ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಿಂದಲೇ ಸ್ಪರ್ಧೆ: ಬದಲಾವಣೆ ಗಾಳಿ ಬೀಸಬಹುದು ಎಂದ ಆಪ್ತರು
ಮಂಡ್ಯ ಜನವರಿ 09: ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಮತ್ತೆ ಸ್ಪರ್ಧಿಸುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ.
ಕಳೆದ ನಾಲ್ಕು ವರ್ಷದಿಂದ ಸುಮಲತಾ ಅಂಬರೀಶ್ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲೂ ಸುಮಲತಾ ಅಭ್ಯರ್ಥಿ ಆಗಿರುತ್ತಾರೆ. ಮೈಶುಗರ್ ಕಾರ್ಖಾನೆ ಪುನಾರಾರಂಭ ಮಾಡಲು ಯಶಸ್ವಿಯಾಗಿದ್ದಾರೆ. ಕೆಆರ್ಎಸ್ ಸುತ್ತಮುತ್ತಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಸೇರಿದಂತೆ ಎಲ್ಲಾ ಹೋರಾಟಗಳಲ್ಲೂ ಸುಮಲತಾ ಮುಂಚೂಣಿಯಲ್ಲಿದ್ದಾರೆ ಎಂದರು.

ಇನ್ನು ಅತಿ ಹೆಚ್ಚು ದಿಶಾ ಸಭೆ ನಡೆಸಿದ ಹೆಗ್ಗಳಿಕೆ ಸುಮಲತಾ ಅವರದ್ದು. ಚುನಾವಣೆಯಲ್ಲಿ ಬಿಜೆಪಿಗೆ ಸುಮಲತಾ ಅಂಬರೀಶ ಅವರು ಬಾಹ್ಯ ಬೆಂಬಲ ಕೊಟ್ಟಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಆಗಿದೆ. ಜೆಡಿಎಸ್ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಡುತ್ತಾರೆ ಎಂಬ ಚರ್ಚೆ ಆಗುತ್ತಿದೆ. ಸುಮಲತಾ ಈಗಲೂ ಪಕ್ಷೇತರ ಸಂಸದೆ, ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಪಕ್ಷ ಯಾವುದಾದರೂ ಸುಮಲತಾ ಅಂಬರೀಶ್ ಅವರು ಮಂಡ್ಯ ಅಭ್ಯರ್ಥಿ ಆಗಿರಬೇಕು ಎಂದು ಆಗ್ರಹಿಸಿದರು.
ಸುಮಲತಾ ಅಂಬರೀಶ್ ಅವರು ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡಿದರೂ ನಮ್ಮ ಬೆಂಬಲ ಇರುತ್ತದೆ. ಜೆಡಿಎಸ್ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಟ್ಟರೂ ಸುಮಲತಾ ಅಂಬರೀಶ ಸ್ಪರ್ಧೆ ಖಚಿತವಾಗಿದೆ. ಬಿಜೆಪಿ ಮಂಡ್ಯ ಉಳಿಸಿಕೊಳ್ಳುವ ವಿಶ್ವಾಸವಿದೆ. ಸುಮಲತಾ ಅವರ ಅವಶ್ಯಕತೆ ಇದ್ದರೆ ಮಂಡ್ಯ ಕ್ಷೇತ್ರ ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಇನ್ನು ಬಿಜೆಪಿ ಮಂಡ್ಯವನ್ನ ಜೆಡಿಎ ಬಿಟ್ಟು ಕೊಟ್ಟರೂ ಸಹ ಸುಮಲತಾ ಅವರ ಸ್ಪರ್ಧೆ ಖಚಿತವಾಗಿದೆ. ಆದರೆ ಬಿಜೆಪಿ ಮಂಡ್ಯ ಉಳಿಸಿಕೊಳ್ಳುವ ವಿಶ್ವಾಸ ಇದೆ. ಹಳೇ ಮೈಸೂರು ಭಾಗದಲ್ಲಿ ಬಲಿಷ್ಠ ಬಿಜೆಪಿ ಕಟ್ಟುವ ಆಸೆ ಇದ್ರೆ, ಸುಮಲತಾ ಅವರ ಅವಶ್ಯಕತೆ ಇದ್ರೆ ಮಂಡ್ಯವನ್ನು ಉಳಿಸಿಕೊಳ್ಳುತ್ತಾರೆ.
ಅಂಬರೀಶ್ರವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ರಾಜಕೀಯದಲ್ಲಿ ಬದಲಾವಣೆ ಗಾಳಿ ಯಾವಾಗ ಬೇಕಾದರೂ ಬೀಸಬಹುದು. ಏನೇ ಆದರೂ ಸುಮಲತಾರವರು ಕಣದಲ್ಲಿರುತ್ತಾರೆ. ಚರ್ಚೆ ನಡೆಸಿ, ಸುಮಲತಾ ಅಂಬರೀಶ್ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿಗೆ ಬಂದ ತಕ್ಷಣ ನಮ್ಮ ನಿಯೋಗ ಭೇಟಿ ಮಾಡುತ್ತದೆ ಎಂದು ಹೇಳಿದರು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications