ಟಿಪ್ಪು ಜಯಂತಿ ಆಚರಣೆ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ, ಪಾಲಿಸಬೇಕಾದ ಆದೇಶಗಳೇನು..?
ಮಂಡ್ಯ, ನವೆಂಬರ್ 10: ತೀವ್ರ ವಿವಾದಗಳ ನಡುವೆಯೇ ಟಿಪ್ಪು ಜಯಂತಿ ಆಚರಣೆಗೆ ನಡೆಯುತ್ತಿದ್ದು, ಟಿಪ್ಪು ವಕ್ಫ್ ಎಸ್ಟೇಟ್ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು ವಿವಾದದ ಹಿನ್ನೆಲೆಯಲ್ಲಿ 2019ರಲ್ಲೇ ಹಿಂಪಡೆಯಲಾಗಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಈ ಬಾರಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ತಿಳಿಸಲಾಗಿತ್ತು.

ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆ ಇಲ್ಲದ ಕಾರಣ ಟಿಪ್ಪು ವಕ್ಫ್ ಎಸ್ಟೇಟ್ ಇಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ತಹಶೀಲ್ದಾರ್ರ ಆದೇಶದಲ್ಲಿ ಏನಿದೆ..?
ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ , ಯಾವುದೇ ಘೋಷಣೆ ಕೂಗದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಟಿಪ್ಪು ಜಯಂತಿ ಆಚರಣೆಯಲ್ಲಿ ಸರ್ಕಾರದ ನಿಲುವೇನು..?
ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಮತ್ತೆ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ತಿಳಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications