ಸುಮಲತಾ ಹುಚ್ಚೇಗೌಡರ ಸೊಸೆ ಎನ್ನುವುದರಲ್ಲಿ ಅರ್ಥವಿಲ್ಲ: ಶಿವರಾಮೇಗೌಡ
Recommended Video

ಮಂಡ್ಯ, ಏಪ್ರಿಲ್ 1: ಈ ಹಿಂದೆ ಸುಮಲತಾ ಗೌಡ್ತಿಯಲ್ಲ ಎಂಬ ಹೇಳಿಕೆ ವಿಚಾರವಾಗಿ ಮಾತಿನ ಪ್ರಹಾರ ನಡೆದ ಬೆನ್ನಲ್ಲೇ ಮತ್ತೆ ಅದೇ ಗೌಡ್ತಿ ಹೆಸರಿನಲ್ಲಿ ವಾಗ್ಬಾಣಗಳು ಹೊರಬರುತ್ತಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಹೌದು, ನಿನ್ನೆ ( ಭಾನುವಾರ ) ಸುಮಲತಾ ಹುಚ್ಚೇಗೌಡರ ಸೊಸೆ ಎನ್ನುವುದರಲ್ಲಿ ಅರ್ಥವಿಲ್ಲ. ಅವರು ನಾಯ್ಡು ಆಗಿದ್ದಾರೆಯೇ ಹೊರತು ಮಂಡ್ಯ ಗೌಡ್ತಿಯಲ್ಲ ಎಂದು ಮತ್ತೊಂದು ಹೊಸ ವಿವಾದಕ್ಕೆ ಸಂಸದ ಶಿವರಾಮೇಗೌಡ ನಾಂದಿ ಹಾಡಿದ್ದಾರೆ.
ಮಂಡ್ಯದ ನಾಗಮಂಗಲ ಪಟ್ಟಣದ ಮಲ್ಲೇನಹಳ್ಳಿ ಸಮೀಪ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸುಮಲತಾ ಹುಚ್ಚೇಗೌಡರ ಸೊಸೆ ಎನ್ನುವುದರಲ್ಲಿ ಅರ್ಥವಿಲ್ಲ. ಅವರು ನಾಯ್ಡು ಆಗಿದ್ದಾರೆಯೇ ಹೊರತು ಮಂಡ್ಯ ಗೌಡ್ತಿಯಲ್ಲ. ನಾಯ್ಡು ಜನಾಂಗದವರು ಮಂಡ್ಯವನ್ನು ಮರುಳು ಮಾಡುತ್ತಿದ್ದಾರೆ. ಸುಮಲತಾ ಗೌಡರಾ, ಒಕ್ಕಲಿಗರಾ ಎಂಬುದು ತೀರ್ಮಾನ ಆಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಂಬರೀಷ್ ಅವರನ್ನು ಮದುವೆ ಆದ ಮೇಲೆ ಗೌಡರೇ ಎಂದುಕೊಳ್ಳೋಣ. ಆದರೆ, ಅಂಬಿಗೆ ಮತ ಹಾಕಿದವರಿಗೆ ಸಹಾಯ ಮಾಡಿದ್ದಾರಾ? ಮಂಡ್ಯಕ್ಕೆ ಬಂದು ಮತ ಹಾಕಿದ್ದಾರಾ? ಕುಮಾರಸ್ವಾಮಿ ಮಂಡ್ಯಕ್ಕೆ ಅಂಬರೀಶ್ ಪಾರ್ಥೀವ ಶರೀರ ತಂದಾಗ ಅಂತಿಮ ದರ್ಶನ ಪಡೆಯಲು ಬಂದ ಜನಸಾಗರ ನೋಡಿ ಇವತ್ತು ಚುನಾವಣೆಗೆ ಬಂದಿದ್ದೀರಾ ಎಂದು ಶಿವರಾಮೇಗೌಡ ಪ್ರಶ್ನಿಸಿದ್ದಾರೆ.
ಸುರೇಶ್ ಗೌಡ ಕರೆ ತಂದ ರಮ್ಯರನ್ನ ಓಡಿಸಿದ್ದೇನೆ. ಅಂಬರೀಷ್ ಅನ್ನು ಕರೆತಂದವನು ನಾನೇ, ಅವರನ್ನ ಸೋಲಿಸಿದವನು ನಾನೇ. ನಾನು ನಾಗಮಂಗಲದ ಗಂಡು. ಮಗ ಅಭಿಷೇಕ್ ಕಣ್ಣೇ ಬಿಟ್ಟಿರಲಿಲ್ಲ. ಆದರೆ ಈಗ ನಾನು ನಮ್ಮಪ್ಪನ ಹಾಗೆ ಅಂತಾನೆ. ಏನು ಸಿನಿಮಾದವರು ಜನಕ್ಕೆ ಪುಕ್ಸಟ್ಟೆ ಸಿನಿಮಾ ತೋರಿಸುತ್ತಾರಾ? ದುಡ್ಡು ಕೊಟ್ಟೆ ಅಲ್ವಾ ನಾವೆಲ್ಲ ಸಿನಿಮಾ ನೋಡೋದು. ದಯವಿಟ್ಟು ಸಿನಿಮಾದವರನ್ನು ಸಿನಿಮಾಕಷ್ಟೇ ಸೀಮಿತಗೊಳಿಸೋಣ. ರಾಜಕೀಯಕ್ಕೆ ಬೇಡ ಎಂದು ಶಿವರಾಮೇಗೌಡ ಕಿಡಿಕಾರಿದರು.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸುಮಲತಾ ಅವರು, ಈ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಒಂದು ಹಂತದವರೆಗೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಇದಕ್ಕೆಲ್ಲಾ ಮಂಡ್ಯ ಜನರು ಉತ್ತರ ನೀಡುತ್ತಾರೆ ಎಂದು ತಿಳಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications