ರಂಗನತಿಟ್ಟು ಪಕ್ಷಿಧಾಮಕ್ಕೆ ಸಿಗಲಿದೆಯೇ ಅಂತರಾಷ್ಟ್ರೀಯ ಮಾನ್ಯತೆ?
ಮಂಡ್ಯ, ಜೂನ್ 21 : ರಾಜ್ಯದಲ್ಲೇ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಕರ್ನಾಟದಕ ಪಕ್ಷಿ ಕಾಶಿ ಎಂದೇ ಕರೆಸಿಕೊಳ್ಳುವ ರಂಗನತಿಟ್ಟು ಪಕ್ಷಿಧಾಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಸತತ ಪ್ರಯತ್ನ ನಡೆಯುತ್ತಿದೆ.
ರಂಗನತಿಟ್ಟು ಪಕ್ಷಿಧಾಮ ಶೀಘ್ರವೇ ರಾಮ್ಸರ್ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಮೂಲಕ ಈ ಪಕ್ಷಿಧಾಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ಸಿಗಲಿದೆ. ರಾಮ್ಸರ್ ಪಟ್ಟಿಗೆ ಸೇರ್ಪಡೆಯಾಗಿಸಲು ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸತತ ಪ್ರಯತ್ನ ನಡೆಸುತ್ತಿದೆ. ಈ ಪ್ರಕ್ರಿಯೆ ಅಂತಿಮಗೊಳ್ಳಲು ಎರಡು ಮೂರು ವರ್ಷ ಕಾಲ ಬೇಕಾಗಬಹುದು ಎನ್ನುತ್ತಾರೆ ರಂಗನತಿಟ್ಟು ಪಕ್ಷಿಧಾಮದ ಉಸ್ತುವಾರಿ ಆರ್ ಎಫ್ ಓ ಅನನ್ಯಕುಮಾರ್.
ಜಲಚರ, ಪ್ರಾಣಿ ಪಕ್ಷಿಗಳು ಇರುವ ಜೌಗು ಪ್ರದೇಶವನ್ನು ರಾಮ್ಸರ್ ತಾಣವೆಂದು ಗುರುತಿಸಲಾಗುತ್ತದೆ. ಜಗತ್ತಿನ ವಿವಿಧ ಭಾಗದಲ್ಲಿ ಇರುವ ಇಂತಹ ಪ್ರದೇಶವನ್ನು ಸಂರಕ್ಷಣೆ ಮಾಡಲು ರಾಮ್ಸರ್ ಸಂಸ್ಥೆ ಹುಟ್ಟಿಕೊಂಡಿದೆ. ಈಗಾಗಲೇ ರಂಗನತಿಟ್ಟು ಪಕ್ಷಿಧಾಮವನ್ನು ವೆಟ್ ಲ್ಯಾಂಡ್ ಎಂದು ಘೋಷಣೆ ಮಾಡಲು ರಾಮ್ಸರ್ ಸಂಸ್ಥೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಲ್ಲದೆ, ರಾಮ್ಸರ್ ಸಂಸ್ಥೆಯ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ವೈಜ್ಞಾನಿಕ ಪಕ್ಷಿ ಗಣತಿ ಕಾರ್ಯ ಕೂಡ ಕಳೆದ ಕೆಲವು ದಿನಗಳ ಹಿಂದಷ್ಟೇ ನಡೆದಿತ್ತು.

ರಂಗನತಿಟ್ಟು ರಾಮ್ಸರ್ ಪಟ್ಟಿಗೆ ಸೇರ್ಪಡೆಯಾದರೆ ವಿಶೇಷ ಅನುದಾನ ಸಿಗಲಿದೆ. ಈ ಪ್ರದೇಶದ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಈ ಅನುದಾನ ಸಹಕಾರಿಯಾಗಲಿದೆ. ಇನ್ನು ರಂಗನತಿಟ್ಟು ರಾಮ್ಸರ್ ಪಟ್ಟಿಗೆ ಸೇರ್ಪಡೆಯಾದರೆ ಅದು ರಾಜ್ಯದ ಮೊದಲ ರಾಮ್ಸರ್ ಪ್ರದೇಶ ಎಂದು ಕರೆಸಿಕೊಳ್ಳುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications