ಮಳ್ಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ
ಮಂಡ್ಯ, ಅಕ್ಟೋಬರ್, 16: ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ.ಆರ್. ಪೇಟೆಯಲ್ಲಿ ಘೋಷಿಸಿದರು.
ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದ ಮಹಾಕುಂಭಮೇಳ ಸಮಾರಂಭದ ಉದ್ಘಾಟನೆ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು, ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಎಲ್ಲಾ ಸೆಕ್ಷನ್ಗಳನ್ನು ಹಾಕಿದ್ದಾರೆ. ಪ್ರಕರಣ ಸಂಬಂಧ ಕೂಡಲೇ ತನಿಖೆ ಆಗಬೇಕು. ಹಾಗೂ ತಪ್ಪಿತಸ್ಥನಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಪೊಲೀಸರಿಗೆ ಸೂಚಿಸಿದರು. ಎಫ್ಎಸ್ಎಲ್ ವರದಿಯನ್ನು ವಾರದ ಒಳಗೆ ಕಳುಹಿಸುವುದಾಗಿ ಪೊಲೀಸರು ಹೇಳಿದ್ದಾರೆ. ವರದಿ ಬಂದ ಕೂಡಲೇ ದೋಷಾರೋಪಣಾ ಪಟ್ಟಿಯನ್ನು ಪೋಕ್ಸೋ ನ್ಯಾಯಾಲಯಕ್ಕೆ ರವಾನಿಸಿ ಆದಷ್ಟು ಬೇಗ ಈ ಪ್ರಕರಣಕ್ಕೆ ನ್ಯಾಯ ದೊರಕಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕಠಿಣ ಕ್ರಮ ಜರುಗಿಸುವಂತೆ ಸೂಚನೆ
ಇಂತಹ ಅತ್ಯಾಚಾರ ಕೃತ್ಯ ನಡೆಸುವವರಿಗೆ ಈ ಪ್ರಕರಣ ಉದಾಹರಣೆ ಆಗಬೇಕಿದೆ. ಇನ್ನೊಮ್ಮೆ ಈ ರೀತಿಯ ಅತ್ಯಾಚಾರ ನಡೆದರೆ ಅತಿ ಕಡಿಮೆ ಅವಧಿಯಲ್ಲಿ ಉಗ್ರ ಶಿಕ್ಷೆ ನೀಡಲಾಗುತ್ತದೆ ಎಂಬ ಸಂದೇಶವನ್ನು ಸಮಾಜಕ್ಕೆ ರವಾನಿಸಬೇಕು. ಮನುಷ್ಯತ್ವ ಇಲ್ಲದವರು ಮಾತ್ರ ಇಂತಹ ಕೃತ್ಯ ಮಾಡಲು ಸಾಧ್ಯ. ಏನೂ ತಿಳಿಯದ ಆ ಕಂದಮ್ಮನ ಮೇಲಿನ ಅತ್ಯಾಚಾರ, ಹತ್ಯೆಯನ್ನು ನೆನೆದರೆ ಕರುಳು ಕಿತ್ತು ಬರುತ್ತದೆ. ವೌಲ್ಯಗಳ ಕುಸಿತದಿಂದ ಹೀಗೆಲ್ಲಾ ಆಗುತ್ತಿದೆ. ಯಾವುದು ಸರಿ, ತಪ್ಪು ಎಂಬ ಸ್ಪಷ್ಟತೆ ಇಲ್ಲ. ಭಯಭಕ್ತಿ ಇರಬೇಕಾದ ಸಂಸ್ಕಾರ ಇರಬೇಕು. ನೈತಿಕವಾಗಿ ಇರುವಂತಹ ಬದ್ಧತೆ, ತಪ್ಪು ಮಾಡಲು ಎದರುವ ಸಂಸ್ಕಾರ ಇರಬೇಕು. ನಾಗರೀಕತೆ ಮತ್ತು ಸಂಸ್ಕೃತಿ ನಡುವೆ ವ್ಯತ್ಯಾಸವಿದೆ. ನಮ್ಮ ಹತ್ತಿರ ಇರುವುದು ನಾಗರೀಕತೆ. ನಾವು ಏನು ಆಗಿದ್ದೆವೋ ಅದು ಸಂಸ್ಕೃತಿ ಎಂದು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications