ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏ.13ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ರೋಡ್ ಶೋ

|
Google Oneindia Kannada News

ಮಂಡ್ಯ, ಏಪ್ರಿಲ್ 05 : ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತ ಯಾಚನೆ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.

ಹೌದು, ಏಪ್ರಿಲ್ 13ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ನಿಖಿಲ್ ಅನ್ನು ಸೋಲಿಸಲು ಷಡ್ಯಂತ್ರ ರಚಿಸಲಾಗಿದೆ: ಕುಮಾರಸ್ವಾಮಿನಿಖಿಲ್ ಅನ್ನು ಸೋಲಿಸಲು ಷಡ್ಯಂತ್ರ ರಚಿಸಲಾಗಿದೆ: ಕುಮಾರಸ್ವಾಮಿ

Rahul Gandhi road show in Mandya on April 13

ಮಂಡ್ಯ ಮತ್ತು ಕೆ.ಆರ್.ನಗರದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದು, ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಕಲಬುರಗಿ ಮತ್ತು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

ಮಂಡ್ಯದಲ್ಲಿ ಚೆಲುರಾಯಸ್ವಾಮಿ ಆಟ, ದಳಪತಿಗಳಿಗೆ ಸಂಕಟಮಂಡ್ಯದಲ್ಲಿ ಚೆಲುರಾಯಸ್ವಾಮಿ ಆಟ, ದಳಪತಿಗಳಿಗೆ ಸಂಕಟ

ಮಂಡ್ಯದ ಚುನಾವಣಾ ಕಣದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರು ಎದುರಾಳಿಗಳು. ಕಾಂಗ್ರೆಸ್‌ ಸಹ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದೆ.

ಸುಮಲತಾಗೆ ಜೈ ಎಂದ ಕೊತ್ತತ್ತಿ ಕಾಂಗ್ರೆಸ್ ಮುಖಂಡರು!ಸುಮಲತಾಗೆ ಜೈ ಎಂದ ಕೊತ್ತತ್ತಿ ಕಾಂಗ್ರೆಸ್ ಮುಖಂಡರು!

ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ಘೋಷಣೆ ಮಾಡಿದ್ದು ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಂಡು ಬರುವುದು ಎಚ್.ಡಿ.ಕುಮಾರಸ್ವಾಮಿ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದಾರೆ.

English summary
AICC president Rahul Gandhi road show in Mandya and K.R.Nagar on April 13, 2019. He will campaign for Mandya lok sabha seat Congress and JD(S) candidate Nikila Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X