರಿಂದ ಗಾಯನ
ಪಾಂಡವಪುರ, ನವೆಂಬರ್, 23: ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27ರಂದು ಮೂರು ದಿನಗಳ ಕಾಲ ಶಾಸಕ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಪುನೀತೋತ್ಸವ ಕಾರ್ಯಕ್ರಮದಲ್ಲಿ ನಡೆಯಲಿದೆ. ಪುನೀತೋತ್ಸವ ಕಾರ್ಯಕ್ರಮದಲ್ಲಿ ಪಟ್ಟಣದ ಬಾಲಕೀಯರ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ಒಂದು ಸಾವಿರ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಹಾಡು ಹೇಳುವ ಮೂಲಕ ದಾಖಲೆ ನಿರ್ಮಿಸಲು ತಯಾರಾಗಿದ್ದಾರೆ.
ಒಂದು ಸಾವಿರ ವಿದ್ಯಾರ್ಥಿನಿಯರಿಂದ ಹಾಡು
ಕಾರ್ಯಕ್ರಮದಲ್ಲಿ ನಟ ಡಾ.ಪುನೀತ್ ರಾಜ್ಕುಮಾರ್ಗಾಗಿ ಹಾಡು ಹೇಳಲು ವಿದ್ಯಾರ್ಥಿನಿಯರು ತರಬೇತಿ ನಡೆಸಿದರು. ಕಾರ್ಯಕ್ರಮದಲ್ಲಿ ಒಂದು ಸಾವಿರ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಪುನೀತ್ ರಾಜ್ಕುಮಾರ್ ಕುರಿತು ಹಾಡು ಹೇಳಲಿದ್ದು, ಈ ಹಿನ್ನೆಲೆ ಪಾಂಡವಪುರ ಪಟ್ಟಣದಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಹಾಡುವ ಹೇಳಲು ತರಬೇತಿ ಪಡೆದರು. ಕಾರ್ಯಕ್ರಮದಲ್ಲಿ ನಾಡಗೀತೆ ಸೇರಿದಂತೆ ಹಲವು ಜಾನಪದ ಗೀತೆಗಳು ಹಾಗೂ ಪುನೀತ್ರಾಜ್ಕುಮಾರ್ ಅವರ ಕುರಿತ ಹಲವು ಹಾಡುಗಳನ್ನು ಹಾಡಲಿದ್ದಾರೆ.
ಸುಮಾರು ಒಂದು ಗಂಟೆಗೂ ಅಧಿಕ ಕಾಲ ಪಾಂಡವ ಕ್ರೀಡಾಂಗಣದಲ್ಲಿ ಒಂದು ಸಾವಿರ ವಿದ್ಯಾರ್ಥಿನಿಯರು ಪ್ರಾಕ್ಟೀಸ್ ನಡೆಸಿದರು. ಒಂದು ಸಾವಿರ ವಿದ್ಯಾರ್ಥಿನಿಯರು ಏಕಕಾಲದಲ್ಲಿ ತೆರೆದ ಬೃಹತ್ ವೇದಿಕೆಯಲ್ಲಿ ಹಾಡು ಹೇಳುತ್ತಿರುವುದು ಇದೇ ಮೊದಲಾಗಿದೆ. ಇದೊಂದು ದಾಖಲೆಯ ಪುಟ ಸೇರಲಿದೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಅವರು ಹೇಳಿದರು.

ಮೂರು ದಿನಗಳ ಕಾಲ ನಡೆಯುವ ಪುನೀತೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಸಿ.ಪಿ.ಶಿವರಾಜು ಮನವಿ ಮಾಡಿದರು.
ಇತ್ತೀಚೆಗಷ್ಟೇ ಅಪ್ಪು ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಿದ್ದು, ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಜನಸಾಗರವೇ ಸೇರಿತ್ತು. ಪುನೀತ್ ರಾಜ್ಕುಮಾರ್ ಅವರು ನಮ್ಮನ್ನ ಅಗಲಿ ಒಂದು ವರ್ಷ ಕಳೆದರೂ ಕೂಡ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅಪ್ಪು ಸಮಾಧಿ ಬಳಿ ಈಗಲೂ ಕೂಡ ಜನಸಾಗರ ಸೇರುತ್ತಿದೆ.

ಎಷ್ಟೇ ಕೆಲಸಗಳು ಇದ್ದರೂ ಕೂಡ ಅಪ್ಪು ಸಮಾಧಿ ಬಳಿ ಬಂದು ಕುಳಿತು ವಿಶ್ರಾಂತಿ ಪಡೆಯುವವರನ್ನು ಈಗಲೂ ನೋಡಬಹುದಾಗಿದೆ. ದೂರದ ಊರುಗಳಿಂದ ಜನರು ಬರುತ್ತಿದ್ದು, ಸಮಾಧಿ ಬಳಿ ಯಾವಾಗಲೂ ಜಾತ್ರೆಯಂತೆಯೇ ಅಭಿಮಾನಿಗಳು ಸೇರಿರುತ್ತಾರೆ. ಹೀಗೆ ಪುನೀತ್ ರಾಜ್ಕುಮಾರ್ ರಾಜ್ಯದ ಜನರ ಮನಸಿನಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications