ಅನಾರೋಗ್ಯದಿಂದ ಮೃತಪಟ್ಟ ಮಗಳ ಶವದೊಂದಿಗೆ ಅಸ್ವಸ್ಥ ತಾಯಿ!
ಮಂಡ್ಯ, ಮೇ 31: ಅನಾರೋಗ್ಯದಿಂದ ಮೃತಪಟ್ಟ ಮಗಳ ಶವದೊಂದಿಗೆ ಅಸ್ವಸ್ಥ ತಾಯಿ ನಾಲ್ಕು ದಿನಗಳನ್ನು ಕಳೆದ ಹೃದಯ ವಿದ್ರಾವಕ ಘಟನೆ ನಗರದ ಹಾಲಹಳ್ಳಿ ನ್ಯೂತಮಿಳು ಸ್ಲಂನಲ್ಲಿ ನಡೆದಿದೆ.
ನ್ಯೂ ತಮಿಳು ಸ್ಲಂನಲ್ಲಿ ವಾಸವಾಗಿದ್ದ ರೂಪ (32) ಎಂಬಾಕೆಯೇ ಮೃತಪಟ್ಟವಳಾಗಿದ್ದು, ಈಕೆಯ ಶವದೊಂದಿಗೆ ಅಸ್ವಸ್ಥ ತಾಯಿ ನಾಗಮ್ಮ (55) ನಾಲ್ಕು ದಿನಗಳನ್ನು ಕಳೆದವರಾಗಿದ್ದಾರೆ.
ಗೃಹರಕ್ಷಕ ದಳದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ರೂಪ ಹತ್ತು ವರ್ಷದ ಹಿಂದೆ ವಿವಾಹವಾಗಿದ್ದು, ಈಕೆಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ, ಕಳೆದ ಐದು ವರ್ಷದಿಂದ ಗಂಡ ಶ್ರೀನಿವಾಸ ಮತ್ತು ಮಕ್ಕಳು ಈಕೆಯಿಂದ ದೂರಾಗಿದ್ದರು. ತಾಯಿ ನಾಗಮ್ಮಳೊಂದಿಗೆ ಹಾಲಹಳ್ಳಿಯ ನ್ಯೂ ತಮಿಳು ಸ್ಲಂನಲ್ಲಿ ರೂಪ ವಾಸವಾಗಿದ್ದಳು.

ತಾಯಿ-ಮಗಳ ನಡುವೆ ಆಗಾಗ್ಗೆ ಸಣ್ಣ ಪುಟ್ಟ ಜಗಳ ನಡೆಯುತ್ತಿತ್ತಾದರೂ, ನಂತರ ಇಬ್ಬರೂ ಹೊಂದಿಕೊಂಡು ಹೋಗುತ್ತಿದ್ದರು. ಕಳೆದ ನಾಲ್ಕು ದಿನಗಳಿಂದ ರೂಪ ಕಾಣಿಸದಿರುವುದನ್ನು ಸ್ಥಳೀಯರು ಗಮನಿಸಿದ್ದರು.
ಆದರೂ ಈ ಬಗ್ಗೆ ಪ್ರಶ್ನೆ ಮಾಡಿರಲಿಲ್ಲ. ಮನೆಯಿಂದ ಇಂದು ವಾಸನೆ ಬರುತ್ತಿದ್ದುದ್ದನ್ನು ಕಂಡ ಅಕ್ಕ ಪಕ್ಕದ ನಿವಾಸಿಗಳು ಮನೆಯ ಬಳಿ ಬಂದು ನೋಡಲಾಗಿ ಅಸ್ವಸ್ಥ ತಾಯಿ ಅಳುತ್ತಾ ತನ್ನ ಮಗಳ ಶವದ ಬಳಿಯೇ ಕುಳಿತಿದ್ದಳೆನ್ನಲಾಗಿದೆ. ನೆರೆಹೊರೆಯ ನಿವಾಸಿಗಳು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಕ್ಷಣ ಸ್ಥಳೀಯರು ಈಕೆಯ ಸಹೋದರ ಅನಂತಕುಮಾರ್ ಮಾಹಿತಿ ನೀಡಿದರು. ಅನಂತಕುಮಾರ್ ಈ ದೃಶ್ಯವನ್ನು ಕಂಡು ಪೊಲೀಸರಿಗೆ ಸುದ್ಧಿ ಮುಟ್ಟಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications