ಮಂಡ್ಯ ಚುನಾವಣೆ : ಸಿದ್ದರಾಮಯ್ಯ ಸಭೆ ವಿಫಲ, ಕಾಂಗ್ರೆಸ್ ಪ್ರಚಾರವಿಲ್ಲ!
Recommended Video

ಮಂಡ್ಯ, ಅಕ್ಟೋಬರ್ 26 : ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಬಿಸಿ ತುಪ್ಪವಾಗಿದೆ. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬೆಂಬಲಿಸುವಂತೆ ಪಕ್ಷದ ನಾಯಕರು ನೀಡಿದ್ದ ಸೂಚನೆ ಜಾರಿಗೆ ಬಂದಿಲ್ಲ, ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ಕಾಣಿಸಿಕೊಳ್ಳುತ್ತಿಲ್ಲ.
ಬುಧವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯಕ್ಕೆ ಭೇಟಿ ನೀಡಿದ್ದರು. ಜಿಲ್ಲಾ ನಾಯಕರ ಜೊತೆ ಸಭೆ ನಡೆಸಿ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರ ಪರವಾಗಿ ಪ್ರಚಾರ ನಡೆಸುವಂತೆ ಸೂಚಿಸಿದ್ದರು.
ಸಿದ್ದರಾಮಯ್ಯ ಮುಂದೆ ನಾವೆಲ್ಲರೂ ಒಂದೇ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಯಾರೂ ಇನ್ನೂ ಪ್ರಚಾರಕ್ಕೆ ಹೋಗಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ 7 ದಿನಗಳು ಬಾಕಿ ಇವೆ. ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಲಿದ್ದಾರೆಯೇ? ಎಂಬುದೇ ಸದ್ಯದ ಪ್ರಶ್ನೆ.
ನವೆಂಬರ್ 3ರಂದು ನಡೆಯಲಿರುವ ಮಂಡ್ಯ ಉಪ ಚುನಾವಣೆಗೆ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ. ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಅವರು ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 6ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.....

ಪ್ರತಿಷ್ಠೆಯ ಪ್ರಶ್ನೆ ಅಡಗಿದೆ
ಮಂಡ್ಯ ಜಿಲ್ಲೆಯ ರಾಜಕೀಯವೇ ಹಾಗೆ. ಅಲ್ಲಿನ ನಾಯಕರು ಪ್ರತಿಷ್ಠೆಯನ್ನು ಪಣಕ್ಕಿಟ್ಟಂತೆ ಚುನಾವಣೆಯಲ್ಲಿ ಹೋರಾಡುತ್ತಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ಭಾರೀ ವಾಗ್ವಾದ ನಡೆದಿತ್ತು. ಆದರೆ, ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈಗ ಲೋಕಸಭೆ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲಾಗಿದೆ. ಆದ್ದರಿಂದ, ಪಕ್ಷದ ನಾಯಕರ ಒಟ್ಟಾಗಿ ಪ್ರಚಾರ ಮಾಡಲು ಪ್ರತಿಷ್ಠೆ ಅಡ್ಡಿಯಾಗಿದೆ.

ಹೆಸರಿಗೆ ಮಾತ್ರ ಮೈತ್ರಿ ಪಕ್ಷದ ಸಭೆ
ಜೆಡಿಎಸ್ ನಾಯಕರು ಉಪ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿದ್ದಾರೆ. ಜಿಲ್ಲೆಯಲ್ಲಿ ಸರಣಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸಭೆ ಎಂದು ಇದಕ್ಕೆ ಕರೆಯಲಾಗುತ್ತಿದೆ. ಆದರೆ, ಯಾವ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಪ್ರಮುಖ ನಾಯಕರು ಹಾಗಿರಲಿ, 2 ಮತ್ತು 3ನೇ ಹಂತದ ನಾಯಕರು ಸಹ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿಲ್ಲ.

ಜೆಡಿಎಸ್ನಿಂದ ಅಮಾನತುಗೊಂಡವರು
ಅಂಬರೀಶ್, ರಮ್ಯಾ ಬಳಿಕ ಸದ್ಯ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಆತ್ಮಾನಂದ ಮುಂತಾದವರು ಜಿಲ್ಲಾ ಕಾಂಗ್ರೆಸ್ನ ಪ್ರಮುಖ ನಾಯಕರಾಗಿದ್ದಾರೆ. ಆದರೆ, ಚುನಾವಣಾ ಪ್ರಚಾರ ಬ್ಯಾನರ್ಗಳಲ್ಲಿ ಅಂಬರೀಶ್, ಆತ್ಮಾನಂದ ಬಿಟ್ಟು ಬೇರೆ ನಾಯಕರ ಚಿತ್ರಗಳು ಕಾಣುತ್ತಿಲ್ಲ. ಅದರಲ್ಲೂ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ ಅವರು ಜೆಡಿಎಸ್ನಿಂದ ಅಮಾನತುಗೊಂಡು ಕಾಂಗ್ರೆಸ್ ಸೇರಿದವರು ಅವರನ್ನು ಜೆಡಿಎಸ್ ನಾಯಕರು ಹತ್ತಿರಕ್ಕೆ ಸೇರಿಸಿಕೊಳ್ಳುತ್ತಿಲ್ಲ.

ಹೊಂದಾಣಿಕೆ ಕಷ್ಟ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಕಾಂಗ್ರೆಸ್ ನಾಯಕರ ವರ್ತನೆ ಬಗ್ಗೆ ಹೇಳಿಕೆ ನೀಡಿದ್ದು, 'ಕಾಂಗ್ರೆಸ್ ಕಾರ್ಯರ್ತರ ನಡುವೆ ಹೊಂದಾಣಿಕೆ ಕಷ್ಟ ಆಗುತ್ತಿರುವುದು ನಿಜ. ಮೊದಲಿನಿಂದಲೂ ಅವರ ಜೊತೆ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈಗ ಒಟ್ಟಾಗಿ ಹೋಗಲು ಮುಜುಗರ ಉಂಟಾಗುತ್ತಿದೆ. ಆದರೂ ಪಕ್ಷದ ವರಿಷ್ಠರ ಸೂಚನೆ ಪಾಲಿಸಲು ಪ್ರಯತ್ನ ನಡೆಸುತ್ತಿದ್ದೇವೆ' ಎಂದು ಹೇಳಿದ್ದಾರೆ.

ಜೆಡಿಎಸ್ ವಿರುದ್ಧ ಆರೋಪ
ಮಂಡ್ಯ ಕಾಂಗ್ರೆಸ್ ನಾಯಕರ ನಿರ್ಧಾರಕ್ಕೆ ಜೆಡಿಎಸ್ ನಾಯಕರೇ ಕಾರಣ ಎಂಬ ಆರೋಪವಿದೆ. ರಾಮನಗರ, ಜಮಖಂಡಿಯಲ್ಲಿ ಮೈತ್ರಿ ಚೆನ್ನಾಗಿದೆ. ಆದರೆ, ಮಂಡ್ಯದಲ್ಲಿ ಜೆಡಿಎಸ್ ನಾಯಕರು ವಿಧಾನಸಭೆ ಚುನಾವಣೆ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಆದ್ದರಿಂದ, ಇಬ್ಬರ ನಡುವೆ ಸಮನ್ವಯ ಸಾಧ್ಯವಾಗುತ್ತಿಲ್ಲ. ನಾಯಕರ ವರ್ತನೆಯಿಂದ ಬೇಸತ್ತು ಕಾಂಗ್ರೆಸ್ ನಾಯಕರು ಪ್ರಚಾರದಿಂದ ದೂರವಾಗಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು










Click it and Unblock the Notifications