ಪಾಂಡವಪುರ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ; ಕಾರಣ?
ಮಂಡ್ಯ, ಅಕ್ಟೋಬರ್ 8: ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದು, ಕಿಟಕಿ ಗಾಜು ಪುಡಿ ಮಾಡಿರುವ ಘಟನೆ ಗುರುವಾರ ರಾತ್ರಿ (ಅ.7) ನಡೆದಿದೆ.
ಅಪರಿಚಿತ ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕಾಗಿ ಕಲ್ಲು ಎಸೆದಿರುವುದಾಗಿ ತಿಳಿದು ಬಂದಿದೆ. ಪಾಂಡವಪುರ ಪಟ್ಟಣದ ಐದು ದೀಪ ವೃತ್ತದಲ್ಲಿ ಶಾಸಕ ಸಿ.ಎಸ್. ಪುಟ್ಟರಾಜು ಹುಟ್ಟುಹಬ್ಬದ ಅಂಗವಾಗಿ ಬೆಂಬಲಿಗರು ಹಾಕಿದ್ದ ಫ್ಲೆಕ್ಸ್ ಹರಿದು ವಿಕೃತಿ ಮೆರೆದಿದ್ದಾರೆ.
ಪಾಂಡವಪುರ ಪಟ್ಟಣದಲ್ಲಿ ಕಳೆದ ರಾತ್ರಿ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಸೇರಿದಂತೆ ಎಂಟು ಕಾರು, ಹೋಂಡಾ ಶೋರೂಂ, ಖಾಸಗಿ ಬಸ್ ಸೇರಿದಂತೆ ಅನೇಕ ಸ್ಥಳಗಳಿಗೆ ಅಪರಿಚಿತ ಯುವಕರ ಗುಂಪೊಂದು ಕಲ್ಲು ಎಸೆದು, ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

ಪಾಂಡವಪುರ ಟೌನ್ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಕಾರಿಗೆ ಸೈಜು ಕಲ್ಲು ಎಸೆದು ಗಾಜು ಪುಡಿ ಮಾಡಲಾಗಿದೆ. ಪೊಲೀಸ್ ಠಾಣೆ ರಸ್ತೆಯಲ್ಲಿರುವ ಮೂರು ಕಾರಿಗೆ ಕಲ್ಲು ಎಸೆದು ಗಾಜು ಪುಡಿ ಮಾಡಿ ಡ್ಯಾಮೇಜ್ ಮಾಡಿರುವ ಘಟನೆ ನಡೆದಿರುವುದು ಕಾರಿನ ಮಾಲೀಕರಲ್ಲಿ ಆತಂಕ ಉಂಟುಮಾಡಿದೆ.
ಮಾರುತಿ, ಇಂಡಿಕಾ, ಖಾಸಗಿ ಬಸ್ ಕಾರು, ಶಾಸಕರ ನಿವಾಸದ ಗಾಜು, ಹೋಂಡಾ ಶೋರೂಂ ಸೇರಿದಂತೆ ಅನೇಕ ಸ್ಥಳಗಳಲ್ಲಿ ಅಪರಿಚಿತ ಯುವಕರ ಗುಂಪೊಂದು ಸೈಜು ಕಲ್ಲು ಎಸೆದು ಗಾಜು ಪುಡಿ ಮಾಡಿ, ಕಾರನ್ನು ಡ್ಯಾಮೇಜ್ ಮಾಡಿದ್ದಾರೆ. ಕಿಡಿಗೇಡಿಗಳ ದುಷ್ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುಟ್ಟರಾಜು ಸಹೋದರ ಅಶೋಕ್ ಹೇಳಿಕೆ ನೀಡಿದ್ದು, "ಇದು ನಮ್ಮನ್ನು ಟಾರ್ಗೆಟ್ ಮಾಡಿರುವುದು ಅಲ್ಲ. ಯಾರೋ ಕುಡುಕರು ಈ ಕೃತ್ಯವೆಸಗಿದ್ದಾರೆ. ಯಾವುದೇ ಅಪಾಯವಿಲ್ಲ," ಎಂದು ತಿಳಿಸಿದ್ದಾರೆ.
"ಗುರುವಾರ ರಾತ್ರಿ ಮೂವರು ಕುಡಿದು ಪೆಟ್ರೋಲ್ ಬಂಕ್ ಬಳಿ ಗಲಾಟೆ ಮಾಡಿಕೊಂಡಿದ್ದಾರೆ. ನಂತರ ಸುಮಾರು ಕಾರು, ಮನೆಗಳ ಮೇಲೆ ಕಲ್ಲು ತೂರಿದ್ದಾರೆ. ಈ ವೇಳೆ ನಮ್ಮ ಮನೆಗೂ ಕಲ್ಲು ತೂರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಕರ್ತರು ಯಾರು ಭಯಪಡುವ ಅವಶ್ಯಕತೆ ಇಲ್ಲ," ಎಂದಿದ್ದಾರೆ.
Recommended Video
ಶಾಸಕ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟಕ್ಕೆ ರೇವಣ್ಣ ಪ್ರತಿಕ್ರಿಯೆ
ಪಾಂಡವಪುರ ಜೆಡಿಎಸ್ ಶಾಸಕ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
"ಇಂತಹದ್ದನ್ನು ನಾನು ಖಂಡಿಸುತ್ತೇನೆ, ಸರ್ಕಾರ ಪುಟ್ಟರಾಜುರಿಗೆ ಹಾಗೂ ಅವರ ಮನೆಗೆ ರಕ್ಷಣೆ ಕೊಡಬೇಕು. ನಮಗೆ ಏನೇ ಮಾತನಾಡಿದರೂ ಹೆದರಿಕೆ, ನಮಗೆಲ್ಲಿ ಗುಂಡು ಬೀಳುತ್ತಾವೋ ಎಂದು ಹೆದರಿಕೆಯಾಗುತ್ತದೆ," ಎಂದು ರೇವಣ್ಣ ಹೇಳಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications