ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ ಸುಮಲತಾ: ಇಂದು ಮಂಡ್ಯದಲ್ಲಿ ಸಭೆ

Recommended Video

      Karnataka Flood: ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ ಸುಮಲತಾ

      ಮಂಡ್ಯ, ಆಗಸ್ಟ್ 14: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅವರು ತಡವಾಗಿಯಾದರೂ ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ್ದಾರೆ. ನೆರೆ ಪೀಡಿತ ಮಂಡ್ಯದ ಭಾಗಗಳಿಗೆ ಸುಮಲತಾ ಅವರು ಇಂದು ಭೇಟಿ ನೀಡಲಿದ್ದಾರೆ.

      ಕಾವೇರಿ ತೀರದ ಮಂಡ್ಯದ ಹಲವು ಭಾಗಗಳು ನೆರೆಯಿಂದ ತೊಂದರೆಗೆ ಒಳಗಾಗಿದ್ದು, ನಿಮಿಷಾಂಬಾ ದೇವಾಲಯ, ಶ್ರೀರಂಗಪಟ್ಟಣ ಸಂತೆಮಾಳ, ದೊಡ್ಡಪಾಳ್ಯ, ಎಣ್ಣೆಕೊಪ್ಪಲು ಮುಂತಾದ ಗ್ರಾಮಗಳು ನೆರೆಯಿಂದ ತೊಂದರೆಗೆ ಸಿಲುಕಿವೆ. ಬೆಳೆ ನಾಶ, ಜಾನುವಾರು ಹಾನಿಗಳನ್ನು ಜನರು ಅನುಭವಿಸಿದ್ದಾರೆ.

      ಈ ಎಲ್ಲ ಗ್ರಾಮಗಳಿಗೆ ಸುಮಲತಾ ಅವರು ಭೇಟಿ ಮಾಡಲಿದ್ದು, ಸ್ಥಳೀಯರೊಂದಿಗೆ ಸುಮಲತಾ ಅವರು ಸಭೆ ನಡೆಸಲಿದ್ದಾರೆ. ಸ್ಥಳೀಯರೊಂದಿಗೆ ಸಭೆ ಬಳಿಕ, ಅಧಿಕಾರಿಗಳೊಂದಿಗೂ ಸುಮಲತಾ ಅವರು ಸಭೆ ನಡೆಸಲಿದ್ದಾರೆ. ಜೊತೆಗೆ ಇಂದೇ ನೆರೆ ಸಂತ್ರಸ್ಥರಿಗೆ ಪರಿಹಾರ ಘೋಷಿಸುವ ಸಾಧ್ಯತೆಯೂ ಇದೆ.

      Sumalatha Ambareesh to visit flood affected places of Mandya

      ಮಂಡ್ಯ ಕ್ಷೇತ್ರ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದ ನಂತರ ಸುಮಲತಾ ಅವರು ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಆರೋಪಗಳಿದ್ದವು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+