Mandya: ಕಬ್ಬಿನ ಕೊರತೆ; ಕಾರ್ಖಾನೆ ಮತ್ತು ಆಲೆಮನೆಗಳ ನಡುವೆ ಪೈಪೋಟಿ
ಕಳೆದ ವರ್ಷ ಬರಗಾಲ ಮತ್ತು ನೀರಿನ ಕೊರತೆಯಿಂದ ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗಳಿಗೆ ಕಬ್ಬಿಗೆ ತೀವ್ರ ಕೊರತೆ ಕಾಡಲಿದೆ. ಪ್ರತಿ ಕಾರ್ಖಾನೆಗಳಿಗೂ ತಲಾ ಎರಡರಿಂದ ಮೂರು ಲಕ್ಷ ಟನ್ ಸಿಗುವುದೇ ಹೆಚ್ಚು ಎನ್ನಲಾಗುತ್ತಿದ್ದು, ಬೆಲ್ಲಕ್ಕೆ ಉತ್ತಮ ಬೆಲೆ ಇರುವುದರಿಂದ ಆಲೆಮನೆಗಳೂ ಕೂಡ ಕಾರ್ಖಾನೆಗಳೊಂದಿಗೆ ಕಬ್ಬು ನುರಿಸುವುದಕ್ಕೆ ಪೈಪೋಟಿಗಿಳಿದಿವೆ.
ಮಳೆ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ಕಳೆದ ವರ್ಷ ಭರ್ತಿಯಾಗಲಿಲ್ಲ. ಬೇಸಿಗೆ ಸಮಯದಲ್ಲಿ ನಾಲೆ ಆಧುನೀಕರಣದ ನೆಪವೊಡ್ಡಿ ನೀರು ಹರಿಸಲಿಲ್ಲ. ರಣಬಿಸಿಲ ತಾಪಕ್ಕೆ ಕಬ್ಬಿನ ಬೆಳೆ ಉರುವಲಾಯಿತು. ಕಬ್ಬು ಒಣಗುತ್ತಿರುವುದನ್ನು ನೋಡಲಾಗದೆ ಹಲವರು 8 ತಿಂಗಳ ಕಬ್ಬನ್ನು ಹೊರ ಜಿಲ್ಲೆಯ ಕಾರ್ಖಾನೆಗೆ ಸಾಗಿಸಿದರು. ಹೀಗಾಗಿ ಕಬ್ಬಿಗೆ ತೀವ್ರ ಕೊರತೆ ಎದುರಾಗಿದೆ.

ಸಾಗಣೆ ವೆಚ್ಚ ಕೈಬಿಟ್ಟ ಖಾಸಗಿ ಕಾರ್ಖಾನೆಗಳು
ಪ್ರತಿ ವರ್ಷ ಕನಿಷ್ಠ 4 ಲಕ್ಷ ಟನ್ನಿಂದ 5 ಲಕ್ಷ ಟನ್ ಕಬ್ಬು ಅರೆಯುತ್ತಿದ್ದ ಕಾರ್ಖಾನೆಗಳು ಈ ವರ್ಷ ಎರಡೂವರೆಯಿಂದ ಮೂರು ಲಕ್ಷ ಟನ್ ಕಬ್ಬು ಅರೆದರೆ ಅದೇ ಹೆಚ್ಚು ಎನ್ನುವಂತಾಗಿದೆ. ಅಲ್ಲದೆ, ನಿತ್ಯ 4 ರಿಂದ 5 ಸಾವಿರ ಟನ್ ಕಬ್ಬು ಅರೆಯುತ್ತಿದ್ದ ಕಾರ್ಖಾನೆಗಳಿಗೆ ಈ ಬಾರಿ ಆ ಪ್ರಮಾಣದ ಕಬ್ಬು ಸಿಗದೇ ಹೋಗಬಹುದು ಎನ್ನಲಾಗಿದೆ.
ಕಬ್ಬಿಗೆ ತೀವ್ರ ಕೊರತೆ ಇರುವುದರಿಂದ ಕೆಲವೊಂದು ಖಾಸಗಿ ಕಾರ್ಖಾನೆಗಳ ರೈತರಿಂದ ಸಾಗಣೆ ವೆಚ್ಚ ಪಡೆಯುವುದನ್ನೇ ನಿಲ್ಲಿಸಿವೆ. ಪ್ರತಿ 5 ರಿಂದ 10 ಕಿ.ಮೀ.ಗೆ ಒಂದೊಂದು ರೀತಿಯ ದರ ನಿಗದಿಪಡಿಸಿಕೊಂಡು ರೈತರಿಗೆ ಕೊಡಬೇಕಾದ ಹಣದಲ್ಲಿ ಕಟಾವು ಮಾಡಿಕೊಳ್ಳುತ್ತಿದ್ದ ಕಾರ್ಖಾನೆಗಳು, ಈಗ ಕಬ್ಬು ಸಿಗುವುದೇ ಕಷ್ಟವಾಗಿರುವುದರಿಂದ ಸಾಗಣೆ ವೆಚ್ಚವನ್ನು ಕೇಳದೆ ತಮ್ಮದೇ ಖರ್ಚಿನಲ್ಲೇ ಕಾರ್ಖಾನೆಗೆ ಕೊಂಡೊಯ್ಯುವುದಕ್ಕೆ ನಿರ್ಧರಿಸಿವೆ. ಈಗಾಗಲೇ ಮೈಷುಗರ್ ವ್ಯಾಪ್ತಿಯ ಹಲವು ರೈತರನ್ನೂ ಸಂಪರ್ಕಿಸಿ ಮುಂಗಡ ಹಣ ಕೊಟ್ಟು ಕಬ್ಬು ಒಪ್ಪಿಗೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೈಷುಗರ್ ಸಕ್ಕರೆ ಕಾರ್ಖಾನೆ ಸುಮಾರು 2 ಲಕ್ಷ ಟನ್ ಕಬ್ಬು ಒಪ್ಪಿಗೆ ಮಾಡಿಕೊಂಡಿರುವುದಾಗಿ ಹೇಳುತ್ತಿದೆ. ಆದರೆ, ಕಬ್ಬು ಸಾಗಣೆ ವೆಚ್ಚ ಕೈಬಿಡುವ ಬಗ್ಗೆ ಆಡಳಿತ ಮಂಡಳಿ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಬ್ಬು ಸಾಗಣೆ ವೆಚ್ಚ ಕೈಬಿಡದಿದ್ದರೆ ಕಾರ್ಖಾನೆಗೆ ಬರಬೇಕಾದ ಕಬ್ಬು ಬೇರೆ ಕಾರ್ಖಾನೆಗಳಿಗೆ ಅಥವಾ ಆಲೆಮನೆಗಳ ಪಾಲಾಗುವ ಸಾಧ್ಯತೆಗಳೂ ಇವೆ.
ಆಲೆಮನೆಗಳಿಂದ ಪೈಪೋಟಿ
ಪ್ರಸ್ತುತ ದಿನಗಳಲ್ಲಿ ಬೆಲ್ಲಕ್ಕೂ ಉತ್ತಮ ಬೆಲೆ ಇದೆ. ಪ್ರತಿ ಟನ್ ಬೆಲ್ಲಕ್ಕೆ 4000 ರು. ನಿಂದ 4500 ರು.ವರೆಗೆ ಬೆಲೆ ಇರುವುದರಿಂದ ಆಲೆಮನೆಗಳ ಮಾಲೀಕರು ರೈತರಿಂದ ಕಬ್ಬನ್ನು ಪಡೆದು ನುರಿಸುತ್ತಿದ್ದಾರೆ. ಜಿಲ್ಲೆಯಲ್ಲಿರುವ ಆಲೆಮನೆಗಳು ನಿತ್ಯ ಗರಿಷ್ಠ 2 ಸಾವಿರ ಟನ್ ಕಬ್ಬು ಅರೆಯುತ್ತಿವೆ. ಆಲೆಮನೆ ಮಾಲೀಕರು ರೈತರಿಗೆ ಸ್ಥಳದಲ್ಲೇ 2500 ರೂ.ನಿಂದ 2800 ರೂ. ಹಣ ಕೊಟ್ಟು ಕಬ್ಬನ್ನು ಕಡಿದುಕೊಂಡು ಆಲೆಮನೆಗಳಿಗೆ ತರುತ್ತಿದ್ದಾರೆ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿದೆ.
ಕಾರ್ಖಾನೆಗಳಿಗೆ ಕಬ್ಬನ್ನು ಸಾಗಿಸಿದರೂ ತೂಕದಲ್ಲಿ ವ್ಯತ್ಯಾಸ, ಹಣ ಬರುವವರೆಗೂ ಕಾಯಬೇಕು. ಸಾಗಣೆ ವೆಚ್ಚ ಕೈಬಿಟ್ಟರೂ ಕಟಾವು, ಗದ್ದೆಯಿಂದ ರಸ್ತೆವರೆಗೆ ಸಾಗಿಸುವುದಕ್ಕೆ ಹಣ ನೀಡಬೇಕಿರುವುದರಿಂದ ಕನಿಷ್ಠ 600 ರೂ. ನಿಂದ 800 ರೂ. ವರೆಗೆ ನಷ್ಟವಾಗಲಿದೆ. ಆ ಕಾರಣಕ್ಕೆ ಆಲೆಮನೆಯವರಿಗೆ ನೀಡುವುದೇ ಉತ್ತಮ ಎಂಬ ಅಭಿಪ್ರಾಯವೂ ರೈತರಲ್ಲಿದೆ.
ಕಾರ್ಖಾನೆಗಳು ಶುರುವಾಗುವುದಕ್ಕೆ ಮುನ್ನವೇ ಸಿಕ್ಕಷ್ಟು ಕಬ್ಬನ್ನು ಅರೆಯುವ ಕಾರ್ಯದಲ್ಲಿ ಆಲೆಮನೆಗಳು ತೊಡಗಿವೆ. ಕಂಪನಿಗಳು ಕಬ್ಬು ಅರೆಯುವಿಕೆ ಆರಂಭಿಸಿದರೆ ಕಬ್ಬು ಸಿಗುವುದಿಲ್ಲ ಎಂಬ ಕಾರಣಕ್ಕೆ ಬಿರುಸಿನಿಂದ ಅರೆಯಲಾರಂಭಿಸಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications