ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಂಡವಪುರ: ಬೇಬಿಬೆಟ್ಟದ ಶ್ರೀ ಸದಾಶಿವ ಸ್ವಾಮೀಜಿ ಇನ್ನಿಲ್ಲ

By ಮೈಸೂರು ಪ್ರತಿನಿಧಿ
|
Google Oneindia Kannada News

ಪಾಂಡವಪುರ, ಜುಲೈ.04: ತಾಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೇಶ್ವರ ಮಠದ ಶ್ರೀ ಸದಾಶಿವ ಸ್ವಾಮೀಜಿ ( 60) ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಕಳೆದ ರಾತ್ರಿ ಬೆಂಗಳೂರಿಗೆ ಭಕ್ತರ ಕುಟುಂಬಸ್ಥರ ವಿವಾಹಕ್ಕೆಂದು ಆಗಮಿಸಿದ್ದ ಸ್ವಾಮೀಜಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾತ್ರಿ ಭಕ್ತರ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ 5 ಗಂಟೆಗೆ ಪೂಜೆಗೆಂದು ಏಳಿಸಿದಾಗ ಸ್ವಾಮೀಜಿ ನಿಧನರಾಗಿರುವ ಸುದ್ದಿ ತಿಳಿದು ಬಂದಿದೆ.

ಆರೋಗ್ಯ ತಪಾಸಣೆಗಾಗಿ ಸಿದ್ದಗಂಗಾ ಸ್ವಾಮೀಜಿ ಆಸ್ಪತ್ರೆಗೆ ದಾಖಲುಆರೋಗ್ಯ ತಪಾಸಣೆಗಾಗಿ ಸಿದ್ದಗಂಗಾ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಸ್ವಾಮೀಜಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿಗೆ ಬೇಬಿಬೆಟ್ಟದ ಕಿರಿಯ ಸ್ವಾಮೀಜಿ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ ಆಗಮಿಸುತ್ತಿದ್ದು, ಮಠದಲ್ಲಿರುವ ಸ್ವಾಮೀಜಿ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Sadashiva Swamiji (60) died from a heart attack

ಇಳಕಲ್ ನ ವಿಜಯ ಮಹಾಂತೇಶ ಪೀಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ (90) ಮೇ.19 ರಂದು ಲಿಂಗೈಕ್ಯರಾಗಿದ್ದರು. 'ಮಹಾಂತ ಜೋಳಿಗೆಯ ಹರಿಕಾರ' ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಕೆಎಲ್​ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿತ್ತರಗಿ, ಇಳಕಲ್ ವಿಜಯಮಹಾಂತೇಶ್ವರ ಮಠದ 19ನೇ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್​ ಪಡೆದಿದ್ದರು. ಬಸವಶ್ರೀ ಸೇರಿ ಕೆಲವು ಪ್ರಶಸ್ತಿ ಪುರಸ್ಕೃತರಾಗಿದ್ದರು.

ಇವರ ಜನ್ಮದಿನವನ್ನು ರಾಜ್ಯ ಸರ್ಕಾರ ವ್ಯಸನಮುಕ್ತ ದಿನ ಎಂದು ಘೋಷಿಸಿತ್ತು. 48 ವರ್ಷಗಳಿಂದ ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.

English summary
Baby betta Sri Ramayogeshwara Mata Sadashiva Swamiji (60) died from a heart attack. Swamiji died of a heart attack while staying at Devotee residence in Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X