ಸಕ್ಕರೆ ನಾಡು ಮಂಡ್ಯದಲ್ಲಿ ಜಾನಪದ ಜಾತ್ರೆಯ ವೈಭವ, ಗಮನ ಸೆಳೆದ ಕಲಾತಂಡಗಳು
ಮಂಡ್ಯ, ಡಿಸೆಂಬರ್, 09: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.
ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ಅಖಿಲಕ ಕರ್ನಾಟಕ ಜಾನಪದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ವಿವಿಧ ಬೀದಿಗಳಲ್ಲಿ ನಡೆದ ಜಾನಪದ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿಯೂ ಯಶಸ್ವಿಯಾಗಿತ್ತು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಂದ ತಮ್ಮ ಪ್ರದರ್ಶನವನ್ನು ತೋರಿದ್ದು, ವಿವಿಧ ರಸ್ತೆಗಳ ಮಾರ್ಗವಾಗಿ ವೇದಿಕೆಗೆ ಆಗಮಿಸಿದರು.
ದೇಶಿ ಕಲೆಗಳ ಅನಾವರಣ
ಜಾನಪದ ಜಾತ್ರೆಯಲ್ಲಿ ದೇಶಿ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ವಿವಿಧ ರಸ್ತೆಗಳ ಮೂಲಕ ಪ್ರದರ್ಶನ ನೀಡುತ್ತಾ ಸಾಗಿದ ಕಲಾವಿದರು, ಡಾ. ಬಿ.ಆರ್. ಅಂಬೇಡ್ಕರ್ ಭವನದೊಳಗೆ ಆಗಮಿಸಿದರು. ಈ ವೇಳೆ ಕಲೆಗಳು ಮತ್ತು ಕಲಾವಿದರ ಸಂಗಮವೇ ಮೇಳೈಸಿತ್ತು. ಒಂದಕ್ಕಿಂತ ಮತ್ತೊಂದು ಎನ್ನುವಂತೆ ಅದರದ್ದೇ ಆದ ಜಾನಪದ ಪ್ರಕಾರಗಳ ಕಲೆ ಪ್ರದರ್ಶಶಿದ ಕಲಾವಿದರು ಜನತೆಯನ್ನು ನಿಬ್ಬೆರಗುಗೊಳಿಸಿದರು.

ಜನರ ಮನಗೆದ್ದ ವಿವಿಧ ನೃತ್ಯಗಳು
ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು.

ವಿರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರಿಂದ ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಜನರ ಮನಸ್ಸಿಗೆ ಮುದ ನೀಡಿದವು. ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದಗಳ ಮೂಲಕ ಜನರನ್ನು ರಂಜಿಸಿದರು. ಇನ್ನು ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೆ ಸೃಷ್ಟಿಸಿದ್ದವು. ಒಟ್ಟಾರೆ ಜಾನಪದ ಮೆರವಣಿಗೆ ನಾಗರೀಕರನ್ನು ಮಂತ್ರಮುಗ್ದರನ್ನಾಗಿಸುವಲ್ಲಿ ಯಶಸ್ವಿಯಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications