ಡಿ.ಸಿ.ತಮ್ಮಣ್ಣ ಹೇಳಿಕೆಗೆ ತಿರುಗೇಟು ಕೊಟ್ಟ ಸುಮಲತಾ
Recommended Video

ಮಂಡ್ಯ, ಮಾರ್ಚ್ 07 : 'ಅತಿಥಿ ಸತ್ಕಾರವನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಅಂಬಿ ಕುಟುಂಬಕ್ಕೆ ಹೇಳಿ ಕೊಡುವುದು ಬೇಕಾಗಿಲ್ಲ' ಎಂದು ಸುಮಲತಾ ಅಂಬರೀಶ್ ಅವರು ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ತಿರುಗೇಟು ನೀಡಿದರು.
ಮಂಡ್ಯದಲ್ಲಿ ಗುರುವಾರ ಮಾತನಾಡಿದ ಸುಮಲತಾ ಅಂಬರೀಶ್ ಅವರು, 'ಅಂಬರೀಶ್ ಅವರ ನೆರವು ಪಡೆದು ಯಾರೆಲ್ಲಾ ಏನು ಮಾಡಿದ್ದರು ಎಂಬುದು ತಿಳಿದಿದೆ. ಯಾರು ಏನು ಮಾಡಿಕೊಂಡಿದ್ದಾರೆ ಎಂಬುದು ತಿಳಿದಿದೆ' ಎಂದರು.
'ಅಂಬರೀಶ್ ಇದ್ದಾಗ ಯಾರು ನಮ್ಮ ಮನೆಗೆ ಬರುತ್ತಿದ್ದರು. ಯಾರ ಮನೆಗೆ ನಾವು ಹೋಗುತ್ತಿದ್ದೆವು ನನಗೆ ಗೊತ್ತಿದೆ. ನಮ್ಮಲ್ಲಿ ತಪ್ಪಿದ್ದರೆ ಸಂಬಂಧಿಕರಾಗಿ ನಮ್ಮ ಮನೆಗೆ ಬಂದು ಹೇಳಬಹುದಿತ್ತು' ಎಂದು ಬೇಸರ ವ್ಯಕ್ತಪಡಿಸಿದರು.

'ತಮ್ಮಣ್ಣ ಅಂಬಿಗೆ ಅಣ್ಣ ಆಗಬೇಕು, ಅಂದರೆ ನಾನವರ ಸೊಸೆ ಅಲ್ಲವೇ. ನಾವು ಅದೆಷ್ಟು ಬಾರಿ ಅವರ ಮನೆಗೆ ಹೋಗಿ ಊಟ ಮಾಡಿದ್ದೇವೆ. ಈ ತರಹ ಮಾತನಾಡುವ ಸಂಸ್ಕೃತಿ ನಮ್ಮದಲ್ಲ' ಎಂದು ಸುಮಲತಾ ಅಂಬರೀಶ್ ಅವರು ಹೇಳಿದರು.
ಮದ್ದೂರಿನಲ್ಲಿ ಗುರುವಾರ ಮಾತಾಡಿದ್ದ ಡಿ.ಸಿ.ತಮ್ಮಣ್ಣ ಅವರು, 'ಅಂಬರೀಶ್ ಅವರು ಶಾಸಕರು, ಸಚಿವರು ಆಗಿದ್ದಾಗ ಅವರ ಮನೆಗೆ ಹೋದ ಜನಸಾಮಾನ್ಯರನ್ನು ಈಯಮ್ಮ ಮಾತನಾಡಿಸಿದ್ದಾರೆಯೇ?. ಎಷ್ಟು ಜನಕ್ಕೆ ಒಂದು ಲೋಕ ಕುಡಿಯಲು ನೀರು ಕೊಟ್ಟಿದ್ದಾರೆ?' ಎಂದು ಪ್ರಶ್ನಿಸಿದ್ದರು.
'ಮಂಡ್ಯ ಜಲ್ಲೆಯ ಜನರು ಬಣ್ಣದವರ ಮಾತಿಗೆ ಬೆರಗಾಗುವುದು ಬೇಡ. ನಮ್ಮ ಕ್ಷೇತ್ರದ ಹಣೆ ಬರಹವನ್ನು ಬರೆಯುವವರು ನೀವು. ರೈತರ ಮಗನಾದ ನಿಖಿಲ್ರನ್ನು ಈ ಬಾರಿ ಆಯ್ಕೆ ಮಾಡುವಂತೆ' ಡಿ.ಸಿ.ತಮ್ಮಣ್ಣ ಮನವಿ ಮಾಡಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications