ಶ್ರೀರಂಗಪಟ್ಟಣ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ; ಅಪ್‌ಡೇಟ್

ಮಂಡ್ಯ, ಫೆಬ್ರವರಿ 07: ಶ್ರೀರಂಗಪಟ್ಟಣ-ಕುಶಾಲನಗರ ನಡುವಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾಗಲು ದಿನಗಣನೆ ಆರಂಭವಾಗಿದೆ. 92 ಕಿ. ಮೀ. ಮಾರ್ಗ ಇದಾಗಿದ್ದು, 4,130 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಶ್ರೀರಂಗಪಟ್ಟಣ-ಕುಶಾಲನಗರ ನಡುವಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಯೋಜನೆ ಕುರಿತು ಮೈಸೂರಿನಲ್ಲಿ ಸಭೆಯನ್ನು ನಡೆಸಿದರು. ಫೆಬ್ರವರಿ ತಿಂಗಳ ಅಂತ್ಯಕ್ಕೆ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಹೇಳಿದರು.

Srirangapatna Kushalnagar National Highway Work To Start Soon

ಪ್ರತಾಪ್ ಸಿಂಹ ಮಾತನಾಡಿ, "ಶ್ರೀರಂಗಪಟ್ಟಣ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ರ ಚತುಷ್ಪಥ ರಸ್ತೆ ನಿರ್ಮಾಣ ಸಂಬಂಧ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದೆ" ಎಂದರು.

ಯೋಜನೆ ವಿವರ; "92 ಕಿ. ಮೀ. ಉದ್ದದ ನಾಲ್ಕು ಪಥದ ರಸ್ತೆಯ ಜೊತೆ ಸರ್ವೀಸ್ ರಸ್ತೆಗಳು ಇರಲಿವೆ. 1,351.67 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ 691.89 ಎಕರೆ ಸ್ವಾಧೀನ ಪ್ರಕ್ರಿಯೆ ಮುಗಿದಿದ್ದು, 477 ಕೋಟಿ ಪರಿಹಾರವನ್ನು ನೀಡಲಾಗಿದೆ" ಎಂದು ಪ್ರತಾಪ್ ಸಿಂಹ ತಿಳಿಸಿದರು.

ಒಟ್ಟು ಎರಡು ಪ್ಯಾಕೇಜ್‌ಗಳಲ್ಲಿ ಈ ಕಾಮಗಾರಿ ನಡೆಯುವ ನಿರೀಕ್ಷೆ ಇದೆ. ಶ್ರೀರಂಗಪಟ್ಟಣ-ಹುಣಸೂರು, ಹುಣಸೂರು-ಕುಶಾಲನಗರ ಎಂದು ಕಾಮಗಾರಿಯನ್ನು ಎರಡು ಪ್ಯಾಕೇಜ್ ಮಾಡಲಾಗುತ್ತದೆ. ಮೊದಲ ಹಂತದ ಶ್ರೀರಂಗಪಟ್ಟಣ-ಹುಣಸೂರು ಕಾಮಗಾರಿ ಮೊದಲು ಆರಂಭವಾಗಲಿದೆ.

ಈ ಯೋಜನೆಗಾಗಿ ಶ್ರೀರಂಗಪಟ್ಟಣ, ಮೈಸೂರು, ಪಿರಿಯಾಪಟ್ಟಣ, ಕುಶಾಲನಗರ ತಾಲೂಕಿನ ರೈತರು ಭೂಮಿ ಕಳೆದುಕೊಳ್ಳಲಿದ್ದು, ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬೆಲೆಯನ್ನು ನೀಡಿ, ರೈತರಿಗೆ ಪರಿಹಾರ ನೀಡಲಾಗುತ್ತದೆ.

4 ಪಥದ ರಸ್ತೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಆಯಾ ಪ್ರದೇಶ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಹಾರ ದೊರೆಯಲಿದೆ. ಈ ರಸ್ತೆ ನಿರ್ಮಾಣದಿಂದ ಪ್ರಯಾಣಿಕರಿಗೆ ಸಮಯ ಮತ್ತು ಸುತ್ತಾಟವೂ ಕಡಿಮೆಯಾಗಲಿದೆ.

ಮೈಸೂರು-ಮಡಿಕೇರಿ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಶ್ರೀರಂಗಪಟ್ಟಣ-ಕುಶಾಲನಗರ ರಸ್ತೆ ಕಾಮಗಾರಿ ಆರಂಭಿಸಲು ಸಿದ್ಧತೆಗಳು ನಡೆದಿದ್ದು, ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ.

ಈ ಹೆದ್ದಾರಿ ಯೋಜನೆಯಲ್ಲಿ ಪಿರಿಯಾಪಟ್ಟಣ ಮತ್ತು ಕುಶಾಲನಗರ ಭಾಗದಲ್ಲಿ 135 ಎಕರೆ ಅರಣ್ಯ ಭೂಮಿ ಇತ್ತು. ಇಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಜನವರಿ 29ರಂದು ಅನುಮತಿಯೂ ಸಿಕ್ಕಿದೆ. ಯೋಜನಾ ವೆಚ್ಚ 4,130 ಕೋಟಿ ರೂ. ಇದರಲ್ಲಿ ಭೂ ಸ್ವಾಧೀನ ಪರಿಹಾರಕ್ಕೆ 1,100 ಕೋಟಿ ರೂ. ನೀಡಲಾಗುತ್ತದೆ.

4 ಲೈನ್ ರಸ್ತೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಾಲಹಳ್ಳಿಯಿಂದ ಆರಂಭಗೊಳ್ಳಲಿದೆ. ಕೊಡಗು ಜಿಲ್ಲೆಯಲ್ಲಿ 2.3 ಕಿ. ಮೀ., ಮೈಸೂರು ಜಿಲ್ಲೆಯಲ್ಲಿ 75.9 ಕಿ. ಮೀ. ಮತ್ತು ಮಂಡ್ಯದಲ್ಲಿ 14 ಕಿ. ಮೀ. ಇರಲಿದೆ.

2023ರ ನವೆಂಬರ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಈ ಯೋಜನೆಯ ಟೆಂಡರ್ ಅಂತಿಮಗೊಳಿಸುವ ಮುನ್ನ ಯೋಜನೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಸರ್ಕಾರಿ ಇಲಾಖೆಗಳ ವತಿಯಿಂದ ವಿದ್ಯುತ್ ಪೂರೈಕೆ, ನೀರು ಸರಬರಾಜು, ಅರಣ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರದ ಅವಶ್ಯಕತೆ ಇರುವುದರಿಂದ ಹಾಗೂ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಲು ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು.

2021ರಲ್ಲಿ ಈ 4 ಪಥದ ರಸ್ತೆಯ ಯೋಜನೆ ರೂಪಿಸಲಾಗಿತ್ತು. ಆಗ ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದ ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು 15 ತಿಂಗಳಲ್ಲಿ ಆರಂಭವಾಗಲಿದೆ ಎಂದು ಅಂದಾಜಿಸಲಾಗಿತ್ತು. ಈಗ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ಕಾಮಗಾರಿ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+