ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

|
Google Oneindia Kannada News

ಮಂಡ್ಯ, ನವೆಂಬರ್ 16: ಮಂಡ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶಿವನಸಮುದ್ರದಲ್ಲಿ ವಯರ್‌ನಲ್ಲಿ ಕಟ್ಟಿದ ಸ್ಥಿತಿಯಲ್ಲಿ ಯುವಕ-ಯುವತಿಯ ಶವ ಪತ್ತೆಯಾಗಿದೆ.

ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ

ಮಾನಕ್ಕಾಗಿ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ನವ ದಂಪತಿ ತಮಿಳುನಾಡಿನ ಹೊಸೂರು ಜಿಲ್ಲೆಯ ಕೃಷ್ಣಗಿರಿಯವರು ಎಂದು ತಿಳಿದುಬಂದಿದೆ, ನವ ದಂಪತಿಯನ್ನು ಯುವತಿಯ ಅಪ್ಪ, ಚಿಕ್ಕಪ್ಪ ಅಣ್ಣಂದಿರು ಭೀಕರವಾಗಿ ಕೊಲೆ ಮಾಡಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

ಪತ್ರಕರ್ತನ ನಿಗೂಢ ನಾಪತ್ತೆ, ರಾಯಭಾರ ಕಚೇರಿಯಲ್ಲೊಂದು ಥ್ರಿಲ್ಲರ್ ಘಟನೆ! ಪತ್ರಕರ್ತನ ನಿಗೂಢ ನಾಪತ್ತೆ, ರಾಯಭಾರ ಕಚೇರಿಯಲ್ಲೊಂದು ಥ್ರಿಲ್ಲರ್ ಘಟನೆ!

ಕಳೆದೊಂದು ವಾರದ ಹಿಂದೆ ಹತ್ಯೆ ಮಾಡಿ ಹೊಸೂರಿನಿಂದ ಶಿವನಸಮುದ್ರದ ಬಳಿ ಕಾವೇರಿ ನದಿಗೆ ಶವಗಳನ್ನು ಬಿಸಾಡಿರಬಹುದು ಎನ್ನಲಾಗಿದೆ. ಮೂರು ದಿನಗಳ ಹಿಂದೆ ಯುವಕನ ಶವ ಪತ್ತೆಯಾಗಿತ್ತು, ಯುವತಿ ಶವ ಗುರುವಾರ ಪತ್ತೆಯಾಗಿದೆ ಪ್ರಕರಣದ ಬಗ್ಗೆ ಬೆಳಕವಾಡಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ,

ಆನ್ ಲೈನ್ ಗೇಮ್ ಚಟಕ್ಕೆ ಪಾಲಕರನ್ನೇ ಕೊಂದ ಮಗ! ಆನ್ ಲೈನ್ ಗೇಮ್ ಚಟಕ್ಕೆ ಪಾಲಕರನ್ನೇ ಕೊಂದ ಮಗ!

TN newly married couple found dead in Shivanasamudram

ಅನ್ಯ ಧರ್ಮದ ಯುವಕನನ್ನು ಪ್ರೀತಿಸಿ ಮದುವೆ ಆಗಿದ್ದಕ್ಕೆ ಕೋಪಗೊಂಡು ದಂಪತಿಯನ್ನು ಕೊಲೆ ಮಾಡಿರಬಹುದು. ಗುರುವಾರ ಕೃಷ್ಣಗಿರಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಜೋಡಿಕೊಲೆ ಆರೋಪಿಗಳನ್ನು ಶುಕ್ರವಾರ ಸಂಜೆ ಮಂಡ್ಯಕ್ಕೆ ಪೊಲೀಸರು ಕರೆ ತರಲಿದ್ದಾರೆ.

English summary
Very few days after the marriage couple were found dead at Shivanasamudram in Mandya district. The couple were from Krishnagiri district of Tamil Nadu and sources said there were married without their parents consent and suspected it was honor killing
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X