ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ವರದಿ ಮಾಡಲು ಈ ನಿಯಮ ಪಾಲಿಸಲೇಬೇಕು: ಇಲ್ಲಿದೆ ವಿವರ
ಮಂಡ್ಯ, ನವೆಂಬರ್ 26: ಡಿಸೆಂಬರ್ 20 ರಿಂದ 22ರ ವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸಿ ವರದಿಗಾರಿಕೆ ಮಾಡಲಿರುವ ಮಾಧ್ಯಮದವರು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕಾಗುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.
ಸಮ್ಮೇಳನದಲ್ಲಿ ವರದಿಗಾಗಿ ಹಾಜರಾಗುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಪತ್ರ (Accreditation Card) ಹೊಂದಿದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶವಿದೆ. ಎಲೆಕ್ಟ್ರಾನಿಕ್ ಮೀಡಿಯಾದಿಂದ 6 ಪ್ರತಿನಿಧಿಗಳು (3 ವರದಿಗಾರರು 3 ವಿಡಿಯೋಗ್ರಾಹಕರು) ಹಾಗೂ ಪ್ರಿಂಟ್ ಮೀಡಿಯಾದಿಂದ 4 ಪ್ರತಿನಿಧಿಗಳು (3 ವರದಿಗಾರರು 1 ಛಾಯಾಗ್ರಾಹಕ)ರಿಗೆ ಅವಕಾಶ ನೀಡಲಾಗಿದೆ.

ವರದಿ ಮಾಡಬೇಕು ಎಂದುಕೊಂಡವರು ತಮ್ಮ ಹೆಸರು, ಡೆಸಿಗ್ನೇಷನ್, ದೂರವಾಣಿ ಸಂಖ್ಯೆ, ಕಚೇರಿ ವಿಳಾಸ ಮತ್ತು ಇಮೇಲ್ ವಿಳಾಸದೊಂದಿಗೆ ಇತ್ತೀಚಿನ ಎರಡು ಭಾವಚಿತ್ರಗಳನ್ನು ಒಳಗೊಂಡಂತೆ ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರದೊಂದಿಗೆ ಮಂಡ್ಯ ಜಿಲ್ಲೆಯಲ್ಲಿರುವ ತಮ್ಮ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಮೂಲಕ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಇವರಿಗೆ ನವೆಂಬರ್ 30ರ ಒಳಗೆ ತಲುಪಿಸಬೇಕು.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮಾಹಿತಿಯನ್ನು ಪರಿಗಣಿಸಲಾಗುವುದಿಲ್ಲ. ನಿಗದಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಮಾಧ್ಯಮ ಪ್ರತಿನಿಧಿಗಳ ಹೆಸರನ್ನು ಸಲ್ಲಿಸಿದಲ್ಲಿ ನಿಗಧಿ ಪಡಿಸಲಾಗಿರುವ ಸಂಖ್ಯೆಗಷ್ಠೇ ಸೀಮಿತಗೊಳಿಸಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಸ್ಥಳಿಯ ಮಾಧ್ಯಮ ಪ್ರತಿನಿಧಿಗಳು ಹೊಂದಿಲ್ಲದೇ ಇರುವ ರಾಷ್ಟ್ರಮಟ್ಟದ ಮಾಧ್ಯಮಗಳು ಹಾಗೂ ಇತರೆ ಭಾಷೆಯ ಮಾಧ್ಯಮಗಳು ಮಾತ್ರ 2 ಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮೀಡಿಯಾದಿಂದ (1 ವರದಿಗಾರರು 1 ವಿಡಿಯೋಗ್ರಾಹಕರು) ಪ್ರಿಂಟ್ ಮೀಡಿಯಾದಿಂದ 2 ಪ್ರತಿನಿಧಿಗಳು (1 ವರದಿಗಾರರು 1 ಛಾಯಾಗ್ರಾಹಕ)ರಿಗೆ ಅವಕಾಶವಿದೆ.
ಆಸಕ್ತರು ತಮ್ಮ ಹೆಸರು, ಡೆಸಿಗ್ನೇಷನ್, ದೂರವಾಣಿ ಸಂಖ್ಯೆ, ಕಚೇರಿ ವಿಳಾಸ ಮತ್ತು ಇಮೇಲ್ ವಿಳಾಸದೊಂದಿಗೆ ಇತ್ತೀಚಿನ ಎರಡು ಭಾವಚಿತ್ರಗಳನ್ನು ಒಳಗೊಂಡಂತೆ ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರದೊಂದಿಗೆ ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಇವರಿಗೆ ನವೆಂಬರ್ 30ರ ಒಳಗೆ ತಲುಪಿಸಬೇಕು.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮಾಹಿತಿಯನ್ನು ಪರಿಗಣಿಸಲಾಗುವುದಿಲ್ಲ. ನಿಗದಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಮಾಧ್ಯಮ ಪ್ರತಿನಿಧಿಗಳ ಹೆಸರನ್ನು ಸಲ್ಲಿಸಿದಲ್ಲಿ ನಿಗಧಿ ಪಡಿಸಲಾಗಿರುವ ಸಂಖ್ಯೆಗಷ್ಟೇ ಸೀಮಿತಗೊಳಿಸಲಾಗುವುದು ಎಂದು ಈಗಾಗಲೇ ಆಯೋಜಕರ ವತಿಯಿಂದ ತಿಳಿಸಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications