ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಭಿಮಾನಿಗಳ ಆಸೆ ಸೋಲಬಾರದು, ರಾಜಕೀಯ ಪ್ರವೇಶ ಬಗ್ಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ

By ಮಂಡ್ಯ ಪ್ರತಿನಿಧಿ
|
Google Oneindia Kannada News

Recommended Video

Lok Sabha Elections 2019 : ಅಭಿಮಾನಿಗಳ ಆಸೆ ಸೋಲಬಾರದು, ರಾಜಕೀಯ ಪ್ರವೇಶ ಬಗ್ಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ..!

ಮಂಡ್ಯ, ಫೆಬ್ರವರಿ 10: ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಒತ್ತಡ ಹೇರುತ್ತಿದ್ದು, ಅವರ ಆಸೆ ಸೋಲಬಾರದು ಎಂದು ಸುಮಲತಾ ಅಂಬರೀಶ್ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದರು.

ಆದಿಚುಂಚನಗಿರಿಯಲ್ಲಿ ಮಾತನಾಡಿದ ಅವರು, ಅಭಿಮಾನಿಗಳು ತುಂಬಾ ಆಸೆ ಇಟ್ಟುಕೊಂಡು ಒತ್ತಡ ಹಾಕುತ್ತಿದ್ದಾರೆ. ಅಭಿಮಾನಿಗಳ ಆಸೆ ಸೋಲಬಾರದು ಎನ್ನುವ ಮೂಲಕ ತಮ್ಮ ರಾಜಕೀಯ ಪ್ರವೇಶವನ್ನು ಸಮರ್ಥಿಸಿಕೊಂಡರು.

ಮಂಡ್ಯದಿಂದ ಸುಮಲತಾ ಅಂಬರೀಶ್ ಸ್ಪರ್ಧೆ : ಯಾರು, ಏನು ಹೇಳಿದರು?ಮಂಡ್ಯದಿಂದ ಸುಮಲತಾ ಅಂಬರೀಶ್ ಸ್ಪರ್ಧೆ : ಯಾರು, ಏನು ಹೇಳಿದರು?

ನಾನು ಸ್ಪರ್ಧೆ ಮಾಡಿದರೆ ಮಂಡ್ಯದಿಂದ ಮಾತ್ರ. ಬೇರೆ ಇನ್ಯಾವ ಕ್ಷೇತ್ರಕ್ಕೂ ಹೋಗಲ್ಲ.ರಾಜಕೀಯ ಪ್ರವೇಶದ ಬಗ್ಗೆ ಇನ್ನೂ ಗೊಂದಲ ಇದೆ. ನಿರ್ಧರಿಸಿ ಅಂತಿಮ ತೀರ್ಮಾನ ಹೇಳುತ್ತೇನೆ ಎಂದರು.

Sumalatha Ambareesh spoke about political entry

ಶ್ರೀಕಂಠೇಗೌಡ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಪ್ರತಿಕ್ರಯಿಸಿ, ಆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಶ್ರೀಗಳೊಂದಿಗೆ ಬೇರೇನೂ ಚರ್ಚೆ ಮಾಡಿಲ್ಲ. 2 ತಿಂಗಳ ಹಿಂದೆಯೇ ಭೇಟಿ ಕೊಡಬೇಕಿತ್ತು. ಇವತ್ತು ಕಾಲ ಕೂಡಿ ಬಂದಿದೆ. ಅಭಿಷೇಕ್ ನಟಿಸಿದ ಚಿತ್ರದ ಫಸ್ಟ್ ಟೀಸರ್ ಇದೇ ತಿಂಗಳ 14ರಂದು ರಿಲೀಸ್ ಆಗುತ್ತಿದೆ.‌‌ ಹೀಗಾಗಿ ದೇವರ ದರ್ಶನ, ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆ. ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

English summary
Sumalatha Ambareesh spoke about political entry. She said fans wants should not be failed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X