ಪಾಂಡವಪುರ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ; ಕಾರಣ?
ಮಂಡ್ಯ, ಅಕ್ಟೋಬರ್ 8: ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದು, ಕಿಟಕಿ ಗಾಜು ಪುಡಿ ಮಾಡಿರುವ ಘಟನೆ ಗುರುವಾರ ರಾತ್ರಿ (ಅ.7) ನಡೆದಿದೆ.
ಅಪರಿಚಿತ ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕಾಗಿ ಕಲ್ಲು ಎಸೆದಿರುವುದಾಗಿ ತಿಳಿದು ಬಂದಿದೆ. ಪಾಂಡವಪುರ ಪಟ್ಟಣದ ಐದು ದೀಪ ವೃತ್ತದಲ್ಲಿ ಶಾಸಕ ಸಿ.ಎಸ್. ಪುಟ್ಟರಾಜು ಹುಟ್ಟುಹಬ್ಬದ ಅಂಗವಾಗಿ ಬೆಂಬಲಿಗರು ಹಾಕಿದ್ದ ಫ್ಲೆಕ್ಸ್ ಹರಿದು ವಿಕೃತಿ ಮೆರೆದಿದ್ದಾರೆ.
ಪಾಂಡವಪುರ ಪಟ್ಟಣದಲ್ಲಿ ಕಳೆದ ರಾತ್ರಿ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಸೇರಿದಂತೆ ಎಂಟು ಕಾರು, ಹೋಂಡಾ ಶೋರೂಂ, ಖಾಸಗಿ ಬಸ್ ಸೇರಿದಂತೆ ಅನೇಕ ಸ್ಥಳಗಳಿಗೆ ಅಪರಿಚಿತ ಯುವಕರ ಗುಂಪೊಂದು ಕಲ್ಲು ಎಸೆದು, ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

ಪಾಂಡವಪುರ ಟೌನ್ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಕಾರಿಗೆ ಸೈಜು ಕಲ್ಲು ಎಸೆದು ಗಾಜು ಪುಡಿ ಮಾಡಲಾಗಿದೆ. ಪೊಲೀಸ್ ಠಾಣೆ ರಸ್ತೆಯಲ್ಲಿರುವ ಮೂರು ಕಾರಿಗೆ ಕಲ್ಲು ಎಸೆದು ಗಾಜು ಪುಡಿ ಮಾಡಿ ಡ್ಯಾಮೇಜ್ ಮಾಡಿರುವ ಘಟನೆ ನಡೆದಿರುವುದು ಕಾರಿನ ಮಾಲೀಕರಲ್ಲಿ ಆತಂಕ ಉಂಟುಮಾಡಿದೆ.
ಮಾರುತಿ, ಇಂಡಿಕಾ, ಖಾಸಗಿ ಬಸ್ ಕಾರು, ಶಾಸಕರ ನಿವಾಸದ ಗಾಜು, ಹೋಂಡಾ ಶೋರೂಂ ಸೇರಿದಂತೆ ಅನೇಕ ಸ್ಥಳಗಳಲ್ಲಿ ಅಪರಿಚಿತ ಯುವಕರ ಗುಂಪೊಂದು ಸೈಜು ಕಲ್ಲು ಎಸೆದು ಗಾಜು ಪುಡಿ ಮಾಡಿ, ಕಾರನ್ನು ಡ್ಯಾಮೇಜ್ ಮಾಡಿದ್ದಾರೆ. ಕಿಡಿಗೇಡಿಗಳ ದುಷ್ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುಟ್ಟರಾಜು ಸಹೋದರ ಅಶೋಕ್ ಹೇಳಿಕೆ ನೀಡಿದ್ದು, "ಇದು ನಮ್ಮನ್ನು ಟಾರ್ಗೆಟ್ ಮಾಡಿರುವುದು ಅಲ್ಲ. ಯಾರೋ ಕುಡುಕರು ಈ ಕೃತ್ಯವೆಸಗಿದ್ದಾರೆ. ಯಾವುದೇ ಅಪಾಯವಿಲ್ಲ," ಎಂದು ತಿಳಿಸಿದ್ದಾರೆ.
"ಗುರುವಾರ ರಾತ್ರಿ ಮೂವರು ಕುಡಿದು ಪೆಟ್ರೋಲ್ ಬಂಕ್ ಬಳಿ ಗಲಾಟೆ ಮಾಡಿಕೊಂಡಿದ್ದಾರೆ. ನಂತರ ಸುಮಾರು ಕಾರು, ಮನೆಗಳ ಮೇಲೆ ಕಲ್ಲು ತೂರಿದ್ದಾರೆ. ಈ ವೇಳೆ ನಮ್ಮ ಮನೆಗೂ ಕಲ್ಲು ತೂರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಕರ್ತರು ಯಾರು ಭಯಪಡುವ ಅವಶ್ಯಕತೆ ಇಲ್ಲ," ಎಂದಿದ್ದಾರೆ.
Recommended Video
ಶಾಸಕ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟಕ್ಕೆ ರೇವಣ್ಣ ಪ್ರತಿಕ್ರಿಯೆ
ಪಾಂಡವಪುರ ಜೆಡಿಎಸ್ ಶಾಸಕ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
"ಇಂತಹದ್ದನ್ನು ನಾನು ಖಂಡಿಸುತ್ತೇನೆ, ಸರ್ಕಾರ ಪುಟ್ಟರಾಜುರಿಗೆ ಹಾಗೂ ಅವರ ಮನೆಗೆ ರಕ್ಷಣೆ ಕೊಡಬೇಕು. ನಮಗೆ ಏನೇ ಮಾತನಾಡಿದರೂ ಹೆದರಿಕೆ, ನಮಗೆಲ್ಲಿ ಗುಂಡು ಬೀಳುತ್ತಾವೋ ಎಂದು ಹೆದರಿಕೆಯಾಗುತ್ತದೆ," ಎಂದು ರೇವಣ್ಣ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications