ಜನವರಿ 4ರ ವರೆಗೆ ಭೀಮಾನಾಯ್ಕ್ ಗೆ ಜೈಲುವಾಸ

ಕಾರು ಚಾಲಕ ರಮೇಶ್ ಗೌಡ ಆತ್ಮಹತ್ಯೆ ಪ್ರಕರಣ : ಅಮಾನತಾಗಿರುವ ಕೆಎಎಸ್ ಅಧಿಕಾರಿ ಎಲ್. ಭೀಮಾನಾಯ್ಕ ಅವರ ನ್ಯಾಯಾಂಗ ಬಂಧನದ ಅವಧಿ ಜನವರಿ 4,2017ರ ತನಕ ವಿಸ್ತರಿಸಲಾಗಿದೆ.

ಮದ್ದೂರು, ಡಿಸೆಂಬರ್ 23: ಮದ್ದೂರು ಮೂಲದ ಕಾರು ಚಾಲಕ ರಮೇಶ್ ಗೌಡ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ಅಮಾನತಾಗಿರುವ ಕೆಎಎಸ್ ಅಧಿಕಾರಿ ಎಲ್. ಭೀಮಾನಾಯ್ಕ ಅವರ ನ್ಯಾಯಾಂಗ ಬಂಧನದ ಅವಧಿ ಜನವರಿ 4,2017ರ ತನಕ ವಿಸ್ತರಿಸಲಾಗಿದೆ.[ಚಾಲಕ ರಮೇಶ್ ಆತ್ಮಹತ್ಯೆ ಕೇಸ್, ಕೆಎಎಸ್ ಅಧಿಕಾರಿ ಅಮಾನತು!]

ಬೆಂಗಳೂರು ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭೀಮಾನಾಯ್ಕ್ ಹಾಗೂ ಕಾರು ಚಾಲಕ ಮಹಮ್ಮದ್ ಎಂಬುವವರನ್ನು ಮಂಡ್ಯಜಿಲ್ಲೆ ಮದ್ದೂರಿನ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶುಕ್ರವಾರ ಬೆಳಗ್ಗೆ ಹಾಜರುಪಡಿಸಲಾಯಿತು. ಭೀಮಾನಾಯ್ಕ್ ಹಾಗೂ ಮಹಮದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜನವರಿ 4 ರ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.[ಮನಿ ಲಾಂಡ್ರಿಂಗ್ ಕೇಸ್: ಬಿ ಶ್ರೀರಾಮುಲು ಗನ್ ಮ್ಯಾನ್ ಬಂಧನ]

Ramesh Suicide Case: KAS officer Bheema Naik sent to Judicial Custody till Jan 4
'ಭೀಮಾನಾಯ್ಕ ಅವರು ಗಾಲಿ ಜನಾರ್ದನ ರೆಡ್ಡಿ ಅವರ ಮಗಳ ಮದುವೆಗೆ 25 ಕೋಟಿ ಕಪ್ಪು ಹಣ ಬಿಳಿ ಮಾಡಿಕೊಟ್ಟಿದ್ದರು. ಈ ವಿಷಯ ಗೊತ್ತಿದ್ದ ನನಗೆ ಜೀವ ಬೆದರಿಕೆ ಒಡ್ಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಅವರ ಕಾರು ಚಾಲಕರಾಗಿದ್ದ ರಮೇಶ ಗೌಡ ಅವರು ತಮ್ಮ ಸೂಸೈಡ್ ನೋಟ್ ನಲ್ಲಿ ಉಲ್ಲೇಖಿಸಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+