ಮಂಡ್ಯದಲ್ಲಿ ಮತ್ತೊಂದು ಬಸ್ ದುರಂತ, 40 ಜನರಿಗೆ ಗಾಯ
ಮಂಡ್ಯ, ಮಾರ್ಚ್ 03 : ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಬಸ್ ದುರಂತ ನಡೆದಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಉರುಳಿ ಬಿದ್ದಿದ್ದು, 40 ಜನರು ಗಾಯಗೊಂಡಿದ್ದಾರೆ.
ಭಾನುವಾರ ಮದ್ದೂರು ಹೊರವಲಯದ ಐಶ್ವರ್ಯ ಶಾಲೆಯ ಬಳಿ ಪಶ್ಚಿಮ ಬಂಗಾಳದ ಪ್ರವಾಸಿಗರ ಬಸ್ ಉರುಳಿ ಬಿದ್ದಿದೆ. 40 ಜನರು ಪ್ರಯಾಣಿಕರು ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ ಮದ್ದೂರು ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಸ್ಸನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್ಗೆ ಕರೆ ಮಾಡಿ ಆಸ್ಪತ್ರೆಗೆ ಕಳುಹಿಸಿದರು.

ಅಪಘಾತದಿಂದಾಗಿ ಕೆಲವು ಹೊತ್ತು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥವಾಗಿತ್ತು. ಮದ್ದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಮಂಡ್ಯ ಜಿಲ್ಲೆಯ ಕನಗನಮರಡಿ ಸಮೀಪ ಖಾಸಗಿ ಬಸ್ ನಾಲೆಗೆ ಉರುಳಿ ಬಿದ್ದು 30 ಜನರು ಮೃತಪಟ್ಟಿದ್ದರು. ಚಾಲಕನ ನಿಯಂತ್ರಣ ತಪ್ಪಿ ಬಸ್ ನಾಲೆಗೆ ಉರುಳಿ ಬಿದ್ದಿದೆ.












Click it and Unblock the Notifications