Mandya: ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಿಢೀರ್ ದಾಳಿ
ಮಂಡ್ಯ: ಅಕ್ರಮ ಮರಳು ಗಣಿಗಾರಿಕಾ ತಾಣದ ಮೇಲೆ ದಿಢೀರ್ ದಾಳಿ ನಡೆಸಿದ ಕೆ.ಆರ್. ಪೇಟೆ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಮರಳು ಸಾಗಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದ ಬಳಿ ಹೇಮಾವತಿ ನದಿಯಿಂದ ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿತ್ತು. ಅಕ್ರಮ ಮರಳು ಗಣಿಗಾರಿಕಾ ತಾಣದ ಮೇಲೆ ದಿಢೀರ್ ದಾಳಿ ನಡೆಸಿದ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಮರಳು ಸಾಗಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮುಂಗಳವಾರ ತಡರಾತ್ರಿ ತಹಸೀಲ್ದಾರ್ ಲೋಕೇಶ್ ತಮ್ಮ ಇಲಾಖಾ ಸಿಬ್ಬಂಧಿಗಳ ಮೂಲಕ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದರು. ದಾಳಿ ಸಂದರ್ಭದಲ್ಲಿ ಮರಳು ತುಂಬಿದ ಟ್ರ್ಯಾಕ್ಟರ್ ಸ್ಥಳದಲ್ಲಿಯೇ ಬಿಟ್ಟು ಚಾಲಕ ಸೇರಿದಂತೆ ಎಲ್ಲರೂ ಪರಾರಿಯಾಗಿದ್ದಾರೆ.
ಟ್ರ್ಯಾಕ್ಟರ್ ಪಿಡಿಜಿ ಕೊಪ್ಪಲು ಗ್ರಾಮದ ನಾಗಾರ್ಜುನ ಎನ್ನುವವರಿಗೆ ಸೇರಿದ್ದೆಂದು ತಿಳಿಸಿರುವ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ವಶಕ್ಕೆ ಪಡೆದಿರುವ ಟ್ರ್ಯಾಕ್ಟರ್ ಅನ್ನು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದು ಟ್ರ್ಯಾಕ್ಟರ್ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
ನಾನು ನೂತನವಾಗಿ ಕೆ.ಆರ್.ಪೇಟೆ ತಹಸೀಲ್ದಾರ್ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಣಿಗಾರಿಕೆ ಪತ್ರಿಕಾ ವರದಿಗಳನ್ನು ಗಮನಿಸಿದ್ದೇನೆ. ಮರಳು ಗಣಿಗಾರಿಕೆ ಕಾನೂನಿಗೆ ವಿರುದ್ದವಾಗಿದ್ದು ಪರಿಸರಕ್ಕೆ ವಿರುದ್ದವಾಗಿದೆ. ಪರಿಸರ ಸಂರಕ್ಷಣೆ ನನ್ನ ಮೊದಲ ಆದ್ಯತೆಯಾಗಿದ್ದು ಯಾವುದೇ ಕಾರಣಕ್ಕೂ ಅಕ್ರಮ ಮರಳು ಗಣಿಗಾರಿಕೆಯನ್ನು ನಾನು ಸಹಿಸುವುದಿಲ್ಲ ಎಂದು ಹೇಳಿದರು.
ತಹಸೀಲ್ದಾರ್ ಎಸ್.ವಿ.ಲೋಕೇಶ್ ಈ ಕುರಿತು ಪೊಲೀಸ್ ಇಲಾಖೆ, ಕಂದಾಯ ಇಲಾಕೆಯ ಸಿಬ್ಬಂಧಿಗಳು ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೂ ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಕ್ರಮ ವಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications