ರಂಗನತಿಟ್ಟು ಪಕ್ಷಿಧಾಮಕ್ಕೆ ಸಿಗಲಿದೆಯೇ ಅಂತರಾಷ್ಟ್ರೀಯ ಮಾನ್ಯತೆ?
ಮಂಡ್ಯ, ಜೂನ್ 21 : ರಾಜ್ಯದಲ್ಲೇ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಕರ್ನಾಟದಕ ಪಕ್ಷಿ ಕಾಶಿ ಎಂದೇ ಕರೆಸಿಕೊಳ್ಳುವ ರಂಗನತಿಟ್ಟು ಪಕ್ಷಿಧಾಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಸತತ ಪ್ರಯತ್ನ ನಡೆಯುತ್ತಿದೆ.
ರಂಗನತಿಟ್ಟು ಪಕ್ಷಿಧಾಮ ಶೀಘ್ರವೇ ರಾಮ್ಸರ್ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಮೂಲಕ ಈ ಪಕ್ಷಿಧಾಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ಸಿಗಲಿದೆ. ರಾಮ್ಸರ್ ಪಟ್ಟಿಗೆ ಸೇರ್ಪಡೆಯಾಗಿಸಲು ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸತತ ಪ್ರಯತ್ನ ನಡೆಸುತ್ತಿದೆ. ಈ ಪ್ರಕ್ರಿಯೆ ಅಂತಿಮಗೊಳ್ಳಲು ಎರಡು ಮೂರು ವರ್ಷ ಕಾಲ ಬೇಕಾಗಬಹುದು ಎನ್ನುತ್ತಾರೆ ರಂಗನತಿಟ್ಟು ಪಕ್ಷಿಧಾಮದ ಉಸ್ತುವಾರಿ ಆರ್ ಎಫ್ ಓ ಅನನ್ಯಕುಮಾರ್.
ಜಲಚರ, ಪ್ರಾಣಿ ಪಕ್ಷಿಗಳು ಇರುವ ಜೌಗು ಪ್ರದೇಶವನ್ನು ರಾಮ್ಸರ್ ತಾಣವೆಂದು ಗುರುತಿಸಲಾಗುತ್ತದೆ. ಜಗತ್ತಿನ ವಿವಿಧ ಭಾಗದಲ್ಲಿ ಇರುವ ಇಂತಹ ಪ್ರದೇಶವನ್ನು ಸಂರಕ್ಷಣೆ ಮಾಡಲು ರಾಮ್ಸರ್ ಸಂಸ್ಥೆ ಹುಟ್ಟಿಕೊಂಡಿದೆ. ಈಗಾಗಲೇ ರಂಗನತಿಟ್ಟು ಪಕ್ಷಿಧಾಮವನ್ನು ವೆಟ್ ಲ್ಯಾಂಡ್ ಎಂದು ಘೋಷಣೆ ಮಾಡಲು ರಾಮ್ಸರ್ ಸಂಸ್ಥೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಲ್ಲದೆ, ರಾಮ್ಸರ್ ಸಂಸ್ಥೆಯ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ವೈಜ್ಞಾನಿಕ ಪಕ್ಷಿ ಗಣತಿ ಕಾರ್ಯ ಕೂಡ ಕಳೆದ ಕೆಲವು ದಿನಗಳ ಹಿಂದಷ್ಟೇ ನಡೆದಿತ್ತು.

ರಂಗನತಿಟ್ಟು ರಾಮ್ಸರ್ ಪಟ್ಟಿಗೆ ಸೇರ್ಪಡೆಯಾದರೆ ವಿಶೇಷ ಅನುದಾನ ಸಿಗಲಿದೆ. ಈ ಪ್ರದೇಶದ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಈ ಅನುದಾನ ಸಹಕಾರಿಯಾಗಲಿದೆ. ಇನ್ನು ರಂಗನತಿಟ್ಟು ರಾಮ್ಸರ್ ಪಟ್ಟಿಗೆ ಸೇರ್ಪಡೆಯಾದರೆ ಅದು ರಾಜ್ಯದ ಮೊದಲ ರಾಮ್ಸರ್ ಪ್ರದೇಶ ಎಂದು ಕರೆಸಿಕೊಳ್ಳುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications