ಪಾಂಡವಪುರದಲ್ಲಿ ನ. 25ರಿಂದ ಮೂರು ದಿನಗಳ ಪುನೀತೋತ್ಸವ; ಒಂದು ಸಾವಿರ ವಿದ್ಯಾರ್ಥಿನಿಯರಿಂದ ಗಾಯನ
ಪಾಂಡವಪುರ, ನವೆಂಬರ್, 23: ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27ರಂದು ಮೂರು ದಿನಗಳ ಕಾಲ ಶಾಸಕ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಪುನೀತೋತ್ಸವ ಕಾರ್ಯಕ್ರಮದಲ್ಲಿ ನಡೆಯಲಿದೆ. ಪುನೀತೋತ್ಸವ ಕಾರ್ಯಕ್ರಮದಲ್ಲಿ ಪಟ್ಟಣದ ಬಾಲಕೀಯರ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ಒಂದು ಸಾವಿರ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಹಾಡು ಹೇಳುವ ಮೂಲಕ ದಾಖಲೆ ನಿರ್ಮಿಸಲು ತಯಾರಾಗಿದ್ದಾರೆ.
ಒಂದು ಸಾವಿರ ವಿದ್ಯಾರ್ಥಿನಿಯರಿಂದ ಹಾಡು
ಕಾರ್ಯಕ್ರಮದಲ್ಲಿ ನಟ ಡಾ.ಪುನೀತ್ ರಾಜ್ಕುಮಾರ್ಗಾಗಿ ಹಾಡು ಹೇಳಲು ವಿದ್ಯಾರ್ಥಿನಿಯರು ತರಬೇತಿ ನಡೆಸಿದರು. ಕಾರ್ಯಕ್ರಮದಲ್ಲಿ ಒಂದು ಸಾವಿರ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಪುನೀತ್ ರಾಜ್ಕುಮಾರ್ ಕುರಿತು ಹಾಡು ಹೇಳಲಿದ್ದು, ಈ ಹಿನ್ನೆಲೆ ಪಾಂಡವಪುರ ಪಟ್ಟಣದಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಹಾಡುವ ಹೇಳಲು ತರಬೇತಿ ಪಡೆದರು. ಕಾರ್ಯಕ್ರಮದಲ್ಲಿ ನಾಡಗೀತೆ ಸೇರಿದಂತೆ ಹಲವು ಜಾನಪದ ಗೀತೆಗಳು ಹಾಗೂ ಪುನೀತ್ರಾಜ್ಕುಮಾರ್ ಅವರ ಕುರಿತ ಹಲವು ಹಾಡುಗಳನ್ನು ಹಾಡಲಿದ್ದಾರೆ.
ಸುಮಾರು ಒಂದು ಗಂಟೆಗೂ ಅಧಿಕ ಕಾಲ ಪಾಂಡವ ಕ್ರೀಡಾಂಗಣದಲ್ಲಿ ಒಂದು ಸಾವಿರ ವಿದ್ಯಾರ್ಥಿನಿಯರು ಪ್ರಾಕ್ಟೀಸ್ ನಡೆಸಿದರು. ಒಂದು ಸಾವಿರ ವಿದ್ಯಾರ್ಥಿನಿಯರು ಏಕಕಾಲದಲ್ಲಿ ತೆರೆದ ಬೃಹತ್ ವೇದಿಕೆಯಲ್ಲಿ ಹಾಡು ಹೇಳುತ್ತಿರುವುದು ಇದೇ ಮೊದಲಾಗಿದೆ. ಇದೊಂದು ದಾಖಲೆಯ ಪುಟ ಸೇರಲಿದೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಅವರು ಹೇಳಿದರು.

ಮೂರು ದಿನಗಳ ಕಾಲ ನಡೆಯುವ ಪುನೀತೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಸಿ.ಪಿ.ಶಿವರಾಜು ಮನವಿ ಮಾಡಿದರು.
ಇತ್ತೀಚೆಗಷ್ಟೇ ಅಪ್ಪು ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಿದ್ದು, ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಜನಸಾಗರವೇ ಸೇರಿತ್ತು. ಪುನೀತ್ ರಾಜ್ಕುಮಾರ್ ಅವರು ನಮ್ಮನ್ನ ಅಗಲಿ ಒಂದು ವರ್ಷ ಕಳೆದರೂ ಕೂಡ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅಪ್ಪು ಸಮಾಧಿ ಬಳಿ ಈಗಲೂ ಕೂಡ ಜನಸಾಗರ ಸೇರುತ್ತಿದೆ.

ಎಷ್ಟೇ ಕೆಲಸಗಳು ಇದ್ದರೂ ಕೂಡ ಅಪ್ಪು ಸಮಾಧಿ ಬಳಿ ಬಂದು ಕುಳಿತು ವಿಶ್ರಾಂತಿ ಪಡೆಯುವವರನ್ನು ಈಗಲೂ ನೋಡಬಹುದಾಗಿದೆ. ದೂರದ ಊರುಗಳಿಂದ ಜನರು ಬರುತ್ತಿದ್ದು, ಸಮಾಧಿ ಬಳಿ ಯಾವಾಗಲೂ ಜಾತ್ರೆಯಂತೆಯೇ ಅಭಿಮಾನಿಗಳು ಸೇರಿರುತ್ತಾರೆ. ಹೀಗೆ ಪುನೀತ್ ರಾಜ್ಕುಮಾರ್ ರಾಜ್ಯದ ಜನರ ಮನಸಿನಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications