ರೈಲಿನ ವಾಶ್ ಬೇಸನ್ ಮೇಲೆ ಪಿಸ್ತೂಲ್ ಬಿಟ್ಟು ಹೋದ ಕಾನ್ಸ್ಟೇಬಲ್ ಮುಂದೇನಾಯ್ತು ಗೊತ್ತಾ!
ಮಂಡ್ಯ, ಡಿಸೆಂಬರ್ 19: ಬೇಜವಾಬ್ದಾರಿ ಸಶಸ್ತ್ರ ಪೊಲೀಸ್ ಪೇದೆಯೋರ್ವ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಮರೆತು ಬಂದ ಕಾರಣ ರೈಲ್ವೆ ಬೋಗಿಯೊಳಗೆ ಕೆಲ ಕಾಲ ಆತಂಕದ ಪರಿಸ್ಥತಿ ನಿರ್ಮಾಣವಾಗಿತ್ತು.
ಮಂಡ್ಯ ಜಿಲ್ಲಾ ಸಶಸ್ತ್ರ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂಬುವರೇ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಮರೆತು ಬಂದು ಆತಂಕ ಸೃಷ್ಠಿಸಿದವರಾಗಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರ ಅಂಗರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ಬೆಂಗಳೂರಿನಿಂದ ಮಂಡ್ಯಕ್ಕೆ ಮಧ್ಯಾಹ್ನ ಕಾಚಿಗುಡಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿ ಮಾಡಿದ್ದರು. ಈ ವೇಳೆ ಅವರು ಶೌಚಾಲಯಕ್ಕೆ ಹೋಗಿದ್ದಾರೆ. ಶೌಚ ಮುಗಿಸಲು ಸೊಂಟದ ಬೆಲ್ಟ್ನಲ್ಲಿದ್ದ ಪಿಸ್ತೂಲನ್ನು ತೆಗೆದು ಅಲ್ಲಿನ ವಾಸ್ಬೇಸಿನ್ ಕಟ್ಟೆ ಮೇಲಿಟ್ಟಿದ್ದಾರೆ. ನಂತರ ಸ್ವಚಗೊಳಿಸಿಕೊಂಡು ಪಿಸ್ತೂಲ್ ಶೌಚಾಲಯದಲ್ಲೇ ಬಿಟ್ಟು ಹೊರ ಬಂದಿದ್ದಾರೆ.
ಪ್ರಯಾಣಿಕರೊಬ್ಬರು ರೈಲಿನ ಶೌಚಾಲಯಕ್ಕೆ ಹೋಗಿ ಅಲ್ಲಿ ಪಿಸ್ತೂಲ್ ಇರುವುದನ್ನು ಕಂಡು ಗಾಭರಿಗೊಂಡು ಹೊರಗೋಡಿಬಂದಿದ್ದಾರೆ. ಸಹ ಪ್ರಯಾಣಿಕರಿಗೂ ಈ ವಿಚಾರ ತಿಳಿಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ರೈಲು ಬೋಗಿಯೊಳಗೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಪ್ರಯಾಣಿಕರೆಲ್ಲರೂ ಆತಂಕಕ್ಕೆ ಒಳಗಾಗಿದ್ದಾರೆ.
ಅಷ್ಟರಲ್ಲಿ ರೈಲುಗಾಡಿ ಮಂಡ್ಯ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಈ ವಿಚಾರವನ್ನು ರೈಲ್ವೆ ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ರೈಲಿನ ಶೌಚಾಲಯದಲ್ಲಿದ್ದ ಪಿಸ್ತೂಲನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಪಿಸ್ತೂಲ್ ಮೇಲಿನ ಸಂಖ್ಯೆಯನ್ನು ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಉನ್ನತಾಧಿಕಾರಿಗಳೆ ಸುದ್ಧಿ ಮುಟ್ಟಿಸಿದ್ದು, ನಂತರ ಮಂಡ್ಯ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಗೆ ಸೇರಿದ ಪಿಸ್ತೂಲ್ ಆಗಿದೆ ತಿಳಿದುಬಂದಿದೆ.
ತಕ್ಷಣ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಮಾಹಿತಿ ನೀಡಿದ್ದು, ಅವರೂ ಸಹ ಮಾಹಿತಿಯನ್ನಾಧರಿಸಿ ಡಿಆರ್ನಲ್ಲಿ ತಪಾಸಣೆ ನಡೆಸಿದಾಗ ಸದರಿ ಪಿಸ್ತೂಲ್ ಪೇದೆ ನಾಗರಾಜು ಅವರಿಗೆ ನೀಡಿದ್ದು, ಅವರು ವಿಶೇಷ ಅಭಿಯೋಜಕರ ಅಂಗರಕ್ಷಕರಾಗಿರುವುದು ದಾಖಲೆಗಳಿಂದ ತಿಳಿದು ಬಂದಿದೆ.
ಪೇದೆ ಅಮಾನತ್ತು :
ಜಿಲ್ಲಾ ಸಶಸ್ತ್ರ ಪೊಲೀಸ್ ಪೇದೆ ನಾಗರಾಜು ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಅಮಾನತ್ತು ಮಾಡಿ ಆದೇಶ ಹೊರಡಿಸಿ, ಇಲಾಖಾ ತನಿಖೆಗೆ ಒಳಪಡಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications