ಮನೆಗೆ ಪೂಜೆ ಮಾಡಲು ಬಂದಿದ್ದ ಅರ್ಚಕನಿಗೇ ಬ್ಲಾಕ್ ಮೇಲ್; 20 ಲಕ್ಷ ನುಂಗಿದ ಐನಾತಿಗಳು
ಮಂಡ್ಯ, ನವೆಂಬರ್ 14: ಮನೆಗೆ ಪೂಜೆ ಮಾಡಲು ಬಂದಿದ್ದ ಅರ್ಚಕನನ್ನೇ ಬ್ಲಾಕ್ ಮೇಲ್ ಮಾಡಿದ ಮೂವರು ಅವರಿಂದ ಬರೋಬ್ಬರಿ 20 ಲಕ್ಷ ರೂಪಾಯಿವರೆಗೂ ವಸೂಲಿ ಮಾಡಿದ್ದಾರೆ.
ನಡೆದ ಘಟನೆ ಇಷ್ಟು. ಕೊಳ್ಳೇಗಾಲದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿರುವ ರಾಘವನ್ ಭಕ್ತರ ಕೋರಿಕೆ ಮೇರೆಗೆ ವಿವಿಧ ಊರುಗಳಿಗೆ ತೆರಳಿ ಪೂಜೆ, ಹವನ, ಹೋಮ ಕಾರ್ಯ ನಡೆಸಿಕೊಡುತ್ತಾರೆ. ಅದರಂತೆ ಆರು ತಿಂಗಳ ಹಿಂದೆ ಬೆಂಗಳೂರಿನ ಹೆಸರಘಟ್ಟದ ನಿವಾಸಿ ಸರೋಜಮ್ಮ ಎಂಬುವವರ ಮನೆಗೂ ತೆರಳಿ ಪೂಜೆ ಮಾಡಿಕೊಟ್ಟು ಬಂದಿದ್ದರು. ನಂತರವೂ ಅರ್ಚಕ ಶ್ರೀನಿವಾಸ್ ರಾಘವನ್ ಅವರೊಂದಿಗೆ ಆ ಮಹಿಳೆ ಫೋನ್ನಲ್ಲಿ ಸಂಪರ್ಕ ಹೊಂದಿದ್ದರು.
ದಿನ ಕಳೆದಂತೆ ಮಾತಿನಲ್ಲಿಯೇ ಹತ್ತಿರವಾದ ಸರೋಜಮ್ಮ ಹಾಗೂ ಆಕೆ ಸಂಬಂಧಿ ನಾಗರತ್ನ ಜೊತೆ ಅರ್ಚಕರು ಅಶ್ಲೀಲ ಸಂಭಾಷಣೆ ನಡೆಸಿದ್ದರು ಎನ್ನಲಾಗಿದೆ. ಅದನ್ನೇ ಅಸ್ತ್ರವಾಗಿಟ್ಟುಕೊಂಡ ಅವರು, ಬಸವರಾಜು ಎಂಬಾತನೊಂದಿಗೆ ಸೇರಿಕೊಂಡು ಅರ್ಚಕ ರಾಘವನ್ಗೆ ಹೆದರಿಸಿ, ಬೆದರಿಸಿ ಅವರಿಂದ ಹಣ ಕೀಳಲು ಆರಂಭಿಸಿದ್ದರು. ನಿಮ್ಮ ಮೇಲೆ ಅತ್ಯಾಚಾರದ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿ ಟಿವಿ ಚಾನೆಲ್ ಗಳಲ್ಲಿ ಪ್ರಚಾರ ಮಾಡುತ್ತೇವೆ ಎಂದು ಬೆದರಿಸಿದರು.
ಸುಮ್ಮನಿರಬೇಕೆಂದರೆ 20 ಲಕ್ಷ ರೂಪಾಯಿ ನೀಡುವಂತೆಯೂ ಬೇಡಿಕೆ ಇಟ್ಟರು. ಬೆದರಿಕೆಗೆ ಮಣಿದ ರಾಘವನ್ ಆರೋಪಿಗಳಿಗೆ ಕಂತಿನಲ್ಲಿ 20 ಲಕ್ಷ ರೂಪಾಯಿಗಳನ್ನು ನೀಡಿದರು.

ಇದರಿಂದ ಮತ್ತಷ್ಟು ಉತ್ತೇಜಿತರಾದ ಆ ಆರೋಪಿಗಳು ಮೂರು ತಿಂಗಳ ನಂತರ ಮತ್ತೆ ರಾಘವನ್ ಅವರಿಗೆ ಕರೆ ಮಾಡಿ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟರು. ಇವರ ಕರೆಯನ್ನು ರೆಕಾರ್ಡ್ ಮಾಡಿಕೊಂಡಿದ್ದ ರಾಘವನ್ ಅದನ್ನು ಮಂಡ್ಯದ ಪೊಲೀಸರಿಗೆ ಒಪ್ಪಿಸಿದರು. ಅದರಂತೆ ಪೊಲೀಸರ ಸೂಚನೆ ಮೇರೆಗೆ ಆರೋಪಿಗಳಿಗೆ ಹಣ ನೀಡುವುದಾಗಿ ಮದ್ದೂರಿಗೆ ಮಂಗಳವಾರ, ನವೆಂಬರ್ 12ರಂದು ಕರೆಸಿಕೊಂಡಿದ್ದಾರೆ. ಹಣ ಪಡೆಯಲು ಮೂವರು ಆರೋಪಿಗಳು ಬಂದಾಗ ಅವರನ್ನು ಬಂಧಿಸಲಾಗಿದೆ.
ಆರೋಪಿಗಳು ಈ ಹಿಂದೆ ವಸೂಲಿ ಮಾಡಿದ್ದ ಹಣದಲ್ಲಿ 13.77 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications