ಸಾವಿನ ತಾಣವಾಗಿ ಮಾರ್ಪಾಡಾದ ಪ್ರವಾಸಿ ತಾಣ ಮುತ್ತತ್ತಿ
ಮಂಡ್ಯ, ಜನವರಿ 21: ಮಳವಳ್ಳಿ ತಾಲೂಕಿನ ಪ್ರವಾಸಿ ತಾಣವಾದ ಮುತ್ತತ್ತಿ ಇತ್ತೀಚೆಗಿನ ದಿನಗಳಲ್ಲಿ ಸಾವಿನ ತಾಣವಾಗಿ ಮಾರ್ಪಾಡಾಗುತ್ತಿದೆ. ಇಲ್ಲಿನ ಸುಂದರ ನೈಸರ್ಗಿಕ ಸೌಂದರ್ಯವನ್ನು ಆಸ್ವಾದಿಸಲು ಬರುವ ಪ್ರವಾಸಿಗರು ಈಜಲು, ಸ್ನಾನ ಮಾಡಲು ಕಾವೇರಿ ನದಿಗಿಳಿಯುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವುದು ಮೇಲಿಂದ ಮೇಲೆ ನಡೆಯುತ್ತಿದ್ದು ಭಯಪಡುವಂತಾಗಿದೆ.
ಮುತ್ತತ್ತಿಗೆ ಬರುವ ಪ್ರವಾಸಿಗರು ಇಲ್ಲಿನ ದೇವಾಲಯಕ್ಕೆ ಭೇಟಿ ನೀಡಿ ಮುತ್ತತ್ತಿರಾಯನ ದರ್ಶನ ಮಾಡಿಕೊಂಡು ಕಾವೇರಿ ನದಿಯ ವಿಹಂಗಮ ನೋಟ ನೋಡಿಕೊಂಡು ಹಿಂತಿರುಗಬೇಕು. ಆದರೆ ಈ ತಾಣ ಅಪಾಯ ಎಂಬ ಅರಿವಿದ್ದರೂ ಕಾವೇರಿ ನದಿಯಲ್ಲಿ ಸ್ನಾನ ಮಾಡುವ, ಈಜುವ ಸಾಹಸಕ್ಕಿಳಿಯುತ್ತಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುವುದು ಸಾಮಾನ್ಯವಾಗಿದೆ.
ವರ್ಷಕ್ಕೆ ಹತ್ತಾರು ಮಂದಿ ಒಂದಲ್ಲ ಒಂದು ಕಾರಣಕ್ಕೆ ಇಲ್ಲಿ ಸಾವಿಗೆ ಶರಣಾಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಇದೀಗ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲ್ ಪೇಟೆ ಗ್ರಾಮದ ನಿವಾಸಿ ಗಂಗಾಧರಪ್ಪ ಎಂಬುವರ ಪುತ್ರ ಯೋಗಿ ಸಿದ್ದಲಿಂಗೇಶ (26) ನೀರಿನಲ್ಲಿ ಮುಳುಗಿ ಮೃತಪಟ್ಟವನಾಗಿದ್ದಾನೆ. ಈತ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದನಲ್ಲದೆ ಚಾಮರಾಜೇಪೇಟೆಯಲಿರುವ ಪಿಜಿಯೊಂದರಲ್ಲಿ ವಾಸವಾಗಿದ್ದನು.
ವೀಕೆಂಡ್ ಮಸ್ತಿಗಾಗಿ ಈತ ತನ್ನ ಎಂಟು ಮಂದಿ ಸ್ನೇಹಿತರೊಂದಿಗೆ ಮುತ್ತತ್ತಿಗೆ ಬಂದಿದ್ದನು. ಇಲ್ಲಿನ ಮುತ್ತತ್ತಿರಾಯನಿಗೆ ಪೂಜೆ ಸಲ್ಲಿಸಿದ ಬಳಿಕ ಹಿಂತಿರುಗದೆ ಇಲ್ಲಿಯೇ ಕೆಲ ಸಮಯ ಕಳೆದಿದ್ದಾರೆ. ಈ ಸಂದರ್ಭ ಇವರಿಗೆ ಕಾವೇರಿ ನದಿಯಲ್ಲಿ ಈಜುವ ಬಯಕೆಯಾಗಿದ್ದು ಅದರಂತೆ ನೀರಿನಲ್ಲಿ ಈಜಾಡಿದ್ದಾರೆ. ಈ ವೇಳೆ ಸಿದ್ದಲಿಂಗೇಶ ಆಕಸ್ಮ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಜತೆಗಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ಬಳಿಕ ವಾರಾಸುದಾರರಿಗೆ ನೀಡಿದ್ದಾರೆ. ಅಪಾಯದ ಬಗ್ಗೆ ತಿಳಿಸಿದರೂ ಕೆಲವರು ತಮ್ಮ ಮಾತು ಕೇಳದೆ ನದಿಗಿಳಿಯುತ್ತಾರೆ ಎಂಬುದಾಗಿ ಸ್ಥಳೀಯರು ಹೇಳುತ್ತಿದ್ದು, ಇನ್ನಾದರೂ ಮುತ್ತತ್ತಿಗೆ ವೀಕೆಂಡ್ ಮೋಜು ಮಸ್ತಿ ಮಾಡಲೆಂದು ದಯವಿಟ್ಟು ಯಾರೂ ಬರಬೇಡಿ, ಭಕ್ತರಾಗಿ, ಪ್ರವಾಸಿಗರಾಗಿ ಇಲ್ಲಿಗೆ ಬಂದರೆ ದೇವರ ದರ್ಶನ ಮಾಡಿಕೊಂಡು, ನಿಸರ್ಗ ಸೌಂದರ್ಯವನ್ನು ಆಸ್ವಾದಿಸಿಕೊಂಡು ಹಿಂತಿರುಗಿ, ಬದಲಿಗೆ ಕಾವೇರಿ ನದಿಯಲ್ಲಿ ಈಜುವ, ಸ್ನಾನ ಮಾಡುವ ಪ್ರಯತ್ನ ಮಾಡಬೇಡಿ ಎನ್ನುವುದು ಅವರ ಮನವಿಯಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications