ಕೆಆರ್ಎಸ್ ಬೃಂದಾವನದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ವಿಫಲ: ಪ್ರವಾಸಿಗರಿಗೆ ಹೊರಡಿಸಿದ್ದ ನಿರ್ಬಂಧ ವಾಪಸ್
ಮಂಡ್ಯ, ನವೆಂಬರ್, 30: ಕಳೆದೊಂದು ತಿಂಗಳ ಹಿಂದೆ ಕೆಆರ್ಎಸ್ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ವಿಫಲವಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಬೃಂದಾವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಪರಿಣಾಮ 25 ದಿನಗಳಿಂದ ಸುಮಾರು 70 ಲಕ್ಷ ರೂಪಾಯಿ ನಷ್ಟ ಉಂಟಾಗಿದ್ದು, ಈ ನಷ್ಟದಿಂದ ತಪ್ಪಿಸಿಕೊಳ್ಳಲು ಇದೀಗ ಬೃಂದಾವನ ಪ್ರವೇಶವನ್ನು ಸಾರ್ವಜನಿಕರಿಗೆ ಬುಧವಾರದಿಂದ ಮುಕ್ತಗೊಳಿಸಲಾಗಿದೆ.
ಚಿರತೆ ಸೆರೆ ಕಾರ್ಯಾಚರಣೆ ವಿಫಲ
ಬೃಂದಾವನದೊಳಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಗಳೆಲ್ಲವೂ ವಿಫಲವಾಗಿದೆ. ಅಕ್ಟೋಬರ್ 22 ಹಾಗೂ ಅಕ್ಟೋಬರ್ 28ರಂದು ಎರಡು ಬಾರಿ ಚಿರತೆ ಕಾಣಿಸಿಕೊಂಡಿತ್ತು. ಆಗಿನಿಂದ ಚಿರತೆ ಸೆರೆಗೆ ಬೃಂದಾವನದ ಎಂಟು ಕಡೆ ಬೋನ್ ಇಟ್ಟು ಹಲವೆಡೆ ನಾಯಿಯನ್ನು ಕಟ್ಟಿಹಾಕಲಾಗಿತ್ತು. ಆದರೂ ಕೂಡ ಚಿರತೆ ಬರಲೇ ಇಲ್ಲ, ಬೋನಿಗೆ ಬೀಳಲೂ ಇಲ್ಲ. ಬೃಂದಾವನದ ಹೊರಗೆ ಬೆಳೆದಿದ್ದ ಪೊದೆಗಳನ್ನು ತೆರವುಗೊಳಿಸಿದರೂ ಕೂಡ ಚಿರತೆ ಕಾಣಸಿಗಲಿಲ್ಲ. ಅರಣ್ಯ ಇಲಾಖೆಯ 50 ಸಿಬ್ಬಂದಿ ಜೊತೆಗೂಡಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರೂ ಕೂಡ ಫಲ ಸಿಗದಂತಾಗಿದೆ. ಹೀಗೆ ಚಿರತೆ ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳನ್ನು ನಿದ್ದೆಗೆಡುವಂತೆ ಮಾಡಿತ್ತು.
ಕೊನೆಗೂ ಸೆರೆಯಾಗದ ಚಿರತೆ
ಕೊನೆಗೆ ವನ್ಯಜೀವಿ ವಲಯದ ಅಧಿಕಾರಿಗಳಿಂದ ಡ್ರೋನ್ ಕಾರ್ಯಾಚರಣೆ ನಡೆಸಿ ಚಿರತೆ ಇರುವ ಜಾಗವನ್ನು ಪತ್ತೆಹಚ್ಚುವ ಮತ್ತು ಸೆರೆಹಿಡಿಯುವ ನಿರ್ಧಾರವನ್ನು ಮಾಡಿದ್ದರು. ಇತ್ತ ತಿಂಗಳಿಂದ ಚಿರತೆಯೂ ಕೆಆರ್ಎಸ್ ಸುತ್ತಮುತ್ತ ಎಲ್ಲೂ ಕಾಣಿಸಿಕೊಳ್ಳಲಿಲ್ಲ. ಕಳೆದ 25 ದಿನಗಳಿಂದ ಚಿರತೆ ಎಲ್ಲೂ ಕಾಣಿಸಿಕೊಳ್ಳದಿದ್ದರಿಂದ ಧೈರ್ಯಗೊಂಡ ಅರಣ್ಯ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮದ ಅಕಾರಿಗಳು ಬೃಂದಾವನ ಪ್ರವೇಶವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದ್ದಾರೆ. ಪ್ರವಾಸಿಗರಿಲ್ಲದೆ ಭಣಗುಡುತ್ತಿದ್ದ ಬೃಂದಾವನದಲ್ಲಿ ಬುಧವಾರದಿಂದ ಮತ್ತೆ ಪ್ರವಾಸಿಗರಿಂದ ಕಲರವ ಶುರುವಾಗಿದೆ. ಸಾರ್ವಜನಿಕರು ಕೂಡ ಚಿರತೆಯ ಆತಂಕ, ಭಯವಿಲ್ಲದೆ ಬೃಂದಾವನ ಪ್ರವೇಶಿಸಿ ಸಂತಸದಿಂದ ಕಾಲ ಕಳೆಯುತ್ತಿದ್ದ ದೃಶ್ಯಗಳು ಕಂಡುಬಂದವು.

ಕೆಆರ್ಎಸ್ ಬೃಂದಾವನಕ್ಕೆ ಒಟ್ಟು ನಷ್ಟ?
25 ದಿನಗಳಿಂದ ಸಾರ್ವನಿಕರಿಗೆ ಬೃಂದಾವನ ಪ್ರವೇಶ ನಿಷೇಧಿಸಿದ್ದರಿಂದ ಸುಮಾರು 70 ಲಕ್ಷ ರೂಪಾಯಿವರೆಗೆ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಬೃಂದಾವನ ಪ್ರವೇಶ ಶುಲ್ಕ ಹಾಗೂ ವಾಹನ ಪಾರ್ಕಿಂಗ್ನಿಂದ ಬರುತ್ತಿದ್ದ ನಿತ್ಯ ಲಕ್ಷಾಂತರ ರೂಪಾಯಿ ಕಾವೇರಿ ನೀರಾವರಿ ನಿಗಮದ ಖಜಾನೆಗೆ ಹೋಗುತ್ತಿತ್ತು. ಚಿರತೆ ಕಾಣಿಸಿಕೊಂಡು ಸೃಷ್ಟಿಸಿದ ಆತಂಕದಿಂದ ಕೆಆರ್ಎಸ್ ಬೃಂದಾವನವನ್ನು 25 ದಿನ ಮುನ್ನೆಚ್ಚರಿಕೆಯಾಗಿ ಬಂದ್ ಮಾಡಲಾಗಿತ್ತು.

ಕಳೆದ ತಿಂಗಳು ವಾರದೊಳಗೆ ಎರಡು ಬಾರಿ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಚಿರತೆ 20 ದಿನಗಳಿಂದ ಬೃಂದಾವನದ ಸುತ್ತ ಮುತ್ತ ಸುಳಿದಾಡಲೂ ಇಲ್ಲ. ಅಕ್ಕ-ಪಕ್ಕದ ಗ್ರಾಮಗಳಲ್ಲಿ ಕಾಣಿಸಿಕೊಂಡ ಕುರುಹೂ ಸಿಗಲಿಲ್ಲ. ಇದರಿಂದ ಚಿರತೆ ಮೂಲ ಸ್ಥಾನಕ್ಕೆ ತೆರಳಿರಬಹುದು ಎಂಬ ದೃಢ ವಿಶ್ವಾಸದೊಂದಿಗೆ ಬೃಂದಾವನಕ್ಕೆ ಪ್ರವೇಶ ಕಲ್ಪಿಸಲಾಗಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications