ಗುರುವಾರ ಸಂಜೆಗೆ ಟೂರಿಂಗ್ ಟಾಕೀಸ್ ಎತ್ತಂಗಡಿ: ಶಿವರಾಮೇಗೌಡ
Recommended Video
ಮಂಡ್ಯ, ಏಪ್ರಿಲ್ 18: ಮಂಡ್ಯ ಕ್ಷೇತ್ರದ ಹಾಲಿ ಸಂಸದ ಶಿವರಾಮೇಗೌಡ ಅವರು ಇಂದು ಮತದಾನ ಮಾಡಿ, ಈ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಕಿಡಿಕಾರಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಅವರ ಪರವಾಗಿ ಪ್ರಚಾರ ಮಾಡಿದ ನಟ ದರ್ಶನ್ ಹಾಗೂ ಯಶ್ ವಿರುದ್ಧ ಶಿವರಾಮೇಗೌಡ ಅವರು ಟೀಕೆ, ವ್ಯಂಗ್ಯ, ಗೇಲಿ ಮಾತುಗಳನ್ನಾಡಿದ್ದರು.
ಸುಮಲತಾ ಅವರನ್ನು ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರರನ್ನೇ ಮೀರಿಸುವ 'ಮಾಯಾಂಗನೆ' ಎಂದಿದ್ದರು. ಶಿವರಾಮೇಗೌಡ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್-ಜೆಡಿಎಸ್ ಪಕ್ಷದ ಮ್ಐತ್ರಿ ಅಭ್ಯರ್ಥಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಮಂಡ್ಯದಲ್ಲಿ ಇಂದು(ಏ.18)ಮತದಾನ ನಡೆಯುತ್ತಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ..

ನಾಗಮಂಗಲದಲ್ಲಿ ಮತದಾನ ಮಾಡಿದ ಹಾಲಿ ಸಂಸದ
ಇಂದು ನಾಗಮಂಗಲದಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಎಲ್ ಆರ್ ಶಿವರಾಮೇಗೌಡ,ನಟಿ ಸುಮಲತಾ ಹಾಗೂ ನಟರಾದ ದರ್ಶನ್, ಯಶ್ ಕುರಿತು ಪರೋಕ್ಷ ದಾಳಿ ನಡೆಸಿರುವ ಅವರು, ಇಂದು ಸಂಜೆಯೇ ಟೂರಿಂಗ್ ಟಾಕೀಸ್ ಟೆಂಟ್ ಮಂಡ್ಯದಿಂದ ಖಾಲಿಯಾಗಲಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಹೀನಾಯವಾಗಿ ಸೋಲಲಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಸುಮಾರು 3 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

ಸುಮಲತಾ ವಿರುದ್ಧ ನಿರಂತರ ವಾಗ್ದಾಳಿ
ಸುಮಲತಾ ಅಂಬರೀಷ್ ಅವರು ಉಮೇದುವಾರಿಕೆ ಸಲ್ಲಿಸಿದ ದಿನದಿಂದ ನಿರಂತರವಾಗಿ ಅವರ ವಿರುದ್ಧ ಶಿವರಾಮೇಗೌಡ ಅವರು ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಸುಮಲತಾ ಅವರು ಗೌಡ್ತಿ ಅಲ್ಲ, ಅವರು ನಾಯ್ಡು ಎಂದು ಹೇಳಿದರು. ಚುನಾವಣೆ ಬಳಿಕ ಮಂಡ್ಯದಲ್ಲಿ ಇವರೆಲ್ಲ ಕಾಣಿಸಿಕೊಳ್ಳುವುದಿಲ್ಲ. ಟೂರಿಂಗ್ ಟಾಕೀಸ್ ರೀತಿಯಲ್ಲಿ ಜಾಗ ಖಾಲಿ ಮಾಡುತ್ತಾರೆ ಎಂದು ಹೇಳಿದರು. ಯಶ್ ಹಾಗೂ ದರ್ಶನ್ ಅವರ ವೈಯಕ್ತಿಕ ವಿಚಾರಗಳನ್ನು ಕೆದಕಿದರು.

ಮತದಾನದ ನಂತರ ಸುಮಲತಾ ಪ್ರತಿಕ್ರಿಯೆ
"ನನಗೇ ನಾನು ಮತಹಾಕಿಕೊಳ್ಳೋಕೆ ಸಂತಸವಾಗುತ್ತೆ. ಮೊದಲ ಬಾರಿಗೆ ನನಗೆ ನಾನೇ ಮತಹಾಕಿಕೊಳ್ಳುತ್ತಿದ್ದೇನೆ. ಒಬ್ಬ ಮಹಿಳೆಯಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಹೋರಾಡಿದ್ದೇನೆ. ಈ ಹೋರಾಟ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ" ಎಂದು ಸುಮಲತಾ ಹೇಳಿದರು.

ಇವಿಎಂ ದೋಷದ ಬಗ್ಗೆ ಸುಮಲತಾ
"ಇವಿಎಂ ದೋಷದ ಬಗ್ಗೆ ಹಲವು ದೂರುಗಳಿವೆ. ಅದನ್ನು ಚುನಾವಣಾ ಆಯೋಗ ಸರಿಪಡಿಸುತ್ತದೆ ಎಂದು ನಂಬಿದ್ದೇನೆ. ಚುನಾವಣಾ ಆಯೋಗದ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ.ನನಗೆ ಅನ್ಯಾಯವಾಗೋಲ್ಲ ಎಂದುಕೊಂಡಿದ್ದೇನೆ. ಮಂಡ್ಯದ ಜನರು ಬುದ್ಧಿವಂತರು, ಮತದಾರರು ಯಾರೂ ಮೂರ್ಖರಲ್ಲ. ಅವರು ನಮಗಿಂತ ಬುದ್ಧಿವಂತರಾಗಿ ಮತಚಲಾಯಿಸುತ್ತಾರೆ. ನನಗೆ ಅನ್ಯಾಯವಾಗೋಲ್ಲ ಎಂದುಕೊಂಡಿದ್ದೇನೆ' ಎಂದು ಸುಮಲತಾ ಹೇಳಿದರು
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications