ಉಪಚುನಾವಣೆ: ಮಂಡ್ಯದಿಂದ ಸ್ಪರ್ಧಿಸಲು ಆರ್.ಅಶೋಕ್ ಸ್ಪಷ್ಟ ನಕಾರ, ಕಾರಣ ಏನು?
Recommended Video

ಬೆಂಗಳೂರು, ಅಕ್ಟೋಬರ್ 09: ಮಂಡ್ಯ ಜಿಲ್ಲೆ ಲೋಕಸಭೆ ಉಪಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಆರ್.ಅಶೋಕ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ಬಿಜೆಪಿಗೆ ಹೊಸ ತಲೆನೋವು ತಂದಿದೆ.
ಮಂಡ್ಯ ಜಿಲ್ಲೆಗೆ ಪ್ರಭಾವಿ ಒಕ್ಕಲಿಗ ನಾಯಕನ ಹುಡುಕಾಟದಲ್ಲಿದ್ದ ಬಿಜೆಪಿ ಆರ್.ಅಶೋಕ್ ಅವರನ್ನು ಮಂಡ್ಯದಿಂದ ಸ್ಪರ್ಧಿಸುವಂತೆ ಕೇಳಿತ್ತು. ಆದರೆ ಉಳಿದಿರುವ ಕಡಿಮೆ ಸಮಯದಲ್ಲಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಸಂಘಟನೆ ಮಾಡುವುದು ಕಷ್ಟ ಎಂಬ ಕಾರಣಕ್ಕೆ ಆರ್.ಅಶೋಕ್ ಅವರು ಮಂಡ್ಯದಿಂದ ಸ್ಪರ್ಧಿಸಲು ಒಲ್ಲೆ ಎಂದಿದ್ದಾರೆ.
ಜೊತೆಗೆ ಬೆಂಗಳೂರು ಹಾಗೂ ರಾಜ್ಯ ರಾಜಕೀಯದಿಂದ ದೂರ ಹೋಗಲು ಆರ್.ಅಶೋಕ್ ಅವರಿಗೆ ಸುತಾರಾಂ ಇಷ್ಟವಿಲ್ಲ ಹಾಗಾಗಿ ಅವರು ಮಂಡ್ಯ ಆಫರ್ ಅನ್ನು ಸ್ಪಷ್ಟವಾಗಿ ಪಕ್ಕಕ್ಕೆ ತಳ್ಳಿದ್ದಾರೆ. ಆರ್.ಅಶೋಕ್ ವಾದವನ್ನು ಒಪ್ಪಿರುವ ಬಿಜೆಪಿ ಸಹ ಅಶೋಕ್ ಮೇಲೆ ಹೆಚ್ಚಿನ ಒತ್ತಡವನ್ನು ಹೇರುತ್ತಿಲ್ಲ.
ಆರ್.ಅಶೋಕ್ ಅವರನ್ನು ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸುವಂತೆ ಹೇಳುವಲ್ಲಿ ಬಿಜೆಪಿಯ ಕೆಲವು ಹಿರಿಯ ನಾಯಕರ ರಾಜಕೀಯ ತಂತ್ರವೂ ಇದೆ.

ಮಂಡ್ಯದ ಬಿಜೆಪಿ ಅಭ್ಯರ್ಥಿ ಯಾರು?
ಆರ್.ಅಶೋಕ್ ನಿರಾಕರಿಸಿದ ನಂತರ ಮಂಡ್ಯ ಜಿಲ್ಲೆಯಲ್ಲಿ ಅಭ್ಯರ್ಥಿ ವಿಷಯ ಬಿಜೆಪಿಗೆ ತಲೆನೋವಾಗಿದೆ. ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಪ್ರಭಾವಿ ಒಕ್ಕಲಿಗರನ್ನು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಿಜೆಪಿ ಲೆಕ್ಕಾಚಾರಕ್ಕೆ ಆರ್.ಅಶೋಕ್ ಹಿನ್ನಡೆ ಉಂಟು ಮಾಡಿದ್ದಾರೆ. ಹಾಗಾಗಿ ಮತ್ತೊಬ್ಬ ಪ್ರಭಾವಿಯ ಹುಡುಕಾಟದಲ್ಲಿ ಬಿಜೆಪಿ ಇದೆ.

ಯಾರು ಅಂತಿಮ ಆಯ್ಕೆ?
ಆರ್.ಅಶೋಕ್ ನಿರಾಕರಿಸಿದ ನಂತರ ಒಕ್ಕಲಿಗ ಸಂಘದ ಅಧ್ಯಕ್ಷ ಶಿವಲಿಂಗಯ್ಯ ಅವರನ್ನು ಅಭ್ಯರ್ಥಿ ಮಾಡಲು ಬಿಜೆಪಿ ನಿರ್ಧರಿಸಿದೆ. ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಲಾಯಿತಾದರೂ. ಅವರನ್ನು ಬೆಂಗಳೂರಿನ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿರುವ ಕಾರಣ ಉಪಚುನಾವಣೆ ಟಿಕೆಟ್ ಶಿವಲಿಂಗಯ್ಯಗೆ ಸಿಗುವ ಸಾಧ್ಯತೆ ಹೆಚ್ಚಿದೆ.

ಬೇರೆ ಪಕ್ಷದ ಅಭ್ಯರ್ಥಿಗೆ ಗಾಳ ಹಾಕಿದ್ದ ಬಿಜೆಪಿ
ಮಾಜಿ ಸಚಿವ ಚೆಲುವರಾಯಸ್ವಾಮಿ ಅವರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಬಿಜೆಪಿ ಯತ್ನ ನಡೆಸಿತ್ತು. ಕಳೆದ ವಿಧಾನಸಭೆ ಚುನಾವಣೆ ಸೋತಿರುವ ಕಾಂಗ್ರೆಸ್ನ ಚೆಲುವರಾಯಸ್ವಾಮಿಗೆ ಬಿಜೆಪಿ ಪರವಾಗಿ ಟಿಕೆಟ್ ಕೊಡುವುದಾಗಿಯೂ ಆಫರ್ ನೀಡಿತ್ತು. ಆದರೆ ಅವರು ನಿರ್ಧಾರ ಪ್ರಕಟಿಸಲು ತಡ ಮಾಡಿದರು ಎಂಬ ಕಾರಣದಿಂದ ಶಿವಲಿಂಗಯ್ಯ ಅವರಿಗೆ ಟಿಕೆಟ್ ನೀಡುವ ನಿರ್ಧಾರ ಹೊರಬಿತ್ತು.

ಆರ್.ಅಶೋಕ್ ಮೇಲೆ ಒತ್ತಡಕ್ಕೇನು ಕಾರಣ?
ಆರ್.ಅಶೋಕ್ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಇರುವ ಕಾರಣ ಅವರನ್ನು ರಾಜ್ಯ ರಾಜಕಾರಣದಿಂದ ದೂರ ಕಳಿಸಬೇಕೆಂದು ಬಿಜೆಪಿ ಕೆಲವು ನಾಯಕರು ಅವರ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಆರ್.ಅಶೋಕ್ ಅವರು ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಿದ್ದಾರೆ. ಅಲ್ಲದೆ ಬಿಬಿಎಂಪಿ ಚುನಾವಣೆಯಲ್ಲೂ ಯಶಸ್ಸು ಕಂಡಿಲ್ಲ ಹಾಗಾಗಿ ಅವರನ್ನು ರಾಜ್ಯ ರಾಜಕಾರಣದಿಂದ ದೂರ ಸರಿಸಬೇಕು ಎಂಬುದು ಕೆಲವು ಬಿಜೆಪಿ ನಾಯಕರ ತಂತ್ರವಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications