ಕೆಆರ್ಎಸ್ ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಡ್ಯಾಂ ಮೆಟ್ಟಿಲಿನ ಕಲ್ಲು ಕುಸಿತ!
ಮಂಡ್ಯ, ಜುಲೈ 19: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಡ್ಯಾಂ ಮೆಟ್ಟಿಲಿನ ಕಲ್ಲು ಕುಸಿತವಾಗಿ ಆತಂಕ ಮೂಡಿಸಿದೆ.
ಕೆಆರ್ಎಸ್ ಜಲಾಶಯ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿತಗೊಂಡಿದ್ದು, ಗಣಿಗಾರಿಕೆಯಿಂದ ಅಣೆಕಟ್ಟೆಗೆ ಅಪಾಯದ ಭೀತಿ ಹೆಚ್ಚಿಸಿದೆ. 'ಡ್ಯಾಂ'ನಿಂದ ಬೃಂದಾವನ ಹಾಗೂ ಕಾವೇರಿ ಮಾತೆ ಪ್ರತಿಮೆಗೆ ಹೋಗಲು ಮೆಟ್ಟಿಲು ನಿರ್ಮಿಸಲಾಗಿತ್ತು.
ಕೆಆರ್ಎಸ್ ಸುತ್ತ ಗಣಿಗಾರಿಕೆ ನಿಲ್ಲಿಸುವಂತೆ ಪುಣೆ ಟೆಕ್ನಿಕಲ್ ಟೀಂ ಸೂಚಿಸಿತ್ತು
+80 ಅಡಿ ಗೇಟುಗಳ ಬಳಿ ಇರುವ ಮೆಟ್ಟಿಲು ಇದಾಗಿದ್ದು, ಡ್ಯಾಂ ಭದ್ರತೆ ದೃಷ್ಟಿಯಿಂದ ಹಲವು ವರ್ಷದ ಹಿಂದೆಯೇ ಮೆಟ್ಟಿಲು ಮೇಲೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗಿತ್ತು. ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಕಲ್ಲು ಕುಸಿತವಾಗಿರುವುದು ಆತಂಕ ಹೆಚ್ಚಳವಾಗಿದೆ.
ಮಣ್ಣು, ಸುರ್ಕಿಯಿಂದ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿದ್ದು, ಸತತ ಮಳೆಯಿಂದಾಗಿ ಏಕಾಏಕಿ ಕಲ್ಲುಗಳು ಕುಸಿದಿವೆ. ಕಲ್ಲು ಕುಸಿತ ಘಟನೆಯಿಂದಾಗಿ ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆಯಿಂದ ಡ್ಯಾಂಗೆ ಅಪಾಯದ ಭೀತಿ ಮತ್ತಷ್ಟು ಜಾಸ್ತಿಯಾಗಿದೆ.
Recommended Video
ಕಾವೇರಿ ನೀರಾವರಿ ನಿಯಮದ SE ವಿಜಯ್ ಕುಮಾರ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗಿದ್ದು, ಆತಂಕ ಬೇಡ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.