ಮಾರದೇವನಹಳ್ಳಿ ಕೆರೆಗೆ ವಿಷಹಾಕಿದ ಕಿಡಿಗೇಡಿಗಳು, ಸಾವಿರಾರು ಮೀನುಗಳ ಮಾರಣಹೋಮ
ಮಂಡ್ಯ, ಜೂ.18: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೆರೆ ನೀರಿಗೆ ವಿಷ ಹಾಕಿರುವ ಕಿಡಿಗೇಡಿಗಳು ರು. 5ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾವಿರಾರು ಮೀನುಗಳ ಮಾರಣಹೋಮ ಮಾಡಿರುವ ಹೀನ ಕೃತ್ಯ ತಾಲೂಕಿನ ಬೆಳ್ಳೂರು ಹೋಬಳಿಯ ಮಾರದೇವನಹಳ್ಳಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಗ್ರಾಮದ ಹೊರವಲಯದಲ್ಲಿರುವ ಕೆರೆ ಭರ್ತಿಯಾಗಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಗ್ರಾಮಸ್ಥರೆಲ್ಲರೂ ಸೇರಿ ಸಾವಿರಾರು ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡುತ್ತಿದ್ದರು. ಬುಧವಾರ ತಡರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕೆರೆಗೆ ಬಲೆ ಹಾಕಿ ದೊಡ್ಡ ಮೀನುಗಳನ್ನು ಹಿಡಿದಿರುವುದಲ್ಲದೆ ನಂತರ ತುಂಬಿದ ಕೆರೆಗೆ ವಿಷ ಹಾಕಿರುವುದರಿಂದ ಮಾರಾಟ ಮಾಡಬಹುದಾಗಿದ್ದ 5 ರಿಂದ 8 ಕೆ.ಜಿ. ತೂಕದ ಸಾವಿರಾರು ಮೀನುಗಳು ಸಾವನ್ನಪ್ಪಿವೆ.

ಜಾನುವಾರುಗಳು ಕುಡಿಯಲೂ ಸಹ ಯೋಗ್ಯವಲ್ಲದಂತಾ ಕೆರೆ
ಗುರುವಾರ ಬೆಳಿಗ್ಗೆ ಕೆರೆಯಲ್ಲಿ ಸತ್ತು ಹೋಗಿರುವ ಮೀನುಗಳು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಬಂದು ನೋಡಿದ ವೇಳೆ ಕೆರೆಗೆ ಕಿಡಿಗೇಡಿಗಳು ವಿಷ ಬೆರೆಸಿರುವ ಪ್ರಸಂಗ ತಿಳಿದುಬಂದಿದ್ದು, ಕೆರೆಯಲ್ಲಿನ ನೀರೂ ಸಹ ಮಲೀನ ಗೊಂಡು ಜಾನುವಾರುಗಳು ಕುಡಿಯಲೂ ಸಹ ಯೋಗ್ಯವಲ್ಲದಂತಾಗಿದೆ. ಈ ಒಂದು ಕೆರೆಯಿಂದ ಗ್ರಾಮಕ್ಕೆ ಬಹಳಷ್ಟು ಅನುಕೂಲವಾಗಿತ್ತು. ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಮೀನುಗಾರಿಕೆ ಇಲಾಖೆ ಮೂಲಕ ಲಕ್ಷಾಂತರ ಮೌಲ್ಯದ ಮೀನಿನ ಮರಿ ಗಳನ್ನು ಖರೀದಿಸಿ ಕೆರೆಗೆ ಬಿಟ್ಟು ಪೋಷಣೆ ಮಾಡಲಾ ಗುತ್ತಿತ್ತು. ಆದರೆ ಕಿಡಿಗೇಡಿಗಳು ನಡೆಸಿರುವ ಈ ಕೃತ್ಯ ದಿಂದಾಗಿ ಸಾವಿರಕ್ಕೂ ಹೆಚ್ಚು ಮೀನುಗಳ ಮಾರಣ ಹೋಮವಾಗಿದ್ದು ರು.5 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಗ್ರಾಮಸ್ಥರು ದೂರಿ ದ್ದಾರೆ.

ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ಯಾವುದೇ ದ್ವೇಷ ಭಿನ್ನಾಭಿಪ್ರಾಯವಿದ್ದರೆ ಗ್ರಾಮಸ್ಥರ ಸಮ್ಮುಖದಲ್ಲಿ ಕುಳಿತು ಮಾತುಕತೆ ಮೂಲಕ ಅಥವಾ ಕಾನೂನು ರೀತಿ ಯಲ್ಲಿ ಸಮಸ್ಯೆ ಬಗೆಹರಿಸಿ ಕೊಳ್ಳಲು ಅವಕಾಶವಿದೆ. ಆದರೆ ಮೂಕ ಪ್ರಾಣಿಗಳು ಕುಡಿಯುವ ನೀರಿಗೆ ವಿಷ ಬೆರೆಸಿ ಸಾಕಿರುವ ಮೀನುಗಳ ಜೊತೆಗೆ ನೀರಿನಲ್ಲೇ ವಾಸಿಸುವ ಸಣ್ಣ ಪುಟ್ಟ ಪ್ರಾಣಿ ಪಕ್ಷಿಗಳನ್ನು ಸಾಯಿಸಿರುವ ಕಿಡಿಗೇಡಿಗಳಿಗೆ ಅವುಗಳ ಶಾಪ ತಟ್ಟದೆ ಇರುವುದಿಲ್ಲ. ಯಾವುದೋ ಹಳೇ ವೈಶಮ್ಯ ದಿಂದ ಈ ಹೀನಕೃತ್ಯ ನಡೆಸಿರ ಬಹುದೆಂದು ಶಂಕಿಸಿರುವ ಗ್ರಾಮಸ್ಥರು ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಜರುಗಿಸುವ ಜೊತೆಗೆ ಇಂತಹ ಘಟನೆ ಮರುಕಳಿಸದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿ ಗಳು ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ ಸರ್ಕಾರ ಸೂಕ್ತ ಪರಿಹಾರ ಕೊಟ್ಟು ಗ್ರಾಮಸ್ಥರ ನೆರವಿಗೆ ನಿಲ್ಲಬೇಕೆಂದು ಒತ್ತಾಯಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications