ಡಿ.ಸಿ.ತಮ್ಮಣ್ಣ ಹೇಳಿಕೆಗೆ ತಿರುಗೇಟು ಕೊಟ್ಟ ಸುಮಲತಾ
Recommended Video

ಮಂಡ್ಯ, ಮಾರ್ಚ್ 07 : 'ಅತಿಥಿ ಸತ್ಕಾರವನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಅಂಬಿ ಕುಟುಂಬಕ್ಕೆ ಹೇಳಿ ಕೊಡುವುದು ಬೇಕಾಗಿಲ್ಲ' ಎಂದು ಸುಮಲತಾ ಅಂಬರೀಶ್ ಅವರು ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ತಿರುಗೇಟು ನೀಡಿದರು.
ಮಂಡ್ಯದಲ್ಲಿ ಗುರುವಾರ ಮಾತನಾಡಿದ ಸುಮಲತಾ ಅಂಬರೀಶ್ ಅವರು, 'ಅಂಬರೀಶ್ ಅವರ ನೆರವು ಪಡೆದು ಯಾರೆಲ್ಲಾ ಏನು ಮಾಡಿದ್ದರು ಎಂಬುದು ತಿಳಿದಿದೆ. ಯಾರು ಏನು ಮಾಡಿಕೊಂಡಿದ್ದಾರೆ ಎಂಬುದು ತಿಳಿದಿದೆ' ಎಂದರು.
'ಅಂಬರೀಶ್ ಇದ್ದಾಗ ಯಾರು ನಮ್ಮ ಮನೆಗೆ ಬರುತ್ತಿದ್ದರು. ಯಾರ ಮನೆಗೆ ನಾವು ಹೋಗುತ್ತಿದ್ದೆವು ನನಗೆ ಗೊತ್ತಿದೆ. ನಮ್ಮಲ್ಲಿ ತಪ್ಪಿದ್ದರೆ ಸಂಬಂಧಿಕರಾಗಿ ನಮ್ಮ ಮನೆಗೆ ಬಂದು ಹೇಳಬಹುದಿತ್ತು' ಎಂದು ಬೇಸರ ವ್ಯಕ್ತಪಡಿಸಿದರು.

'ತಮ್ಮಣ್ಣ ಅಂಬಿಗೆ ಅಣ್ಣ ಆಗಬೇಕು, ಅಂದರೆ ನಾನವರ ಸೊಸೆ ಅಲ್ಲವೇ. ನಾವು ಅದೆಷ್ಟು ಬಾರಿ ಅವರ ಮನೆಗೆ ಹೋಗಿ ಊಟ ಮಾಡಿದ್ದೇವೆ. ಈ ತರಹ ಮಾತನಾಡುವ ಸಂಸ್ಕೃತಿ ನಮ್ಮದಲ್ಲ' ಎಂದು ಸುಮಲತಾ ಅಂಬರೀಶ್ ಅವರು ಹೇಳಿದರು.
ಮದ್ದೂರಿನಲ್ಲಿ ಗುರುವಾರ ಮಾತಾಡಿದ್ದ ಡಿ.ಸಿ.ತಮ್ಮಣ್ಣ ಅವರು, 'ಅಂಬರೀಶ್ ಅವರು ಶಾಸಕರು, ಸಚಿವರು ಆಗಿದ್ದಾಗ ಅವರ ಮನೆಗೆ ಹೋದ ಜನಸಾಮಾನ್ಯರನ್ನು ಈಯಮ್ಮ ಮಾತನಾಡಿಸಿದ್ದಾರೆಯೇ?. ಎಷ್ಟು ಜನಕ್ಕೆ ಒಂದು ಲೋಕ ಕುಡಿಯಲು ನೀರು ಕೊಟ್ಟಿದ್ದಾರೆ?' ಎಂದು ಪ್ರಶ್ನಿಸಿದ್ದರು.
'ಮಂಡ್ಯ ಜಲ್ಲೆಯ ಜನರು ಬಣ್ಣದವರ ಮಾತಿಗೆ ಬೆರಗಾಗುವುದು ಬೇಡ. ನಮ್ಮ ಕ್ಷೇತ್ರದ ಹಣೆ ಬರಹವನ್ನು ಬರೆಯುವವರು ನೀವು. ರೈತರ ಮಗನಾದ ನಿಖಿಲ್ರನ್ನು ಈ ಬಾರಿ ಆಯ್ಕೆ ಮಾಡುವಂತೆ' ಡಿ.ಸಿ.ತಮ್ಮಣ್ಣ ಮನವಿ ಮಾಡಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications