ಉಪಚುನಾವಣೆ: ಮಂಡ್ಯದಿಂದ ಸ್ಪರ್ಧಿಸಲು ಆರ್.ಅಶೋಕ್ ಸ್ಪಷ್ಟ ನಕಾರ, ಕಾರಣ ಏನು?
Recommended Video

ಬೆಂಗಳೂರು, ಅಕ್ಟೋಬರ್ 09: ಮಂಡ್ಯ ಜಿಲ್ಲೆ ಲೋಕಸಭೆ ಉಪಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಆರ್.ಅಶೋಕ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ಬಿಜೆಪಿಗೆ ಹೊಸ ತಲೆನೋವು ತಂದಿದೆ.
ಮಂಡ್ಯ ಜಿಲ್ಲೆಗೆ ಪ್ರಭಾವಿ ಒಕ್ಕಲಿಗ ನಾಯಕನ ಹುಡುಕಾಟದಲ್ಲಿದ್ದ ಬಿಜೆಪಿ ಆರ್.ಅಶೋಕ್ ಅವರನ್ನು ಮಂಡ್ಯದಿಂದ ಸ್ಪರ್ಧಿಸುವಂತೆ ಕೇಳಿತ್ತು. ಆದರೆ ಉಳಿದಿರುವ ಕಡಿಮೆ ಸಮಯದಲ್ಲಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಸಂಘಟನೆ ಮಾಡುವುದು ಕಷ್ಟ ಎಂಬ ಕಾರಣಕ್ಕೆ ಆರ್.ಅಶೋಕ್ ಅವರು ಮಂಡ್ಯದಿಂದ ಸ್ಪರ್ಧಿಸಲು ಒಲ್ಲೆ ಎಂದಿದ್ದಾರೆ.
ಜೊತೆಗೆ ಬೆಂಗಳೂರು ಹಾಗೂ ರಾಜ್ಯ ರಾಜಕೀಯದಿಂದ ದೂರ ಹೋಗಲು ಆರ್.ಅಶೋಕ್ ಅವರಿಗೆ ಸುತಾರಾಂ ಇಷ್ಟವಿಲ್ಲ ಹಾಗಾಗಿ ಅವರು ಮಂಡ್ಯ ಆಫರ್ ಅನ್ನು ಸ್ಪಷ್ಟವಾಗಿ ಪಕ್ಕಕ್ಕೆ ತಳ್ಳಿದ್ದಾರೆ. ಆರ್.ಅಶೋಕ್ ವಾದವನ್ನು ಒಪ್ಪಿರುವ ಬಿಜೆಪಿ ಸಹ ಅಶೋಕ್ ಮೇಲೆ ಹೆಚ್ಚಿನ ಒತ್ತಡವನ್ನು ಹೇರುತ್ತಿಲ್ಲ.
ಆರ್.ಅಶೋಕ್ ಅವರನ್ನು ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸುವಂತೆ ಹೇಳುವಲ್ಲಿ ಬಿಜೆಪಿಯ ಕೆಲವು ಹಿರಿಯ ನಾಯಕರ ರಾಜಕೀಯ ತಂತ್ರವೂ ಇದೆ.

ಮಂಡ್ಯದ ಬಿಜೆಪಿ ಅಭ್ಯರ್ಥಿ ಯಾರು?
ಆರ್.ಅಶೋಕ್ ನಿರಾಕರಿಸಿದ ನಂತರ ಮಂಡ್ಯ ಜಿಲ್ಲೆಯಲ್ಲಿ ಅಭ್ಯರ್ಥಿ ವಿಷಯ ಬಿಜೆಪಿಗೆ ತಲೆನೋವಾಗಿದೆ. ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಪ್ರಭಾವಿ ಒಕ್ಕಲಿಗರನ್ನು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಿಜೆಪಿ ಲೆಕ್ಕಾಚಾರಕ್ಕೆ ಆರ್.ಅಶೋಕ್ ಹಿನ್ನಡೆ ಉಂಟು ಮಾಡಿದ್ದಾರೆ. ಹಾಗಾಗಿ ಮತ್ತೊಬ್ಬ ಪ್ರಭಾವಿಯ ಹುಡುಕಾಟದಲ್ಲಿ ಬಿಜೆಪಿ ಇದೆ.

ಯಾರು ಅಂತಿಮ ಆಯ್ಕೆ?
ಆರ್.ಅಶೋಕ್ ನಿರಾಕರಿಸಿದ ನಂತರ ಒಕ್ಕಲಿಗ ಸಂಘದ ಅಧ್ಯಕ್ಷ ಶಿವಲಿಂಗಯ್ಯ ಅವರನ್ನು ಅಭ್ಯರ್ಥಿ ಮಾಡಲು ಬಿಜೆಪಿ ನಿರ್ಧರಿಸಿದೆ. ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಲಾಯಿತಾದರೂ. ಅವರನ್ನು ಬೆಂಗಳೂರಿನ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿರುವ ಕಾರಣ ಉಪಚುನಾವಣೆ ಟಿಕೆಟ್ ಶಿವಲಿಂಗಯ್ಯಗೆ ಸಿಗುವ ಸಾಧ್ಯತೆ ಹೆಚ್ಚಿದೆ.

ಬೇರೆ ಪಕ್ಷದ ಅಭ್ಯರ್ಥಿಗೆ ಗಾಳ ಹಾಕಿದ್ದ ಬಿಜೆಪಿ
ಮಾಜಿ ಸಚಿವ ಚೆಲುವರಾಯಸ್ವಾಮಿ ಅವರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಬಿಜೆಪಿ ಯತ್ನ ನಡೆಸಿತ್ತು. ಕಳೆದ ವಿಧಾನಸಭೆ ಚುನಾವಣೆ ಸೋತಿರುವ ಕಾಂಗ್ರೆಸ್ನ ಚೆಲುವರಾಯಸ್ವಾಮಿಗೆ ಬಿಜೆಪಿ ಪರವಾಗಿ ಟಿಕೆಟ್ ಕೊಡುವುದಾಗಿಯೂ ಆಫರ್ ನೀಡಿತ್ತು. ಆದರೆ ಅವರು ನಿರ್ಧಾರ ಪ್ರಕಟಿಸಲು ತಡ ಮಾಡಿದರು ಎಂಬ ಕಾರಣದಿಂದ ಶಿವಲಿಂಗಯ್ಯ ಅವರಿಗೆ ಟಿಕೆಟ್ ನೀಡುವ ನಿರ್ಧಾರ ಹೊರಬಿತ್ತು.

ಆರ್.ಅಶೋಕ್ ಮೇಲೆ ಒತ್ತಡಕ್ಕೇನು ಕಾರಣ?
ಆರ್.ಅಶೋಕ್ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಇರುವ ಕಾರಣ ಅವರನ್ನು ರಾಜ್ಯ ರಾಜಕಾರಣದಿಂದ ದೂರ ಕಳಿಸಬೇಕೆಂದು ಬಿಜೆಪಿ ಕೆಲವು ನಾಯಕರು ಅವರ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಆರ್.ಅಶೋಕ್ ಅವರು ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಿದ್ದಾರೆ. ಅಲ್ಲದೆ ಬಿಬಿಎಂಪಿ ಚುನಾವಣೆಯಲ್ಲೂ ಯಶಸ್ಸು ಕಂಡಿಲ್ಲ ಹಾಗಾಗಿ ಅವರನ್ನು ರಾಜ್ಯ ರಾಜಕಾರಣದಿಂದ ದೂರ ಸರಿಸಬೇಕು ಎಂಬುದು ಕೆಲವು ಬಿಜೆಪಿ ನಾಯಕರ ತಂತ್ರವಾಗಿತ್ತು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications